ಸವಲತ್ತು ಪಡೆಯಲು ಛಾಯಾಗ್ರಾಹಕರು ಸಂಘಟಿತರಾಗಲಿ


Team Udayavani, Aug 21, 2017, 3:17 PM IST

21-DV-3.jpg

ದಾವಣಗೆರೆ: ಛಾಯಾಗ್ರಾಹಕರು ಸಂಘಟಿತರಾಗಿ ಸರ್ಕಾರದ ಸವಲತ್ತು ಪಡೆಯಲು ಯಶಸ್ವಿಯಾಗಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಕರೆಕೊಟ್ಟಿದ್ದಾರೆ.

ರೇಣುಕಾ ಮಂದಿರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಉದ್ಘಾಟಿಸಿ, ಮಾತನಾಡಿದ ಅವರು, ಛಾಯಾಗ್ರಾಹಕರು ಸರ್ಕಾರದ ಸವಲತ್ತು ಪಡೆಯಲು ಸಂಘಟಿತರಾಗಲೇಬೇಕು. ಏಕಾಂಗಿಯಾಗಿ ಸರ್ಕಾರದ ಮುಂದೆ ಮನವಿ ಮಾಡಿದರೆ ಸರಿಯಾಗಿ ಸ್ಪಂದನೆ ಸಿಗೋಲ್ಲ. ಸಂಘಟಿತರಾಗಿ ಹೋರಾಡಿದರೆ ಯಶಸ್ಸು ಸಿಗಲಿದೆ. ಸರ್ಕಾರದ ಹಲವು ಸವಲತ್ತುಗಳು ಸಿಗಲಿವೆ ಎಂದರು.  ಇಂದು ಛಾಯಾಗ್ರಹಣ ರಂಗ ಸಾಕಷ್ಟು ಸುಧಾರಣೆ ಕಂಡಿದೆ. ಹಿಂದೆಲ್ಲಾ ಫೋಟೋ ತೆಗೆಸಿಕೊಳ್ಳಲು ಗಂಟೆಗಟ್ಟಲೇ ಕಾಯಬೇಕಿತ್ತು.ಆದರೆ, ಇಂದು ಕೆಲವೇ ನಿಮಿಷಗಳಲ್ಲಿ ಫೋಟೋ ತೆಗೆದುಕೊಡಬಲ್ಲ ತಂತ್ರಜ್ಞಾನ ಬಂದಿದೆ. ಇದರಿಂದಾಗಿ ಸಾಕಷ್ಟು ಜನರಿಗೆ ಉದ್ಯೋಗ ಸಿಗುವಂತೆ ಆಗಿದೆ ಎಂದರು.

ಎಸ್‌.ಎಸ್‌. ಜನಕಲ್ಯಾಣ ಟ್ರಸ್ಟ್‌ನಲ್ಲಿ ಛಾಯಾಗ್ರಾಹಕರ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ 1 ಕೋಟಿ ರೂಪಾಯಿ ಠೇವಣಿ ಇಡಲಾಗಿದೆ. ಅದರಿಂದ ಬರುವ ಬಡ್ಡಿ ಹಣದಲ್ಲಿ ಪತ್ರಕರ್ತರ ಮಕ್ಕಳ ವಿದ್ಯಾಭ್ಯಾಸಕ್ಕೆ ಧನ ಬಳಸಲಾಗುತ್ತಿದೆ. ಸಧ್ಯ ಇದರಲ್ಲೇ ಇನ್ನೂ ಹಣ ಉಳಿಯುತ್ತಿದ್ದು, ಫೋಟೋಗ್ರಾಫರ್ ಸಹ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಟ್ರಸ್ಟ್‌ನಿಂದ ನೆರವು ಪಡೆಯಬೇಕು ಎಂದು ತಿಳಿಸಿದರು.

