ಸಾಮಾಜಿಕ ಕೊಡುಗೆಯತ್ತ ಗಮನ ನೀಡಿ
Team Udayavani, Jul 20, 2018, 2:49 PM IST
ದಾವಣಗೆರೆ: ಸರ್ಕಾರಿ ನೌಕರರು ಇಲಾಖಾ ಕೆಲಸ-ಕಾರ್ಯಗಳ ಜೊತೆಗೆ ಸಾಮಾಜಿಕ ಕೊಡುಗೆಯತ್ತ ಗಮನ ನೀಡಬೇಕು ಎಂದು ಜಿಲ್ಲಾ ರಕ್ಷಣಾಧಿಕಾರಿ ಆರ್. ಚೇತನ್ ಸಲಹೆ ನೀಡಿದ್ದಾರೆ.
ಗುರುವಾರ, ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಿಪಿಕ ನೌಕರರ ಸಂಘದಿಂದ ಏರ್ಪಡಿಸಿದ್ದ ಕಾರ್ಯಾಗಾರ, ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಸವಲತ್ತು ಪಡೆಯುವಂತಹ ನೌಕರರು ಸಮಾಜಕ್ಕೆ ಏನಾದರೂ ಕಾಣಿಕೆ ನೀಡುವಂತಾಗಬೇಕು ಎಂದು ಆಶಿಸಿದರು.
ಸರ್ಕಾರಿ ಸ್ವಾಮ್ಯದ ಇಲಾಖೆಗಳಲ್ಲಿ ಕೆಲಸ ಮಾಡುತ್ತಿರುವ ನೌಕರರು, ಅಧಿಕಾರಿಗಳು ಮಾಡಿಕೊಂಡಿರುವ ಸಂಘಗಳು ಸರ್ಕಾರದ ಒಂದು ಭಾಗವೇ ಆಗಿವೆ. ಯಾವ ಉದ್ದೇಶಕ್ಕಾಗಿ ಸಂಘಗಳ ರಚನೆ ಮಾಡಿಕೊಳ್ಳಲಾಗಿದೆ ಎಂಬುದರ ಬಗ್ಗೆ ಪದಾಧಿಕಾರಿಗಳು, ನೌಕರರು ತಿಳಿದು, ಸಂಘದ ಮೂಲ ಧ್ಯೇಯೋದ್ದೇಶ, ಆಶಯದಂತೆ ನಡೆದುಕೊಳ್ಳಬೇಕು ಎಂದು ತಿಳಿಸಿದರು.
ಸರ್ಕಾರಿ ಇಲಾಖಾ ನೌಕರರ ಸಂಘದ ಪದಾಧಿಕಾರಿಗಳು, ನೌಕರರಿಗೆ ಸಂಬಂಧಿಸಿದಂತೆ ನಿಗದಿತ ಕಾಲಾವಧಿಯಲ್ಲಿ ಕಾರ್ಯಾಗಾರ, ವಿಚಾರ ಸಂಕಿರಣ ಹಮ್ಮಿಕೊಳ್ಳುವುದರಿಂದ ಇಲಾಖಾ ಕೆಲಸ-ಕಾರ್ಯಗಳ ಜೊತೆಗೆ ಸಾಮಾಜಿಕ ಹೊಣೆಗಾರಿಕೆ ಜಾಗೃತಿ ಮೂಡುತ್ತದೆ. ನೌಕರರು ಸಮಾಜದ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಆರೋಗ್ಯ ಇಲಾಖೆ ಲಿಪಿಕ ನೌಕರರು ಹಾಗೂ ಇತರೆ ನೌಕರರು ಒಟ್ಟಾಗಿ ಜನತೆಗೆ ಸುರಕ್ಷಿತ ಆರೋಗ್ಯ ಸೇವೆ ನೀಡಬೇಕು. ಆರೋಗ್ಯ ಇಲಾಖೆ ನೌಕರರದ್ದು ಒಂದು ರೀತಿಯ ತುರ್ತು ಸೇವೆ ಇದ್ದಂತೆ. ಲಿಪಿಕ ನೌಕರರು ದಿನದ 24 ಗಂಟೆ ಕಾರ್ಯನಿರ್ವಹಿಸದೆ ಇರಬಹುದು. ಆದರೆ, 24 ಗಂಟೆ ನಿರ್ವಹಿಸುವ ಇತರೆ ಸಿಬ್ಬಂದಿಗೆ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುವುದು ತುಂಬಾ ಸಂತೋಷದ ವಿಚಾರ. ಆರೋಗ್ಯ ಇಲಾಖೆಯ ನೌಕರರಲ್ಲಿ ಹೆಚ್ಚಿನ ಪ್ರಾಮಾಣಿಕತೆ ಅಗತ್ಯ. ಅಗತ್ಯವಾದ ಸಂದರ್ಭದಲ್ಲಿ ನಿಗದಿತ ಸಮಯ ಕೆಲಸ
ಮಾಡಬೇಕು ಎಂದರು.
ಪ್ರಾಸ್ತಾವಿಕ ಮಾತುಗಳಾಡಿದ ಸಂಘದ ಗೌರವ ಅಧ್ಯಕ್ಷ ನಿಜಲಿಂಗಪ್ಪ, ಸಂಘ ನೌಕರರ ಹಿತರಕ್ಷಣೆಯ ಜೊತೆಗೆ ಇಲಾಖೆ, ಜಿಲ್ಲಾಡಳಿತ, ಆಸ್ಪತ್ರೆಗೆ ಪೂರಕವಾಗಿ ಕೆಲಸ ಮಾಡುತ್ತದೆ. ನೌಕರರ ಅನುಕೂಲಕ್ಕಾಗಿ ವಿಶೇಷ ಕಾರ್ಯಾಗಾರ ಇತರೆ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.
ಮಾಹಿತಿ ಹಕ್ಕು ಕಾಯ್ದೆ ವಿಷಯ…
ಕಾಚಾಪುರ ರಂಗಪ್ಪ ಉಪನ್ಯಾಸ ನೀಡಿದರು. ಲಿಪಿಕ ನೌಕರರ ಸಂಘದ ಅಧ್ಯಕ್ಷ ಎಸ್. ನಾಗರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ| ಎಂ.ಎಸ್. ತ್ರಿಪುಲಾಂಬ, ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ಎಚ್.ಡಿ. ನೀಲಾಂಬಿಕೆ, ಲಿಪಿಕ ನೌಕರರ ಸಂಘದ ಕಾರ್ಯಾಧ್ಯಕ್ಷ ಎ. ಪುಟ್ಟಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಎಸ್. ಹಾಲೇಶಪ್ಪ, ಆರ್. ಶ್ರೀನಿವಾಸ್, ಕೆ.ಎಂ. ಪುರುಷೋತ್ತಮ, ಜಯಪ್ರಕಾಶ್, ಗಂಗಾಧರ, ಶಿವಾಜಿರಾವ್ ಇತರರು ಇದ್ದರು. ರಾಮಾಚಾರ್ ಪ್ರಾರ್ಥಿಸಿದರು. ವೆಂಕಟೇಶ್ ಸ್ವಾಗತಿಸಿದರು. ಡಾ| ಆನಂದ ಋಗ್ವೇದಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