ಪ್ರಧಾನಿ ಮೋದಿಯಿಂದ ರೈತರ ಶೋಷಣೆ


Team Udayavani, Oct 21, 2020, 6:45 PM IST

DG-TDY-1

ದಾವಣಗೆರೆ: ಫಸಲ್‌ ಬಿಮಾ ಯೋಜನೆಯಡಿ ರೈತರ ಹಣ ದೋಚಲು ಅವಕಾಶ ಮಾಡಿಕೊಟ್ಟ ಕೀರ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ಕಿಸಾನ್‌ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಸಚಿನ್‌ ಮೀಗಾ ಟೀಕಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ 2016-17, 2017-18ರ ಭಾಗಶಃ ಕಾಲಾವಧಿಗೆ ತಮ್ಮ ಗೆಳೆಯ ಗೌತಮ್‌ ಅದಾನಿ ನೇತೃತ್ವದ ವಿಮಾ ಕಂಪನಿಗೆ ಫಸಲ್‌ ಬಿಮಾ ಯೋಜನೆ ಹೊಣೆ ನೀಡಿದ್ದರು. ಕೇವಲ 6 ರಿಂದ 8 ತಿಂಗಳಲ್ಲಿ 88 ಸಾವಿರ ಕೋಟಿಯಷ್ಟು ಆ ಕಂಪನಿ ಲಾಭ ಮಾಡಿಕೊಂಡಿತ್ತು. ಇದು ರಫೆಲ್‌ ಹಗರಣಕ್ಕಿಂತಲೂ 100 ಪಟ್ಟು ದೊಡ್ಡ ಹಗರಣ ಎಂದು ಆರೋಪಿಸಿದರು.

ಕರ್ನಾಟಕದಲ್ಲಿನ ರೈತರು 20 ಸಾವಿರ ಕೋಟಿಯಷ್ಟು ಪ್ರೀಮಿಯಂ ಕಟ್ಟಿದ್ದರು. ಬೆಳೆ ಹಾನಿಯಾದವರಿಗೆ ಕಂಪನಿ ನೀಡಿದ ಪರಿಹಾರ 4,900 ಕೋಟಿ ಮಾತ್ರ. ರಾಜ್ಯವೊಂದರಲ್ಲೇ 15,100 ಕೋಟಿ ರೂ.ಲಾಭವಾಗಿದೆ. ದೇಶವ್ಯಾಪಿ ರೈತರು ಕಟ್ಟಿದ ಪ್ರೀಮಿಯಂ ಮೊತ್ತ 1 ಲಕ್ಷ 8 ಸಾವಿರ ಕೋಟಿ ರೂ., ಪರಿಹಾರವಾಗಿನೀಡಿದ್ದು 20 ಸಾವಿರ ಕೋಟಿ ರೂ. ಮಾತ್ರ. ಕೇವಲ 6 ರಿಂದ 8 ತಿಂಗಳಲ್ಲಿ 88 ಸಾವಿರ ಕೋಟಿ ಲಾಭ ಮಾಡಿಕೊಳ್ಳಲಾಯಿತು ಎಂದರು.