ರಾಜ್ಯ ಫೋಟೋಗ್ರಾಫರ್ ಸಂಘದ ಅಧ್ಯಕ್ಷ ಬಿ.ಎಸ್‌. ಶಶಿಧರ್‌ ಮಾತನಾಡಿ, 4ನೇ ಶತಮಾನದಲ್ಲೇ ಗ್ರೀಕ್‌ ದೇಶದಲ್ಲಿ ಪಿನ್‌ಹೋಲ್‌ ರಿಂದ ಕ್ಯಾಮರಾ ಪರಿಕಲ್ಪನೆ ರೂಪತಾಳಿ, ಅದು ಫೋಟೋಗ್ರಫಿ ಹಂತಕ್ಕೆ ಬರಲು 19ನೇ ಶತಮಾನದವರೆಗೂ ಕಾಯಬೇಕಾಯಿತು. ಹೀಗೆ ವಿವಿಧ ಹಂತಗಳನ್ನು ದಾಟಿ ಇಂದಿನ ಆಧುನಿಕ ಫೋಟೋಗ್ರಫಿ ರೂಪುಗೊಂಡಿದೆ. ಭೂ, ನಭೋ ಮಂಡಲ ಸೇರಿದಂತೆ ಮನುಷ್ಯ ಬದುಕಿನ ಎಲ್ಲ ಮಗ್ಗಲುಗಳನ್ನೂ ಫೋಟೋಗ್ರಫಿ 
ಸ್ಪರ್ಶಿಸುವ ಮೂಲಕ ಮಾನವ ಪ್ರಗತಿಗೆ ತನ್ನದೇ ಕೊಡುಗೆ ನೀಡುತ್ತಿದೆ ಎಂದರು. ಛಾಯಾಗ್ರಾಹಕರಲ್ಲಿ ವೃತ್ತಿಪರ, ಅಸಂಘಟಿತ, ಹವ್ಯಾಸಿ ಹೀಗೆ ಅನೇಕ ವರ್ಗಗಳಿದ್ದು, ಪ್ರತಿಯೊಬ್ಬರೂ ಅವರದೇ ಆದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.

ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ಕೌಶಲ್ಯ ವೃದ್ಧಿಸಿಕೊಳ್ಳಬೇಕಾದ ಅನಿವಾರ್ಯತೆ ಕೂಡ ಎದುರಾಗಿದೆ. ಇಂತಹ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಛಾಯಾಗ್ರಾಹಕರು ಸಂಘಟಿತರಾಗಬೇಕು ಎಂದು ಕರೆನೀಡಿದರು. ಅಸೋಸಿಯೇಷನ್‌ನಿಂದ ಫೋಟೋ
ಗ್ರಾಫರ್ಗಳನ್ನು ಸಂಘಟಿಸುವ ಕಾರ್ಯ ಶೇ. 80ರಷ್ಟು ಯಶ ಕಂಡಿದೆ. ರಾಜ್ಯದ 27 ಜಿಲ್ಲೆಗಳ ಫೋಟೋಗ್ರಾಫರ್ ಸಂಘಗಳು ರಾಜ್ಯ ಸಂಘದೊಂದಿಗೆ ಗುರುತಿಸಿಕೊಂಡಿವೆ. ನಾವೆಲ್ಲರೂ ಸಂಘಟಿತರಾದಾಗ ಮಾತ್ರ ಸರ್ಕಾರಕ್ಕೆ ನಮ್ಮ ಕೂಗು ಕೇಳಿಸಲಿದೆ.

ಫೋಟೋಗ್ರಫಿ ಕಲೆಯನ್ನು ಉಳಿಸಿ, ಬೆಳೆಸಲು ಪ್ರತ್ಯೇಕ ಅಕಾಡೆಮಿ ಸ್ಥಾಪಿಸಬೇಕೆಂಬ ಪ್ರಮುಖ ಬೇಡಿಕೆಗೂ ಸರ್ಕಾರ ಸ್ಪಂದಿಸಲಿದೆ ಎಂದು ತಿಳಿಸಿದರು. ಜಿಲ್ಲಾ ಫೋಟೋಗ್ರಾಫರ್ ಮತ್ತು ವೀಡಿಯೋಗ್ರಾಫರ್ ಸಂಘದ ಅಧ್ಯಕ್ಷ ಶಿಕಾರಿ ಶಂಭು ಅಧ್ಯಕ್ಷತೆ ವಹಿಸಿದ್ದರು. ಫೋಟೋಗ್ರಾಫರ್ ಅಸೋಸಿಯೇಷನ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಸ್‌.ನಾಗೇಶ್‌, ಜಿಲ್ಲಾ ಕಾರ್ಯದರ್ಶಿ ವಿಜಯ ಜಾಧವ್‌, ಯೂತ್ಸ್ ವೆಲ್‌ಫೇರ್‌ ಅಸೋಸಿಯೇಷನ್‌ ಅಧ್ಯಕ್ಷ ಎಚ್‌. ಕೆ.ಸಿ. ರಾಜು, ಕಾರ್ಯದರ್ಶಿ ಎಸ್‌.ಎಂ. ಪಂಚಾಕ್ಷರಯ್ಯ ಇತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.