ಹುಬ್ಬಳ್ಳಿಯತ್ತ ಸಾಗಿದ ಶಾಂತಿಯೆಡೆಗೆ ನಮ್ಮ ನಡಿಗೆ….


Team Udayavani, Sep 29, 2018, 11:56 AM IST

dvg-2.jpg

ದಾವಣಗೆರೆ: ಕೋಮುಗಲಭೆ, ಗೋ ರಕ್ಷಣೆ ಹೆಸರಲ್ಲಿನ ಹತ್ಯೆ, ಮಹಿಳೆಯರು ಮತ್ತು ಮಕ್ಕಳ ಮೇಲೆ ಸಾಮೂಹಿಕ ಅತ್ಯಾಚಾರ ನಿಲ್ಲಿಸುವ ಜೊತೆಗೆ ಶಾಂತಿ ವಾತಾವರಣ ಮರು ಸ್ಥಾಪನೆ ಆಗಬೇಕು. ದೇಶ ಮತ್ತು ಸಂವಿಧಾನದ ಉಳಿಯಬೇಕು ಎಂಬ ಉದ್ದೇಶದಿಂದ ಭಾರತೀಯ ಮಹಿಳಾ ಒಕ್ಕೂಟದ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಶಾಂತಿಯೆಡೆಗೆ ನಮ್ಮ ನಡಿಗೆ…ಜಾಥಾ ಶುಕ್ರವಾರ ನಗರಕ್ಕೆ ಆಗಮಿಸಿ, ಹುಬ್ಬಳ್ಳಿ ಕಡೆಗೆ ತೆರಳಿದೆ.

ಅನ್‌ಹಡ್‌ ಸಂಸ್ಥೆಯ ಶಬನಮ್‌ ಹಷ್ಮಿ ನೇತೃತ್ವದಲ್ಲಿ ಭಾರತೀಯ ಮಹಿಳಾ ಒಕ್ಕೂಟ, ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಎಡಪಂಥೀಯ ಮಹಿಳಾ ಸಂಘಟನೆಗಳು ಮತ್ತು ಮಹಿಳಾ ಪರ ಸಂಘಟನೆಗಳ 25ಕ್ಕೂ ಹೆಚ್ಚು ಮಹಿಳೆಯರು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು.
 
ಗಾಂಧಿ ವೃತ್ತದಲ್ಲಿ ಜಾಥಾ ಸ್ವಾಗತಿಸಿದ ಸಂದರ್ಭದಲ್ಲಿ ಅನ್‌ಹಡ್‌ ಸಂಸ್ಥೆಯ ಶಬನಮ್‌ ಹಷ್ಮಿ ಮಾತನಾಡಿ, ದೇಶದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ, ಕಿರುಕುಳ, ಅತ್ಯಾಚಾರ, ದಬ್ಟಾಳಿಕೆ ನಡೆಯುತ್ತಿವೆ.

ಅದಕ್ಕಿಂತಲೂ ಮುಖ್ಯವಾಗಿ ಸಂವಿಧಾನದ ಮೇಲೆ ದಾಳಿ ನಡೆಸಲಾಗುತ್ತಿದೆ. ಇದನ್ನೆಲ್ಲಾ ನೋಡಿಕೊಂಡು ಸುಮ್ಮನಿರಲಿಕ್ಕೆ ಆಗುವುದೇ ಇಲ್ಲ. ಇದೇ ಮೊದಲ ಬಾರಿಗೆ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು, ಚಿಂತಕಿಯರು ದೇಶ ಮತ್ತು ಸಂವಿಧಾನದ ಉಳಿವಿಗೆ ಆಗ್ರಹಿಸಿ ಜಾಗೃತಿ ಜಾಥಾ ಹಮ್ಮಿಕೊಂಡಿದ್ದೇವೆ. ದೇಶ ಮತ್ತು ಸಂವಿಧಾನದ ಉಳಿಯಬೇಕು. ಆ ನಿಟ್ಟಿನಲ್ಲಿ ಮಹಿಳೆಯರು ಒಳಗೊಂಡಂತೆ ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಮನವಿ ಮಾಡಿದರು. 

