ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, May 12, 2020, 7:01 AM IST
ದಾವಣಗೆರೆ: ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ ಸೋಮವಾರ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ( ಎಐಟಿಯುಸಿ) ಕಾರ್ಯಕರ್ತರು ಬಳ್ಳಾರಿ ವಿಭಾಗ ಸಹಾಯಕ ಕಾರ್ಮಿಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಬಂಡವಾಳಶಾಹಿಗಳು, ಧನವಂತರಿಗೆ ಮಣಿದಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ 8 ಗಂಟೆಗಳ ಕೆಲಸವನ್ನು 12 ಗಂಟೆಗೆ ಹೆಚ್ಚಿಸಲು ಯತ್ನಿಸುತ್ತಿರುವುದು ಅತ್ಯಂತ ಖಂಡನೀಯ ಎಂದು ಸಂಘಟನೆ ಮುಖಂಡ ಎಚ್.ಕೆ. ರಾಮಚಂದ್ರಪ್ ಆಕ್ರೋಶ ವ್ಯಕ್ತಪಡಿಸಿದರು.
ದಿನದ 24 ಗಂಟೆಯಲ್ಲಿ 8 ಗಂಟೆ ಕೆಲಸ, 8 ಗಂಟೆ ಮನೋರಂಜನೆ, 8 ಗಂಟೆ ನಿದ್ದೆ… ಎಂದು ಬ್ರಿಟಿಷ್ ಕಾಲದಲ್ಲೇ ಹೋರಾಟ ನಡೆಸಿದರ ಪರಿಣಾಮ ಕಾರ್ಮಿಕರು ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಎಂಬ ನಿಯಮ ಜಾರಿಗೆ ತರಲಾಯಿತು. ಯಾವುದೇ ವ್ಯಕ್ತಿ 8 ಗಂಟೆಗಳ ಕಾಲ ಕ್ರಿಯಾಶೀಲರಾಗಿ ಕೆಲಸ ಮಾಡಬಲ್ಲರು ಎಂಬ ವೈಜ್ಞಾನಿಕ ಆಧಾರದಲ್ಲಿ ಸಮಯ ನಿಗದಿಪಡಿಸಿದೆ ಎಂದು ತಿಳಿಸಿದರು.
ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರ ಏಕಾಏಕಿ ಮತ್ತು ಅತ್ಯಂತ ತರಾತುರಿಯಲ್ಲಿ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ಮಾಡಿ 8 ಗಂಟೆಯ ಕೆಲಸದ ಅವಧಿಯನ್ನ 12 ಗಂಟೆಗೆ ಹೆಚ್ಚಳಕ್ಕೆ ಮುಂದಾಗಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣಕ್ಕೆ ಕಾರ್ಮಿಕ ಕಾಯ್ದೆ ತಿದ್ದುಪಡಿ ಪ್ರಸ್ತಾಪವನ್ನೇ ಕೈ ಬಿಡಬೇಕು. ಯಾವುದೇ ಒತ್ತಡಕ್ಕು ಮಣಿಯಬಾರದು, ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವಂತೆ ದಿನಕ್ಕೆ 8 ಗಂಟೆಗಳ ಕೆಲಸಕ್ಕೆ ಮಾತ್ರ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಮಹಾನಗರ ಪಾಲಿಕೆ ಮಾಜಿ ಸದಸ್ಯ ಆವರಗೆರೆ ಎಚ್.ಜಿ. ಉಮೇಶ್, ಆನಂದರಾಜ್, ಆವರಗೆರೆ ಚಂದ್ರು, ಆವರಗೆರೆ ವಾಸು, ರಂಗನಾಥ್, ಆರ್. ಸುರೇಶ್, ಎನ್.ಎಚ್. ರಾಮಪ್ಪ, ಎನ್.ಟಿ. ಬಸವರಾಜ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್