ದುರ್ಬಲರ ಆರೋಗ್ಯ ತಪಾಸಣೆ ಮಾಡಿ


Team Udayavani, Jul 22, 2020, 11:26 AM IST

ದುರ್ಬಲರ ಆರೋಗ್ಯ ತಪಾಸಣೆ ಮಾಡಿ

ದಾವಣಗೆರೆ: ಕೋವಿಡ್ ದಿಂದ ಮರಣ ಪ್ರಮಾಣ ತಗ್ಗಿಸಲು ದುರ್ಬಲ ವರ್ಗದವರ ಸರ್ವೇ ಮಾಡಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್‌ ಬೀಳಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮಂಗಳವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಆರೋಗ್ಯಅಭಿಯಾನದ ಜಿಲ್ಲಾ ಆರೋಗ್ಯ ಅಭಿಯಾನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ದಿಂದ ಉಂಟಾಗುವ ಮರಣ ತಗ್ಗಿಸಲು ದುರ್ಬಲ ವರ್ಗದವರ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಸೂಚಿಸಿದರು.

ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಕೇವಲ ಕಂಟೇನ್ಮೆಂಟ್‌ ಮತ್ತು ಬಫರ್‌ ವಲಯಗಳು ಮಾತ್ರವಲ್ಲದೆ ಆರೋಗ್ಯ ಇಲಾಖೆಗೆ ಮಾಹಿತಿ ಇರುವ ದುರ್ಬಲ ವರ್ಗ ಎಂದು ಪರಿಗಣಿಸಲಾಗುವ ಶುಗರ್‌, ಬಿಪಿ, ಟಿಬಿ, ಕಿಡ್ನಿ ಸಮಸ್ಯೆ, ಕ್ಯಾನ್ಸರ್‌ ರೋಗಗಳನ್ನು ಹೊಂದಿರುವವರನ್ನು ಪರೀಕ್ಷೆಗೊಳಪಡಿಸಿ ಸೂಕ್ತ ಚಿಕಿತ್ಸೆ ನೀಡಿ ಸಾವಿನ ಸಂಭವದಿಂದ ಅವರನ್ನು ಪಾರು ಮಾಡಬೇಕು ಎಂದರು.

ಜಿಲ್ಲೆಯಾದ್ಯಂತ ಒಂದು ವಾರದೊಳಗೆ ಅವರ ಮನೆ ಮನೆಗೆ ತೆರಳಿ ಸರ್ವೇ ಮಾಡಿ, ಅವರ ಆರೋಗ್ಯ ಕುರಿತು ಮಾಹಿತಿ ಪಡೆದು ಸೂಕ್ತ ಸಲಹೆ ನೀಡುವ ಮೂಲಕ ನಿಗಾದಲ್ಲಿ ಇಡಬೇಕು. ಅಂತಹವರಿಗೆ ಕೋವಿಡ್ ಸೋಂಕು ತಗುಲಿದರೆ ಉಳಿಸುವುದು ಕಷ್ಟಸಾಧ್ಯವಾಗುವ ಹಿನ್ನೆಲೆಯಲ್ಲಿ ಈ ವಿಷಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಬರುವಂತಹ ನಾನ್‌ ಕೋವಿಡ್‌ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಎಬಿ-ಎಆರ್‌ಕೆ ಕಾರ್ಡ್‌ದಾರರು, ಬಿಪಿಎಲ್‌ ಕಾರ್ಡ್‌ದಾರ ನಾನ್‌ ಕೋವಿಡ್‌ ರೋಗಿಗಳನ್ನು ಎಷ್ಟೊತ್ತಿಗೆ ಬಂದರೂ ಅಡ್ಮಿಟ್‌ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಬೇಕು. ಇಲ್ಲವಾದಲ್ಲಿ ಕೆಪಿಎಂಇ ಅಡಿ ನೋಂದಣಿ ರದ್ದುಗೊಳಿಸಲಾಗುವುದು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಸಲಹೆ ನೀಡಿ ಸಹಕರಿಸಬೇಕು ಎಂದು ಎಚ್ಚರಿಕೆ ನೀಡಿದರು.

