ಚಿತ್ರಕಲೆಗಿದೆ ಮನಸ್ಸು ಅರಳಿಸುವ ಶಕ್ತಿ: ರಮೇಶ್‌


Team Udayavani, Jul 21, 2017, 2:23 PM IST

21-DV-2.gif

ದಾವಣಗೆರೆ: ಏಕಾಗ್ರತೆ, ತನ್ಮಯತೆಗೆ ಪ್ರಾಮುಖ್ಯತೆ ನೀಡುವ ಚಿತ್ರಕಲೆ ಎಂತಹವರ ಮನಸ್ಸನ್ನು ಉಲ್ಲಸಿತಗೊಳಿಸುವ ಶಕ್ತಿ ಹೊಂದಿದೆ ಎಂದು ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ತಿಳಿಸಿದ್ದಾರೆ.

ಗುರುವಾರ ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಚಿತ್ರಕಲಾ
ಪ್ರದರ್ಶನ, ನಿವೃತ್ತ ಶಿಕ್ಷಕರಿಗೆ ಜಿಲ್ಲಾ ಚಿತ್ರಕಲಾ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ, ಮಾತನಾಡಿದ ಅವರು, ಚಿತ್ರಕಲೆಗೆ ಏಕಾಗ್ರತೆ, ತನ್ಮಯತೆ ಪ್ರಥಮಾದ್ಯತೆಗಳಾಗಿವೆ. ಇವೆರಡನ್ನೂ ಒಗ್ಗೂಡಿಸಿಕೊಂಡಾಗ ಒಲಿಯುವ ಚಿತ್ರಕಲೆಗೆ ಎಲ್ಲರ ಮನಸ್ಸು ಅರಳಿಸಲಿದೆ ಎಂದರು.

ಚಿತ್ರಕಲೆಯಲ್ಲಿ ಕಲೆಗಾರನ ಮನಸ್ಸು ಎಷ್ಟು ದೂರ ಬೇಕಾದರೂ ಹರಿಯಬಲ್ಲದು. ಆದರೆ ಏಕಾಗ್ರತೆಯಿಂದ ಮೂಡುವ ಚಿತ್ರವು
ಮನಸ್ಸನ್ನು ಅರಳಿಸಿ, ಮುದ ನೀಡುವುದಲ್ಲದೆ, ವ್ಯಕ್ತಿಯು ಆರೋಗ್ಯಕರ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಅವರು
ತಿಳಿಸಿದರು. ಕಲೆಗಾರರು ಬಿಡಿಸಿದ ಚಿತ್ರ ಇತರರ ಜೀವನಕ್ಕೆ ಪ್ರೇರಣೆಯಾಗಬೇಕು. ಇಂದು ನಾವು ನಮ್ಮಲ್ಲಿಯೇ ಸುಖ ಹೊಂದಿದ್ದರೂ
ಎಲ್ಲವನ್ನೂ ಮರೆತು ಬೇರೆಡೆ ಹೋಗುತ್ತಿದ್ದೇವೆ. ಇಂತಹ ಮಾರ್ಗ ಬದಲಾವಣೆಯಿಂದ ಸರಿ ದಾರಿಗೆ ಬರಲು ಕಲೆಗಳು ಸಹಕಾರಿ. ಅದರಲ್ಲೂ ಚಿತ್ರಕಲೆ ಸಾಕಷ್ಟು ಪ್ರಯೋಜನಕಾರಿ ಎಂದು ಅವರು ಹೇಳಿದರು.

ಉಪವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಮಾತನಾಡಿ, ಚಿತ್ರಕಲೆ ರಾಜ ಮಹಾರಾಜರ ಕಾಲದಿಂದಲೂ ಇದೆ. ಇದರಿಂದಲೇ
ಕಲಾವಿದರು ಸುಖ, ಸಂತೋಷ ಕಾಣುತ್ತಿದ್ದರು. ಪ್ರಸ್ತುತ ದಿನಗಳಲ್ಲಿ ಚಿತ್ರಕಲೆ ಎನ್ನುವುದು ಗಗನ ಕುಸುಮವಾಗುತ್ತಿದೆ ಎಂದರು.

