ಅಲ್ಪಸಂಖ್ಯಾತರ ಅನುದಾನ ಕಡಿತಕ್ಕೆ ವಿರೋಧ
Team Udayavani, Dec 8, 2020, 5:15 PM IST
ದಾವಣಗೆರೆ: ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನವನ್ನು ಕಡಿತಗೊಳಿಸಿರುವದನ್ನು ವಿರೋಧಿಸಿ ಮುಸ್ಲಿಂ ಚಿಂತಕರ ಚಾವಡಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳು ಹಿಂದುಳಿದಿರುವ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರಕಲ್ಯಾಣ ಇಲಾಖೆಯ ಮೂಲಕ ಸರ್ಕಾರ ಸಮುದಾಯಗಳ ಅಭಿವೃದ್ಧಿಗಾಗಿಜಾರಿಯಲ್ಲಿಟ್ಟಿರುವ ನೀತಿಗಳನ್ನು ಮುಸ್ಲಿಂಚಿಂತಕರ ಚಾವಡಿ ಸ್ವಾಗತಿಸುತ್ತದೆ. ಅಲ್ಪಸಂಖ್ಯಾತಸಮುದಾಯಗಳ ಆಭಿವೃದ್ಧಿ ಸಮಾನವಾಗಿ ಸಾಧ್ಯವಾಗುವವರೆಗೂ ಯಾವ ಯೋಜನೆಗಳೂ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳಬಾರದು ಎಂದು ಒತ್ತಾಯಿಸಿದರು.
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೂಲಕಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬುದ್ಧ, ಪಾರ್ಸಿಮತ್ತು ಜೈನ ಸಮುದಾಯಗಳ ಜನಪರಕಲ್ಯಾಣ ಯೋಜನೆಗಳಿಗೆ ನಿಗದಿಗೊಳಿಸಲಾದಅನುದಾನ ಕಡಿತಗೊಳಿಸಿರುವುದು ಖಂಡನೀಯ.ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಈ ಹಿಂದೆನಿಗದಿಗೊಳಿಸುತ್ತ ಬಂದಿರುವ ಅನುದಾನಕಡಿತಗೊಳಿಸಿದ್ದಲ್ಲದೆ ಹಲವು ಯೋಜನೆಗಳನ್ನುರದ್ದು ಮಾಡಲಾಗಿದೆ. 2020-21ನೇ ಸಾಲಿನ ಬಜೆಟ್ನಲ್ಲಿ 1177 ಕೋಟಿ ರೂ.ಗಳಷ್ಟಿದ್ದ ಅನುದಾನವನ್ನು ಕಡಿತಗೊಳಿಸಿ 1055 ಕೋಟಿ ರೂ.ಗಳಿಗೆ ನಿಗದಿಗೊಳಿಸಲಾಗಿದೆ. ಇತ್ತೀಚಿಗೆ ಮತ್ತೆ 50 ಕೋಟಿ ರೂ.ಅನುದಾನ ಕಡಿತಗೊಳಿಸಿದೆ ಎಂದು ಆಕ್ಷೇಪಿಸಿದರು.
ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಈಗಾಗಲೇ ಜಾರಿಯಲ್ಲಿರುವ ಎಲ್ಲ ಯೋಜನೆಗಳನ್ನುಮುಂದುವರೆಸಬೇಕು. ಅನುದಾನವನ್ನುಸಂಪೂರ್ಣವಾಗಿ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಚಿಂತಕರ ಚಾವಡಿ ರಾಜ್ಯ ಕಾರ್ಯದರ್ಶಿ
ಅನೀಸ್ ಪಾಷಾ, ಕೆ.ಬಿ. ಜಾಕೋಬ್, ಘನಿ ತಾಹಿರ್, ಕೆ. ಹನೀಫ್, ಸಲೀಂ ಬಾಯ್, ತಾರಿಕ್ ನಕಾಶ್, ಜಬೀವುಲ್ಲಾ ಖಾನ್, ಬಿ. ಖಲೀಲ್, ಮುಸ್ತಾಫಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್