ದಾವಣಗೆರೆ ಡಿಸಿ ಪಿಂಚಣಿ ಅದಾಲತ್‌ ಕ್ರಾಂತಿ

ವರ್ಷದಲ್ಲಿ 15 ಸಾವಿರ ಮಂದಿಗೆ ಪಿಂಚಣಿ ಪ್ರಯೋಜನ, ಮಾಸಾಶನಕ್ಕೆ ಲಂಚ ನೀಡಿದ್ದ ಡಿಸಿ ತಾಯಿ

Team Udayavani, Nov 2, 2020, 5:05 PM IST

dg-tdy-1

ದಾವಣಗೆರೆ: ಸರ್ಕಾರಿ ಅಧಿಕಾರಿಗಳಿಗೆ ಜನಪರ ಕಾಳಜಿ ಇದ್ದರೆ ಉತ್ತಮ ಸಾಧನೆ ಸಾಧ್ಯ ಎಂಬುದನ್ನು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತೋರಿಸಿಕೊಟ್ಟಿದ್ದಾರೆ.

ಹೌದು, ಜಿಲ್ಲಾಧಿಕಾರಿಗಳ ವಿಶೇಷ ಕಾಳಜಿಯಿಂದ ಒಂದೇ ವರ್ಷದಲ್ಲಿ ಜಿಲ್ಲೆಯಾದ್ಯಂತ 15 ಸಾವಿರಕ್ಕೂ ಅಧಿಕ ಜನರು ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ಮಾಸಾಶನ ಸೇರಿದಂತೆ ಇನ್ನಿತರ ಸಾಮಾಜಿಕ ಭದ್ರತಾ ಯೋಜನೆ ಲಾಭ ಪಡೆದುಕೊಂಡಿದ್ದಾರೆ. ವೃದ್ಧರು, ವಿಧವೆಯರು, ಅಂಗವಿಕಲರಿಗೆ ಮಾಸಾಶನ ಸೌಲಭ್ಯಕ್ಕೆ ತಾವೇ ಸ್ವತಃ ತಾಲೂಕುಗಳಲ್ಲಿ ಪಿಂಚಣಿಅದಾಲತ್‌ ನಡೆಸಿದ್ದಾರೆ. ಅಲ್ಲದೆ ಅಧಿಕಾರಿಗಳೇ ಮನೆಮನೆಗೆ ಹೋಗಿ ಫಲಾನುಭವಿಗಳನ್ನು ಗುರುತಿಸಿ ಸಾಮಾಜಿಕ ಭದ್ರತೆ ಒದಗಿಸುತ್ತಿದ್ದಾರೆ.

ಪಿಂಚಣಿ ಅದಾಲತ್‌: ಮಹಾಂತೇಶ ಬೀಳಗಿ ಅವರು ದಾವಣಗೆರೆ ಜಿಲ್ಲಾಧಿಕಾರಿಯಾಗಿ ಬಂದ ಆರಂಭದಲ್ಲೇ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 27 ಬಾರಿ “ಪಿಂಚಣಿ ಅದಾಲತ್‌’ ಕಾರ್ಯಕ್ರಮ ಹಮ್ಮಿಕೊಂಡರು. ಪ್ರತಿ ತಾಲೂಕಿನಲ್ಲಿ ಹಮ್ಮಿಕೊಂಡ ಅದಾಲತ್‌ನಲ್ಲಿ ಸ್ವತಃ ಭಾಗವಹಿಸಿದರು. ತಹಶೀಲ್ದಾರ್‌ ಉಪಸ್ಥಿತಿಯಲ್ಲಿ ಸ್ಥಳದಲ್ಲಿಯೇ ಅರ್ಹರಿಗೆ ಮಾಸಾಶನ ದೊರಕಿಸಲು ಕ್ರಮ ಕೈಗೊಂಡರು.