ಬೆಂಗಳೂರು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ, ಚಿತ್ರಕಲಾ ವಿಭಾಗ ಆಯುಕ್ತ ಮಹಾಂತೇಶ್‌ ಎಂ. ಕಂಠಿ
ಮಾತನಾಡಿ, ಇಂಡಿಯನ್‌ ಇನ್ಸ್ಟಿಟ್ಯೂಟ್‌ ಆಫ್‌ ಸೈನ್‌ನ 116 ವಿಜ್ಞಾನಿಗಳು, 25 ವಿದ್ಯಾರ್ಥಿಗಳು ಚಿತ್ರಕಲೆ ಅಧ್ಯಯನ ಮಾಡುತ್ತಿದ್ದಾರೆ. ವೈಜ್ಞಾನಿಕ ಪ್ರಯೋಗಗಳನ್ನು ಚಿತ್ರಕಲೆಯ ಮೂಲಕ ವಿವರಿಸುವ ಕುರಿತು ಸಮಗ್ರ ಅಧ್ಯಯನ ಮಾಡುತ್ತಿದ್ದಾರೆ. ಕಡಿಮೆ ವೆಚ್ಚದಲ್ಲಿಯೇ ಸಂಶೋಧನೆಗೆ ಈ ಕಲೆ ಸಹಕಾರಿ ಎಂಬ ಕಾರಣಕ್ಕೆ ಈ ಅಧ್ಯನ ನಡೆಲಸಾಗುತ್ತಿದೆ. ಅಲ್ಲಿಗೆ ನಮ್ಮ ಕಲೆ ಮತ್ತೆ ಪ್ರವರ್ಧಮಾನಕ್ಕೆ ಬರಲಿದೆ ಎಂದರು.

ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಜಿ. ಅವುಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್‌
ಬೆಕ್ಕೇರಿ, ಡಯಟ್‌ ಪ್ರಭಾರಿ ಪ್ರಾಚಾರ್ಯೆ ಎಸ್‌. ಗೀತಾ, ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್‌. ಬಸವರಾಜಪ್ಪ, ಚಿತ್ರಕಲಾ
ಶಿಕ್ಷಕರಾದ ಪಿ. ನಾಗರಾಜ ಭಾನುವಳ್ಳಿ, ಎಂ.ಸಿ.ದಿವಾಕರ್‌ ಮತ್ತಿತರರು ಇದ್ದರು.  ನಿವೃತ್ತ ಚಿತ್ರಕಲಾ ಶಿಕ್ಷಕರಾದ ಎಚ್‌.ಎಸ್‌.
ಕರಿಬಸಪ್ಪ, ಬಿ. ಮಲ್ಲಪ್ಪ, ಎಂ. ರಮೇಶ್‌, ಆರ್‌. ರೇವಣಸಿದ್ದಪ್ಪರಿಗೆ ಜಿಲ್ಲಾ ಚಿತ್ರಕಲಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಶ್ವ ಕನ್ನಡ ಸಮ್ಮೇಳನದಲ್ಲಿ ಅವಕಾಶ ನಮ್ಮ ನಗರಿಯಲ್ಲಿ 3ನೇ ವಿಶ್ವ ಕನ್ನಡ ಸಮ್ಮೇಳನ ನಡೆಯಲಿದೆ. ಈ ವೇಳೆ ನಮ್ಮದೇ ಪ್ರಾಚೀನ ಕಲೆಯಾದ ಚಿತ್ರಕಲೆಗೆ ಅವಕಾಶ ಕಲ್ಪಿಸಲಾಗುವುದು. ವಿವಿಧ ವಿಷಯಗಳ ಗಂಭೀರ ಚಿತ್ರಣ ಇರುವ ಕಲೆಗಳ ಅನಾವರಣಕ್ಕೆ ಚಿತ್ರಕಲಾ ಶಿಕ್ಷಕರು ಈ ವೇದಿಕೆ ಬಳಸಿಕೊಳ್ಳಬೇಕು.
ಡಿ.ಎಸ್‌. ರಮೇಶ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.