ಆರ್‌ಸಿಎಚ್‌ ಅಧಿಕಾರಿ ಡಾ| ಎಸ್‌.ಮೀನಾಕ್ಷಿ ಮಾತನಾಡಿ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಏಪ್ರಿಲ್‌ನಿಂದ ಗರ್ಭಿಣಿಯರ ದಾಖಲಾತಿ ಕಡಿಮೆ ಆಗಿದೆ. ಏಪ್ರಿಲ್‌ನಿಂದ ಇಲ್ಲಿಯವರೆಗೆ ಒಟ್ಟು 15 ತಾಯಿಂದಿರ ಮರಣ ಸಂಭವಿಸಿವೆ. 3 ಜನರು ಬೇರೆ ಜಿಲ್ಲೆಗೆ ಸೇರಿದವರಾಗಿದ್ದಾರೆ. 77 ಶಿಶು ಮರಣ ಸಂಭವಿಸಿದ್ದು, 41 ಹೊರ  ಜಿಲ್ಲೆಯದಾಗಿದ್ದರೆ 36 ಜಿಲ್ಲೆಯವರು. ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ 1723 ಅಂಗನವಾಡಿಗಳ ಪೈಕಿ ಜೂನ್‌ ನಲ್ಲಿ ಒಂದು ವಾರ ವಿಶೇಷ ಆಂದೋಲನ ಮಾಡಿ 778 ಅಂಗನವಾಡಿಗಳ ಸುಮಾರು 46 ಸಾವಿರ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ತಾಯಿ ಮತ್ತು ಶಿಶು ಮರಣ ಪ್ರಮಾಣ ತಗ್ಗಿಸಲು ಕ್ರಮ ಕೈಗೊಳ್ಳಬೇಕು. ಚುಚ್ಚುಮದ್ದು ಕಾರ್ಯಕ್ರಮದಡಿ ಮಕ್ಕಳ ಚುಚ್ಚುಮದ್ದು ಪ್ರಮಾಣ ಲಾಕ್‌ಡೌನ್‌ ವೇಳೆ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಎನ್‌ವಿಬಿಡಿಸಿಪಿ ಅಧಿಕಾರಿ ಡಾ| ನಟರಾಜ್‌ ಮಾತನಾಡಿ, ಜಿಲ್ಲೆಯಲ್ಲಿ ಜನವರಿಯಿಂದ ಜೂನ್‌ ವರೆಗೆ 2 ಮಲೇರಿಯಾ, 92 ಡೆಂಘೀ, 22 ಚಿಕೂನ್‌ ಗುನ್ಯಾ ಪ್ರಕರಣ ದೃಢಪಟ್ಟಿವೆ ಎಂದರು. ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ| ಗಂಗಾಧರ್‌ ಮಾತನಾಡಿ, ಜನವರಿಯಿಂದ ಈವರೆಗೆ 940ಕ್ಷಯ ರೋಗ ಪ್ರಕರಣಗಳಿಗೆ ಚಿಕಿತ್ಸೆ, ಎಚ್‌ಐವಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದರು. ಟಿಬಿ ರೋಗವುಳ್ಳವರನ್ನು ಸರ್ವೇ ಮಾಡಿ ಅವರಲ್ಲಿ ಏನಾದರೂ ಕೋವಿಡ್‌ ಲಕ್ಷಣಗಳಿವೆಯೇ ಎಂದು ಪರೀಕ್ಷಿಸಿ ಕ್ರಮ ಕೈಗೊಳ್ಳಬೇಕು. ಟಿಬಿ ಮತ್ತು ಎಚ್‌ಐವಿ ಪಾಸಿಟಿವ್‌ ಇರುವ ರೋಗಿಗಳು ಶೀತ, ಕೆಮ್ಮು, ಜ್ವರದಂತಹ ಲಕ್ಷಣಗಳು ಕಂಡುಬಂದಲ್ಲಿ ನಿರ್ಲಕ್ಷé ವಹಿಸದೆ ಕೋವಿಡ್‌ ಪರೀಕ್ಷೆಗೆ ಒಳಗಾಗಬೇಕು. ಡೆಂಘೀ ಹಾಗೂ ಸಾಂಕ್ರಮಿಕ ರೋಗ ತಡೆಗಟ್ಟಲು ಪರಿಣಾಮಕಾರಿ ಕ್ರಮಕ್ಕೆ ಸೂಚಿಸಿದರು.

ಟಾಪ್ ನ್ಯೂಸ್

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.