ಕುಂದುವಾಡ ಕೆರೆ ಕಾಮಗಾರಿಯಲ್ಲೂ ಪರ್ಸಂಟೇಜ್‌ ದಂಧೆ

ನಾಲ್ಕು ವರ್ಷದಲ್ಲಿ ಬಿಜೆಪಿ ಒಂದಾದರೂ ಒಳ್ಳೆಯ ಕೆಲಸ ಮಾಡಿದ್ದರೆ ತೋರಿಸಲಿ

Team Udayavani, Apr 16, 2022, 11:32 AM IST

lake

ದಾವಣಗೆರೆ: ಕುಂದುವಾಡ ಕೆರೆ ಕಾಮಗಾರಿ ಗಮನಿಸಿದರೆ ಇಲ್ಲಿಯೂ 40 ಪರ್ಸೆಂಟೇಜ್‌ ದಂಧೆ ತಪ್ಪಿಲ್ಲ ಎಂದು ಕಾಣುತ್ತಿದೆ ಎಂದು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ ದೂರಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂದುವಾಡ ಕೆರೆ ಅವ್ಯವಸ್ಥೆ ನೋಡಿ ನಿಜಕ್ಕೂ ಬೇಸರವಾಯಿತು.15 ಕೋಟಿ ಅನುದಾನದಲ್ಲಿ ಕೇವಲ ಎರಡು ಗುಂಡಿ ಅಗೆದಿದ್ದಾರೆ. ಕೆರೆಯ ಅಗಲ ಹಾಗೂ ಆಳ ಹೆಚ್ಚಿಸಲು ಪ್ರಾಮುಖ್ಯತೆ ಕೊಡದೆ ವಾಕ್‌ಪಾಥ್‌ ಹೆಚ್ಚಿಸಿದ್ದಾರೆ ಅಷ್ಟೇ. ಸ್ಟೋರೇಜ್‌ ಕೆಪಾಸಿಟಿ ಹೆಚ್ಚಳ ಮಾಡಿಲ್ಲ. ಇದನ್ನೆಲ್ಲ ಗಮನಿಸಿದರೆ ಇಲ್ಲಿಯೂ 40 ಪರ್ಸೆಂಟೇಜ್‌ ದಂಧೆ ತಪ್ಪಿಲ್ಲ ಎಂದು ಕಾಣುತ್ತಿದೆ ಎಂದು ದೂರಿದರು.

ಈಗಾಗಲೇ ಬೇಸಿಗೆ ಆರಂಭವಾಗಿದೆ. ಆದರೆ, ಕುಡಿಯುವ ನೀರಿನ ಪ್ರಮುಖ ಮೂಲ ಕುಂದವಾಡ ಕೆರೆಯಲ್ಲಿ ಕಾಮಗಾರಿ ವಿಳಂಬದಿಂದಾಗಿ ಜನ ತೊಂದರೆ ಅನುಭವಿಸುವಂತಾಗಿದೆ. ನಿತ್ಯ ವಾಯುವಿಹಾರಕ್ಕೆ ಬರುವವರಿಗೂ ಅನಾನುಕೂಲ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿಯವರು ಎಲ್ಲ ಕೆಲಸ ನಾವೇ ಮಾಡಿದ್ದೇವೆ ಎಂದು ಬೊಬ್ಬೆಹೊಡೆಯುತ್ತಾರೆ. ಅವರು ಯಾವ ಕೆಲಸ ಮಾಡಿದ್ದಾರೆ ಎಂಬುದನ್ನು ಬರೆದಿಡಲಿ. ನಾವು ಮಾಡಿರುವಂತಹ ಕೆಲಸಗಳೊಂದಿಗೆ ಬರುತ್ತೇವೆ. ಸುಮ್ಮನೆ ಏನೋ ಮಾತನಾಡುವುದಲ್ಲ. ನಾಲ್ಕು ವರ್ಷದಲ್ಲಿ ಯಾವುದಾದರೂ ಒಂದು ಒಳ್ಳೆಯ ಹೆಸರು ತರುವ ಕೆಲಸ ಮಾಡಿದ್ದಾರಾ ತೋರಿಸಲಿ ಎಂದು ಸವಾಲು ಹಾಕಿದರು.

ಕಾಂಗ್ರೆಸ್‌ ಸರ್ಕಾರದ ಅವ ಧಿಯಲ್ಲಿನ ಕೆಲಸಗಳೇ ಇನ್ನೂ ಪೂರ್ಣಗೊಂಡಿಲ್ಲ. ನಮ್ಮ ಸರ್ಕಾರದಲ್ಲಿನ ಕೆಲಸಗಳನ್ನೇ ಪೂರ್ಣ ಮಾಡಲು ಆಗಿಲ್ಲ. ಜಲಸಿರಿ, ಯುಜಿಡಿ ಸಮಸ್ಯೆ, ಅಂಡರ್‌ ಗ್ರೌಂಡ್‌ ಕೇಬಲ್‌, ನೀರಿನ ಸಮಸ್ಯೆ ನೀಗಿಲ್ಲ. ರಸ್ತೆ ಹಾಳುಮಾಡುತ್ತಿದ್ದಾರೆ ಸ್ಮಾರ್ಟ್‌ ಸಿಟಿ ಕೆಲಸ ಎಂದು ಹಿಂದಿನ ಕಾಮಗಾರಿಗೆ ಬೋರ್ಡ್‌ ಹಾಕಿಸಿ ಕೆಲಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಹಿಂದೆ ದಾವಣಗೆರೆಯನ್ನು ನೋಡಿಹೋದವರು ನಮ್ಮೂರನ್ನು ಇದೇ ರೀತಿ ಅಭಿವೃದ್ಧಿ ಮಾಡಬೇಕು ಎನ್ನುತ್ತಿದ್ದರು. ಆದರೆ, ಇವಾಗ ದಾವಣಗೆರೆ ರಸ್ತೆ ಗುಂಡಿಗಳ ನಗರವಾಗಿದೆ. ನಮ್ಮ ಅ ಧಿಕಾರವಧಿಯಲ್ಲಿ ಎಲ್ಲಾ ಖಾತೆಗೂ ಸಮರ್ಪಕ ಅನುದಾನ ಹಂಚಿಕೆಮಾಡಿ ಕೆಲಸ ಮಾಡಲಾಗುತ್ತಿತ್ತು. ಬಿಜೆಪಿ ಸರ್ಕಾರ ಎಲ್ಲವನ್ನೂ ಹಾಳುಮಾಡಿದೆ. ಇಂದಿರಾ ಕ್ಯಾಂಟೀನ್‌ ಬಂದ್‌ ಮಾಡಲಾಗಿದೆ. ಅ ಧಿಕಾರಿಗಳ ಮೇಲೆ ನಿಯಂತ್ರಣವೇ ಇಲ್ಲ. ಚಾಟಿ ಹಿಡಿದವರೇ ಮೇಯಲು ಹೊರಟರೆ ಉಳಿದವರು ಯಾವ ದಾರಿ ಹಿಡಿಯಲು ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಿದರು.

ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಜಿ.ಎಸ್‌. ಮಂಜುನಾಥ್‌ ಗಡಿಗುಡಾಳ್‌, ಸದಸ್ಯ ಎ. ನಾಗರಾಜ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ದಿನೇಶ್‌ ಶೆಟ್ಟಿ, ಗಣೇಶ್‌ ಹುಲ್ಲುಮನಿ ಇತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.