ವಿರೋಧಿ ಪಾಳಯದ ಅತೃಪ್ತರ ಓಲೈಕೆ


Team Udayavani, May 1, 2018, 4:10 PM IST

dvg-1.jpg

ದಾವಣಗೆರೆ: ವಿಧಾನಸಭಾ ಚುನಾವಣೆಯ ಮತದಾನಕ್ಕೆ ಹನ್ನೆರಡು ದಿನ ಇರುವಂತೆ ರಾಜಕೀಯ ನಾಯಕರು ಮತದಾರರ ಸೆಳೆಯುವ ವಿಭಿನ್ನ ತಂತ್ರಗಾರಿಕೆಗೆ ಮುಂದಾಗುತ್ತಿದ್ದಾರೆ. ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಜಯ ಸಾಧಿಸಲು ಇದೀಗ ಹೊಸ ಹೊಸ ದಾಳ ಪ್ರಯೋಗ ಆರಂಭಿಸಿದ್ದಾರೆ.

ಬಹಿರಂಗ ಸಭೆ, ಮನೆ ಮನೆಗೆ ತೆರಳಿ ಮತಯಾಚನೆ, ಆಪ್ತರು, ಸಂಬಂಧಿಕರನ್ನು ಮತ ಪ್ರಚಾರಕ್ಕೆ ಕರೆ ತರುವುದು ಇದುವರೆಗೆ ನಡೆದಿತ್ತು. ಇದೀಗ ತಮ್ಮ ಲೆಕ್ಕಾಚಾರದಂತೆ ಗೆಲುವಿನ ಸಂಖ್ಯೆ ಮತ ಪಡೆಯಲು ವಿರೋಧಿ ಪಾಳಯದ ಬಲ ಕುಗ್ಗಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಾಂಗ್ರೆಸ್‌, ಬಿಜೆಪಿ ಪಕ್ಷದ ನಾಯಕರು ಈ ವಿಷಯದಲ್ಲಿ ಮುಂದಿದ್ದಾರೆ.

ಸೋಮವಾರ ಮತಪ್ರಚಾರದ ಜೊತೆಗೆ ವಿರೋಧಿ ಪಾಳಯದ ಮುಖಂಡರು, ಪ್ರತೀ ಬಾರಿಯ ಚುನಾವಣೆಯಲ್ಲಿ ಸ್ವಪಕ್ಷದಲ್ಲಿದ್ದರೂ ಮುನಿಸಿಕೊಂಡು ಮತ ಪ್ರಚಾರದಿಂದ ದೂರ ಉಳಿದವರನ್ನು ಮನವೊಲಿಸಿ, ಜಯದ ಸೂತ್ರ ಹೆಣೆಯುತ್ತಿದ್ದಾರೆ. 

ಕಾಂಗ್ರೆಸ್‌ನ ದಕ್ಷಿಣದ ಅಭ್ಯರ್ಥಿ ಶಾಮನೂರು ಶಿವಶಂಕರಪ್ಪ, ಉತ್ತರದ ಅಭ್ಯರ್ಥಿ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಈಗಾಗಲೇ ಪಕ್ಷದಲ್ಲಿದ್ದರೂ ಮತ ಪ್ರಚಾರದಲ್ಲಿ ಅಷ್ಟಾಗಿ ಗುರುತಿಸಿಕೊಳ್ಳದವರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ ನಲ್ಲಿದ್ದುಕೊಂಡು ಪದೇ ಪದೇ ಟಿಕೆಟ್‌ಗೆ ಯತ್ನಿಸಿ, ಪ್ರತೀ ಚುನಾವಣೆಯಲ್ಲಿ ವಿರೋಧಿ ಪಾಳಯದಲ್ಲಿರುತ್ತಿದ್ದ ಮುಸ್ಲಿಂ ಮುಖಂಡ ಸೈಯದ್‌ ಸೈಫುಲ್ಲಾ, ನಾನಾ ಕಾರಣಗಳಿಂದ ಪಕ್ಷದಲ್ಲಿದ್ದರೂ ರಾಜಕೀಯದಿಂದ ದೂರ ಇದ್ದ ಕಾಂಗ್ರೆಸ್‌ನ ಮಾಜಿ ಶಾಸಕ ಯಜಮಾನ್‌ ಮೋತಿ ವೀರಣ್ಣರನ್ನು ತಮ್ಮ ಪಾಳಯಕ್ಕೆ ಸೆಳೆದುಕೊಂಡಿದ್ದಾರೆ. ಸೋಮವಾರ ಸಹ ಪ್ರಚಾರದ ಜೊತೆಗೆ ಇಂತಹುದ್ದೇ ಕಾರ್ಯದಲ್ಲಿ ಮಲ್ಲಿಕಾರ್ಜುನ್‌ ತೊಡಗಿಸಿಕೊಂಡರು. ಇತ್ತ ಬಿಜೆಪಿಯಲ್ಲೂ ಇಂತಹುದ್ದೇ ಯತ್ನ ನಡೆಯುತ್ತಿದೆ. ಉತ್ತರ ಕ್ಷೇತ್ರ ಅಭ್ಯರ್ಥಿ ಎಸ್‌.ಎ. ರವೀಂದ್ರನಾಥ್‌ ಕಾಂಗ್ರೆಸ್‌ ಪಾಳಯದ ಅತೃಪ್ತರನ್ನು ತಮ್ಮತ್ತ ಸೆಳೆಯುತ್ತಿದ್ದಾರೆ. ಪ್ರಚಾರದ ಜೊತೆಗೆ ಹಲವು ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡು, ಯಾವುದೇ ಸ್ಥಾನಮಾನ ಪಡೆಯದೇ ಇರುವ ನಾಯಕರನ್ನು ತಮ್ಮತ್ತ ಸೆಳೆದಿದ್ದಾರೆ.
 
ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಯಶವಂತರಾವ್‌ ಜಾಧವ್‌ ಈ ಬಾರಿ ಮುಸ್ಲಿಂ ಮತ ಸೆಳೆಯಲು ಹೊಸದೊಂದು ತಂತ್ರಗಾರಿಕೆ ಹೆಣೆದಿದ್ದಾರೆ. ಪ್ರತೀ ಚುನಾವಣೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ ಬಿಜೆಪಿಗೆ ಮತಗಳೇ ಬೀಳದೆ ಇರುವುದನ್ನು ಮನಗಂಡು ಈ ಬಾರಿ ಹೇಗಾದರೂ ಮಾಡಿ ಕನಿಷ್ಠ ಆ ಪ್ರದೇಶದಲ್ಲಿ 5 ಸಾವಿರ ಮತ ಪಡೆಯಲು ಪ್ಲಾನ್‌ ಹಾಕಿಕೊಂಡಿದ್ದಾರೆ.

ಸುಮಾರು 30 ಬೂತ್‌ಗಳನ್ನು ಹೊಂದಿರುವ ಈ ಪ್ರದೇಶದಲ್ಲಿನ ಯುವಕರ ಸಮೂಹದೊಂದಿಗೆ ಜಾಧವ್‌ ನಿರಂತರ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್‌ ಗಾಗಿ ದುಡಿದ ಹಿರಿಯ ಮುಸ್ಲಿಂ ಮುಖಂಡರನ್ನು ಖುದ್ದು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. 

ಇನ್ನು ದಕ್ಷಿಣ, ಉತ್ತರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಗಳು ಮತದಾರರ ಮನವೊಲಿಕೆಯ ಕಸರತ್ತು ಮುಂದುವರಿಸಿದ್ದಾರೆ. ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಜೆ. ಅಮಾನುಲ್ಲಾ ಖಾನ್‌ ಚೌಡೇಶ್ವರಿ ನಗರ, ಬಸವ ಬುದ್ಧ ಭೀಮಾ ನಗರ, ಗಾಂಧಿನಗರ ಭಾಗದಲ್ಲಿ ಸಂಚರಿಸಿ, ಮತಯಾಚನೆ ಮಾಡಿದರೆ ಉತ್ತರದ ಅಭ್ಯರ್ಥಿ ಆನಂದ ಜಯನಗರ, ಸರಸ್ವತಿ ನಗರ ಭಾಗದಲ್ಲಿ ಮತ ಬೇಟೆ ನಡೆಸಿದರು. 

ಮಾಯಕೊಂಡ ಕ್ಷೇತ್ರದಲ್ಲಿ ಸೋಮವಾರ ಪ್ರಚಾರದ ಭರಾಟೆ ಜೋರಾಗಿತ್ತು. ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಸ್‌. ಬಸವಂತಪ್ಪ ಕಾರಿಗನೂರು, ಕತ್ತಲಗೆರೆ, ರೆಡ್ಡಿಹಳ್ಳಿ, ಬೆಳಲಗೆರೆ ಭಾಗದಲ್ಲಿ ಮತಪ್ರಚಾರ ನಡೆಸಿದರು. ಇವರಿಗೆ ಬಸವರಾಜ ಗೌಡ, ಬಿ. ಕರಿಬಸಪ್ಪ, ರುದ್ರಪ್ಪ, ಚಂದ್ರಪ್ಪ ಇತರೆ ನಾಯಕರು ಸಾಥ್‌ ನೀಡಿದರು. 

