ಹಳ್ಳಿಗಳಲ್ಲಿ ಕುಡಿವ ನೀರಿಗಾಗಿ ಪರದಾಟ


Team Udayavani, Apr 12, 2017, 1:28 PM IST

dvg1.jpg

ದಾವಣಗೆರೆ: ರಣ ಬಿಸಿಲು…ಅಂರ್ತಗತವಾಗುತ್ತಿರುವ ಅಂತರ್ಜಲ… ಮತ್ತೆ ಬತ್ತಿದ ಜೀವನದಿ, ಕಾಣೆಯಾದ ಕೆರೆ ಕುಂಟೆಗಳಲ್ಲಿನ ನೀರು.. ಈ ಎಲ್ಲದರ ಪರಿಣಾಮ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯ 308ಕ್ಕೂ ಹೆಚ್ಚು ಗ್ರಾಮಗಳಲ್ಲಿ ಈಗ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. 

ಸತತ ಎರಡು ವರ್ಷದ ಮಳೆ ಕೊರತೆ ಜಿಲ್ಲೆಯ ಜನರನ್ನು ಇನ್ನಿಲ್ಲದಂತೆ ಬಾಧಿಸುತ್ತಿದೆ. ನೀರನ್ನು ಈಗ ನಿಜಕ್ಕೂ ಅಮೃತದಂತೆ ಬಳಸುವಂತಾಗುತ್ತಿದೆ. ಟ್ಯಾಂಕರ್‌, ನಲ್ಲಿಯಲ್ಲಿ ನೀರು ಬರುವುದನ್ನೇ ಕಾಯುವುದು, ನೀರು ಬಿಟ್ಟಾಗ ಇದ್ದಬದ್ದ ಪಾತ್ರೆ, ಪಗಡೆ ಎಲ್ಲಾದರಲ್ಲೂ ತುಂಬಿಟ್ಟು ಕೊಂಡು ಮತ್ತೆ ನೀರು ಸಿಗುವ ತನಕ ಅದನ್ನೇ ಎಚ್ಚರಿಕೆಯಿಂದ ಬಳಸಬೇಕಾಗಿದೆ.

ಇದೇ ಸ್ಥಿತಿ ಮುಂದುವರೆದಲ್ಲಿ ಮುಂದಿನ ದಿನಗಳಲ್ಲಿ ಸಮಸ್ಯೆ ಇನ್ನಷ್ಟು ಬಿಗಡಾಯಿಸಲಿದೆ ಎಂಬ ಆತಂಕ ಜನರಲ್ಲಿದೆ. ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಟ್ಯಾಂಕರ್‌, ಖಾಸಗಿ ಬೋರ್‌ವೆಲ್‌ ಮೂಲಕ ನೀರು ಪೂರೈಸುತ್ತಿರುವುದು ಭೀಮನ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ…ಎನ್ನುವಂತೆ ಆಗುತ್ತಿದೆ.

ಟ್ಯಾಂಕರ್‌, ಖಾಸಗಿ ಕೊಳವೆಬಾವಿ ಬಾಡಿಗೆ ಪಡೆದು ಸರಬರಾಜು ಮಾಡುತ್ತಿರುವ ನೀರು ತಾತ್ಕಾಲಿಕ ಕ್ರಮವಷ್ಟೆ. ಜಿಲ್ಲಾಡಳಿತ, ಸ್ಥಳೀಯ ಸಂಸ್ಥೆಗಳು ಅದನ್ನು ಮೀರಿ ಮತ್ತೇನನ್ನೂ ಮಾಡುವ ಸ್ಥಿತಿ ಇಲ್ಲ. ಏಕೆಂದರೆ ಸಾವಿರ ಅಡಿ  ಆಳ ಕೊರೆದರೂ ಸಿಗುತ್ತಿರುವುದು ಧೂಳು ಮಾತ್ರ. ಮುಕ್ಕಾಲು ಇಲ್ಲವೆ ಒಂದಿಂಚು ನೀರು ಸಿಕ್ಕರೂ ಕೆಲವೇ ದಿನಗಳಲ್ಲಿ ಆ ನೀರು ಮಾಯ. ಹಾಗಾಗಿ ಸದ್ಯಕ್ಕಂತೂ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಅಕ್ಷರಶಃ ಮರೀಚಿಕೆ. 