ಭಾರತೀಯ ಮಹಿಳಾ ಒಕ್ಕೂಟದ ರಾಜ್ಯ ಅಧ್ಯಕ್ಷೆ ಜ್ಯೋತಿ ಅನಂತ ಸುಬ್ಬರಾವ್‌ ಮಾತನಾಡಿ, ದೇಶ ಮತ್ತು ಸಂವಿಧಾನದ ಉಳಿಯಬೇಕು ಮತ್ತು ಮಹಿಳೆಯರು ಮತ್ತು ಮಕ್ಕಳ ಮೇಲೆ ಹಿಂಸಾಚಾರ ಕೊನೆಗಾಣಬೇಕು ಎಂದು ಒತ್ತಾಯಿಸಿ ಭಾರತೀಯ ಮಹಿಳಾ ಒಕ್ಕೂಟ, ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಎಡಪಂಥೀಯ ಮಹಿಳಾ ಸಂಘಟನೆಗಳು ಮತ್ತು ಮಹಿಳಾ ಪರ ಸಂಘಟನೆಗಳ ನೇತೃತ್ವದಲ್ಲಿ ಕೇರಳ, ತಮಿಳುನಾಡು, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ ಹಾಗೂ ದೆಹಲಿಯಿಂದಲೇ ಸೆ. 22ರಂದು
ಏಕಕಾಲದಲ್ಲಿ 5 ಜನಜಾಗೃತಿ ಜಾಥಾ ಹೊರಟಿವೆ.

ಅ.13 ರಂದು ನವದೆಹಲಿಯಲ್ಲಿ ಸೇರಲಿವೆ. ಶಬನಮ್‌ ಹಷ್ಮಿ ನೇತೃತ್ವದಲ್ಲಿನ ಜಾಥಾ ಕೇರಳದ ಕೊಲ್ಲಂನಿಂದ ಪ್ರಾರಂಭವಾಗಿ ಮೂರು ದಿನಗಳ ಹಿಂದೆ ರಾಜ್ಯದಲ್ಲಿ ಸಂಚರಿಸುತ್ತಿದೆ. ಮೈಸೂರು, ಬೆಂಗಳೂರು, ತುಮಕೂರು, ದಾವಣಗೆರೆ ನಂತರ ಹುಬ್ಬಳ್ಳಿ, ಬೆಳಗಾವಿ ಮೂಲಕ ಮಹಾರಾಷ್ಟ್ರಕ್ಕೆ ತೆರಳಲಿದೆ ಎಂದು ತಿಳಿಸಿದರು.
 
ಕಳೆದ ನಾಲ್ಕೂವರೆ ವರ್ಷದಲ್ಲಿ ದೇಶದಲ್ಲಿ ಹಿಂದೆಂದಿಗಿಂತಲೂ ಮಹಿಳೆಯರು ಮತ್ತು ಮಕ್ಕಳ ಮೇಲೆ ಅತ್ಯಾಚಾರ, ದೌರ್ಜನ್ಯ, ಹಿಂಸಾಚಾರ ನಡೆಯುತ್ತಿರುವುದು ನಿಲ್ಲಬೇಕು. ದೇಶದಲ್ಲಿ ಶಾಂತಿಯ ವಾತಾವರಣ ನೆಲೆಸುವಂತಾಗಬೇಕು ಎಂದು ಜಾಗೃತಿ ಮೂಡಿಸಲಾಗುತ್ತಿದೆ. ದೇಶ ಮತ್ತು ಸಂವಿಧಾನದ ಉಳಿವಿಗೆ ಒತ್ತಾಯಿಸಿ ಮಹಿಳೆಯರೇ ಜಾಥಾ ಕೈಗೊಂಡಿದ್ದಾರೆ ಎಂದು ತಿಳಿಸಿದರು.

ಮಹಿಳಾ ಒಕ್ಕೂಟದ ರಾಷ್ಟ್ರೀಯ ನಾಯಕಿಯರಾದ ಮೀನಾಕ್ಷಿ, ರಾಜಕುಮಾರಿ, ಮಧು, ಸುಮಿತ್ರಾ, ನರ್ಸತ್‌ ಪರ್ವೀನ್‌,
ನೂರ್‌ ಜಹಾನ್‌ , ಮಹಾನಗರ ಪಾಲಿಕೆ ಸಿಪಿಐ ಸದಸ್ಯ ಆವರಗೆರೆ ಎಚ್‌.ಜಿ. ಉಮೇಶ್‌,   

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.