ಜೆಡಿಯು ಅಭ್ಯರ್ಥಿ ಬಸವರಾಜ ನಾಯ್ಕ ಮಾಯಕೊಂಡ, ಹೆದೆ ಗ್ರಾಮಗಳ ಸುತ್ತಮುತ್ತ ಸಂಚರಿಸಿ, ಮತ ಬೇಟೆ ನಡೆಸಿದರು. ಬಿಜೆಪಿಯ ಪ್ರೊ. ಎನ್‌. ಲಿಂಗಣ್ಣ, ಪಕ್ಷೇತರ ಅಭ್ಯರ್ಥಿ ಎಚ್‌.ಆನಂದಪ್ಪ ತ್ಯಾವಣಿಗೆ ಭಾಗದಲ್ಲಿ ಮತಯಾಚಿಸಿದರು. 

ಹರಿಹರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಪಿ. ಹರೀಶ್‌ ಹೊಳೆಸಿರಿಗೆರೆ. ಮಲ್ಲನಾಯ್ಕನಹಳ್ಳಿ, ಕುಣಿಬೆಳಕೆರೆ, ಹರಿಹರ ನಗರದಲ್ಲಿ ಪ್ರಚಾರ ಕೈಗೊಂಡರು. ಜೆಡಿಎಸ್‌ನ ಎಚ್‌.ಎಸ್‌. ಶಿವಶಂಕರ್‌ ದೇವರಬೆಳಕೆರೆ, ಬೂದಿಹಾಳ್‌, ಹರಳಹಳ್ಳಿ, ಹರಿಹರ ಪಟ್ಟಣದಲ್ಲಿ ಪ್ರಚಾರ ಕೈಗೊಂಡರು. ಕಾಂಗ್ರೆಸ್‌ ಅಭ್ಯರ್ಥಿ ಎಸ್‌. ರಾಮಪ್ಪ ಬನ್ನಿಕೋಡು, ಷಂಷೀಪುರ, ಕೆ. ಬೇವಿನಹಳ್ಳಿ, ಕಡ್ಲೆಗೊಂದಿ ಭಾಗದಲ್ಲಿ ಮತಯಾಚಿದರು.

ಹೊನ್ನಾಳಿಯಲ್ಲಿ ಮಾಜಿ ಸಚಿವ, ಬಿಜೆಪಿ ಅಭ್ಯರ್ಥಿ ಎಂ.ಪಿ. ರೇಣುಕಾಚಾರ್ಯ ಬೆಳಗುತ್ತಿಗೆ ಹೋಬಳಿಯ ಕಡದಕಟ್ಟೆ, ಹಿರೇಮಠ, ದೇವನಾಯಕನಹಳ್ಳಿ ಭಾಗದಲ್ಲಿ ಪ್ರಚಾರ ಕೈಗೊಂಡರು. ಕಾಂಗ್ರೆಸ್‌ನ ಶಾಂತನಗೌಡ ಗೊಲ್ಲರಹಳ್ಳಿ, ಕುಂಕುವ, ತಿಮ್ಲಾಪುರ, ಹಿರೇಮಠ ಗ್ರಾಮಗಳಲ್ಲಿ ಮತದಾರರ ಮನವೊಲಿಸುವ ಕಸರತ್ತು ನಡೆಸಿದರು. ಬಿಎಸ್‌ಪಿ ಅಭ್ಯರ್ಥಿ ಸತ್ಯನಾರಾಯಣ ರಾವ್‌ ಕೊಠಾರಿ ಹೊನ್ನಾಳಿ ಪಟ್ಟಣದಲ್ಲಿ ಪ್ರಚಾರ ನಡೆಸಿದರು.

ಹರಪನಹಳ್ಳಿಯಲ್ಲಿ ಕಾಂಗ್ರೆಸ್‌ನ ಎಂ.ಪಿ. ರವೀಂದ್ರ, ಜೆಡಿಎಸ್‌ನ ಎನ್‌. ಕೊಟ್ರೇಶ್‌, ಬಿಜೆಪಿಯ ಜಿ.ಕರುಣಾಕರ ರೆಡ್ಡಿ ಹರಪನಹಳ್ಳಿ ಪಟ್ಟಣದ ವಿವಿಧ ಭಾಗಗಳಲ್ಲಿ ಮತಬೇಟೆ ನಡೆಸಿದರು. ಜಗಳೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಪಿ. ರಾಜೇಶ್‌ ದೊಣ್ಣೆಹಳ್ಳಿ, ಮುಷ್ಟೂರು, ಕ್ಯಾಸನಹಳ್ಳಿ ಭಾಗದಲ್ಲಿ ಮತ ಬೇಟೆ ನಡೆಸಿದರು. ಜೆಡಿಎಸ್‌ನ ದೇವೇಂದ್ರಪ್ಪ ಜಗಳೂರು ಪಟ್ಟಣದಲ್ಲಿ ರೋಡ್‌ ಶೋ ನಡೆಸಿದರು. ಬಿಜೆಪಿಯ ಎಸ್‌.ವಿ. ರಾಮಚಂದ್ರ ಸೊಕ್ಕೆ ಹೋಬಳಿಯಲ್ಲಿ ಪ್ರಚಾರ ಕೈಗೊಂಡರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.