ರಾಜ್ಯದ 25 ಜನ ಬಿಜೆಪಿ ಸಂಸದರು ಈಗಿನ ಬೆಳೆ ವಿಮಾ ಕಾಯ್ದೆ ಬದಲಾವಣೆಗೆ ಮುಂದಾಗಬೇಕು. ಶೇ. 40 ರಷ್ಟು ಬೆಳೆ ಹಾನಿಯಾದರೆ ಮಾತ್ರ ಪರಿಹಾರ ಎಂಬುದನ್ನು ಸರಿಪಡಿಸಬೇಕು. ಮೋಟಾರ್‌ ಕಾಯ್ದೆ ಮಾದರಿಯಲ್ಲಿ ಸ್ವಲ್ಪವೇ ಹಾನಿಯಾದರೂ ರೈತರಿಗೆಪರಿಹಾರ ನೀಡುವಂತಾಗಬೇಕು. 3 ವರ್ಷದ ನಂತರ ಬೋನಸ್‌ ಹಣ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ರಾಜ್ಯದ ಮುಖ್ಯ ಕಾರ್ಯದರ್ಶಿಯವರಿಗೆ ಬೆದರಿಕೆಯ ರೀತಿಯ ಪತ್ರ ಬರೆಯುವ ಮೂಲಕ ಎಪಿಎಂಸಿ ಕಾಯ್ದೆಗೆ ಸುಗ್ರೀವಾಜ್ಞೆ ತರುವಂತೆ ಮಾಡಿದೆ. ಪ್ರಾರಂಭಿಕ ಹಂತದಲ್ಲಿ ಈ ಕಾಯ್ದೆಯಿಂದ ರೈತರಿಗೆ ಸ್ವಲ್ಪ ಲಾಭ ದೊರೆಯಲಿದೆ. ಕೊನೆಗೆ ಎಪಿಎಂಸಿಗಳು ಸಂಪೂರ್ಣವಾಗಿ ನನೆಗುದಿಗೆ ಬಿದ್ದ ನಂತರ ಎಲ್ಲಾ ರೈತರು ತೀರಾ ಅನಿವಾರ್ಯವಾಗಿ ವಿದೇಶಿ ಕಂಪನಿಗಳು ನಿಗದಿಪಡಿಸಿದ ದರಕ್ಕೇ ಬೆಳೆಗಳ ಮಾರಾಟ ಮಾಡಬೇಕಾಗುತ್ತದೆ. ಗುಲಾಮಗಿರಿಗೆ ಒಳಗಾಗಬೇಕಾಗುತ್ತದೆ. ಹಾಗಾಗಿ ಕಿಸಾನ್‌ ಕಾಂಗ್ರೆಸ್‌ ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಬಲ ಹೋರಾಟ ಹಮ್ಮಿಕೊಂಡಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಎಪಿಎಂಸಿ, ಭೂ ಸುಧಾರಣೆ, ವಿದ್ಯುತ್‌ ಹಾಗೂ ಎಫ್‌ಎಸ್‌ಡಿಆರ್‌ ಕಾಯ್ದೆ ಜಾರಿ ವಿರೋಧಿಸಿ ಕಿಸಾನ್‌ ಕಾಂಗ್ರೆಸ್‌ ಸಹಿ ಸಂಗ್ರಹ ಚಳವಳಿ ಹಮ್ಮಿಕೊಂಡಿದೆ. ಎಲ್ಲಾ ಕಡೆ ಚಳವಳಿ ನಡೆಸಿದ ನಂತರ ರಾಷ್ಟ್ರಪತಿಯವರಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ. ಶೆಟ್ಟಿ, ಕಿಸಾನ್‌ ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಬಸವರಾಜ್‌ ವಿ. ಶಿವಗಂಗಾ, ಪ್ರಮೋದ್‌, ಪ್ರವೀಣ್‌ ಕುಮಾರ್‌, ಶಿವಕುಮಾರ್‌ ಬಾತಿ ಇತರರಿದ್ದರು.

ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ್‌ ಬಿಜೆಪಿ ಏಜೆಂಟರಂತೆ ಎಪಿಎಂಸಿ ಕಾಯ್ದೆ ಪರವಾಗಿ ಹೇಳಿಕೆ ನೀಡಿರುವುದು ಸರಿಯಲ್ಲ. ಅವರ ಹೇಳಿಕೆ ರಾಜ್ಯದ ರೈತರನ್ನು ಅಪಮಾನಿಸಿದಂತಾಗಿದೆ.  –ಸಚಿನ್‌ ಮೀಗಾ ಕಿಸಾನ್‌ ಕಾಂಗ್ರೆಸ್‌ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.