ನಗರ ಪ್ರದೇಶದಲ್ಲಿ ವಿದ್ಯುತ್‌ ಕಡಿತದ ಸಮಸ್ಯೆ ಸದ್ಯ ಅಷ್ಟಾಗಿ ಇಲ್ಲ. ಆದರೆ, ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಣ್ಣಾಮುಚ್ಚಾಲೆಯಾಟ ಕುಡಿಯುವ ನೀರಿನ ಮೇಲೆ ನೇರ ಪರಿಣಾಮ ಉಂಟು ಮಾಡುತ್ತಿದೆ. ದ್ವಿತೀಯ ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ನಂತರ ನಗರ ಪ್ರದೇಶದಲ್ಲಿ ಅನಿಯಮಿತ ವಿದ್ಯುತ್‌ ಕಡಿತ ಪ್ರಾರಂಭವಾದಲ್ಲಿ ನೀರಿನ ಸಮಸ್ಯೆಯೂ ಹೆಚ್ಚಾಗಲಿದೆ. ಮುಂಬರುವ ದಿನಗಳಲ್ಲಿ ವಿದ್ಯುತ್‌ ಲಭ್ಯತೆಯೇ ಆಧಾರದಲ್ಲಿ ನೀರಿನ ಸಮಸ್ಯೆ ನಿಂತಿದೆ.

ಟ್ಯಾಂಕರ್‌, ಖಾಸಗಿ ಬೋರು: ಬೇಸಿಗೆ ಕಾಲ  ಮುಂದುವರೆಯುತ್ತಿದ್ದಂತೆ ನೀರಿನ ಸಮಸ್ಯೆಯೂ ತೀವ್ರವಾಗುತ್ತಿದೆ. ಜಿಲ್ಲೆಯ 28 ಗ್ರಾಮಗಳಿಗೆ ಟ್ಯಾಂಕರ್‌ನಲ್ಲಿ, 50 ಗ್ರಾಮದಲ್ಲಿ ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿಯಿಂದ ನೀರು ಪಡೆದು, ಪೂರೈಕೆ ಮಾಡಲಾಗುತ್ತಿದೆ. ದಾವಣಗೆರೆ ತಾಲೂಕಿನ ಕುರುಡಿ ಮತ್ತು ಪವಾಡ ರಂಗವ್ವನಹಳ್ಳಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಆಲೂರುಹಟ್ಟಿ ಗ್ರಾಮದಲ್ಲಿ ಖಾಸಗಿ ಕೊಳವೆಬಾವಿಯನ್ನು ಬಾಡಿಗೆ ಆಧಾರದಲ್ಲಿ ಪಡೆದು ನೀರು ಪೂರೈಸಲಾಗುತ್ತಿದೆ. ಸದಾ ಬರಪೀಡಿತ ಪ್ರದೇಶ ಜಗಳೂರು ತಾಲೂಕಿನ ಬಿಳಿಚೋಡು, ಉಜ್ಜಪ್ಪ ವಡೇರಹಳ್ಳಿ, ಭೈರನಾಯಕನಹಳ್ಳಿ, ಚಿಕ್ಕಮ್ಮನಹಳ್ಳಿ, ಕೆಳಗೋಟೆ ಕಾನನಕಟ್ಟೆ ಒಳಗೊಂಡಂತೆ 19 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಬಿದರಕೆರೆ, ಚಿಕ್ಕಬನ್ನಿಹಟ್ಟಿ, ಗೊಲ್ಲರಹಟ್ಟಿ, ಗಡಿಮಾಕುಂಟೆ, ಅಸಗೋಡು, ಬೆಣ್ಣೆಹಳ್ಳಿ ಒಳಗೊಂಡಂತೆ 19 ಗ್ರಾಮದಲ್ಲಿ ಖಾಸಗಿ ಕೊಳವೆಬಾವಿ ಬಾಡಿಗೆ ಆಧಾರದಲ್ಲಿ ಪಡೆದು ನೀರು ಪೂರೈಸಲಾಗುತ್ತಿದೆ.

ಶಾಶ್ವತ ಬರಪೀಡಿತ ಹಣೆಪಟ್ಟಿ ಹೊತ್ತಿರುವ ಹರಪನಹಳ್ಳಿ ತಾಲೂಕಿನ ಆಲದಹಳ್ಳಿ, ಕೊರಚರಹಟ್ಟಿ, ಕೆಂಪಾಪುರ ಒಳಗೊಂಡಂತೆ 6 ಗ್ರಾಮಗಳಲ್ಲಿ ಟ್ಯಾಂಕರ್‌ನಲ್ಲಿ ನೀರು ಕೊಡಲಾಗುತ್ತಿದೆ. ವ್ಯಾಸನತಾಂಡ, ಅರಸನಾಳು, ಚಿರಸ್ತಿಹಳ್ಳಿ, ಹಾರಕನಾಳ, ಭೈರಾಪುರ, ಗೌರಿಪುರ, ಹಗರಿಗಜಾಪುರ ಸೇರಿದಂತೆ 22 ಗ್ರಾಮದಲ್ಲಿ ಖಾಸಗಿ ಬೋರ್‌ವೆಲ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 

 *ರಾ.ರವಿಬಾಬು

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ

13-davangere

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

drowned

Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.