“ಪಿಂಚಣಿ ಅದಾಲತ್‌’ ಎಂಬ ವಿಶೇಷ ಕಾರ್ಯಕ್ರಮದಿಂದಾಗಿ ಜಿಲ್ಲೆಯ 2269 ಜನರು ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ಅಂಗವಿಕಲ ಮಾಸಾಶನ ಸೇರಿದಂತೆ ಇನ್ನಿತರ ಮಾಸಾಶನಗಳನ್ನು ಪಡೆದುಕೊಳ್ಳಲು ಸಾಧ್ಯವಾಯಿತು. ಅದಾಲತ್‌ ಮೂಲಕ ಹೊನ್ನಾಳಿ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 1796 ಜನರಿಗೆ ವಿವಿಧ ಮಾಸಾಶನದ ವ್ಯವಸ್ಥೆ ಮಾಡಲಾಯಿತು. ಉಳಿದಂತೆ ದಾವಣಗೆರೆ ತಾಲೂಕಿನಲ್ಲಿ 167, ಹರಿಹರ ತಾಲೂಕಿನಲ್ಲಿ 10, ಚನ್ನಗಿರಿ ತಾಲೂಕಿನಲ್ಲಿ 44, ಜಗಳೂರು ತಾಲೂಕಿನಲ್ಲಿ ಎಂಟು ಜನರಿಗೆ ಮಾಸಾಶನ ವ್ಯವಸ್ಥೆ ಮಾಡಲಾಗಿದೆ. ಮನೆ ಮನೆ ಭೇಟಿ: ಜಿಲ್ಲಾಧಿಕಾರಿಯವರ ಸೂಚನೆ ಮೇರೆಗೆ “ಪಿಂಚಣಿ ಅದಾಲತ್‌’ ಜತೆಗೆ ಅಧಿಕಾರಿಗಳೇ ಮನೆ ಬಾಗಿಲಿಗೆ ಹೋಗಿ ಸಾಮಾಜಿಕ ಭದ್ರತಾ ಯೋಜನೆ ಲಾಭ ದೊರಕಿಸುವ ಕಾರ್ಯಕ್ರಮ ಸಹ ಜಿಲ್ಲೆಯಲ್ಲಿಮಾಡಲಾಯಿತು. ಅಧಿಕಾರಿ, ಸಿಬ್ಬಂದಿಗಳೇ ಮನೆ ಬಾಗಿಲಿಗೆ ಹೋಗಿ 12,820 ಜನರಿಂದ ಅರ್ಜಿಗಳನ್ನು

ಪಡೆದರು. ಇದರಲ್ಲಿ ಅರ್ಹರಾದ 10,742 ಜನರಿಗೆ ಮಾಸಾಶನ ಬರುವಂತೆ ಮಾಡಲಾಯಿತು. ದಾವಣಗೆರೆ ತಾಲೂಕಿನ 2531, ಹರಿಹರ ತಾಲೂಕಿನ 816, ಚನ್ನಗಿರಿ ತಾಲೂಕಿನ 1946, ಹೊನ್ನಾಳಿ ತಾಲೂಕಿನ 4173, ನ್ಯಾಮತಿ ತಾಲೂಕಿನ 694 ಹಾಗೂ ಜಗಳೂರು ತಾಲೂಕಿನ 582 ಜನರು ಮಾಸಾಶನದ ಪ್ರಯೋಜನ ಪಡೆದುಕೊಂಡಿದ್ದಾರೆ.

ಅಧಿಕಾರಿಗಳ ಸಹಕಾರ: ವಿವಿಧ ಮಾಸಾಶನ ವಿಚಾರದಲ್ಲಿ ಜಿಲ್ಲಾಧಿಕಾರಿ ವಿಶೇಷ ಕಾಳಜಿ ವಹಿಸುವುದನ್ನು ಅರಿತ ಅಧಿಕಾರಿ ವರ್ಗ ಸಹ ಈ ವಿಚಾರದಲ್ಲಿ ಆಸಕ್ತಿ ವಹಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ನಿರಂತರವಾಗಿ ಬರುವ ಮಾಸಾಶನ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಕಾರ್ಯವೂ ಮುಂದುವರಿದೆ. ಸರ್ಕಾರ ಪ್ರಸ್ತತ ಆನ್‌ಲೈನ್‌ ಮೂಲಕ ಹಣ ಸಂದಾಯ ಮಾಡುವ ವ್ಯವಸ್ಥೆ ಜಾರಿಗೊಳಿಸಿದ್ದು ವಿವಿಧ ದಾಖಲಾತಿ ಕಾರಣದಿಂದಾಗಿ ಅಮಾನತು ಆಗಿದ್ದ ಸಾವಿರಾರು ಪ್ರಕರಣಗಳಿಗೆ ಸಂಬಂಧಿಸಿ ಅಧಿಕಾರಿಗಳೇ ದಾಖಲೆ ತರಿಸಿಕೊಂಡು ಮಾಸಾಶನ ಕೊಡಿಸುತ್ತಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಹೊಸದಾಗಿ ಸಲ್ಲಿಕೆಯಾದ 1706 ಅರ್ಜಿಗಳ ವಿಲೇವಾರಿ ನಡೆಯುತ್ತಿದೆ. ಜಿಲ್ಲೆಯಲ್ಲಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಜನರಿಗೆ ವಿವಿಧ ಮಾಸಾಶನ ಸೌಲಭ್ಯ ದೊರಕಿಸುವಲ್ಲಿ ಹಾಗೂ ಮಾಸಾಶನ ಅರ್ಜಿಗಳ ತ್ವರಿತ ವಿಲೇವಾರಿಯಲ್ಲಿ ಜಿಲ್ಲಾಧಿಕಾರಿ ವಹಿಸುತ್ತಿರುವ ಕಾಳಜಿ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

ಏಕಿಷ್ಟು ಕಾಳಜಿ? : ಜಿಲ್ಲಾಧಿಕಾರಿಗಳು ವಿವಿಧ ಮಾಸಾಶನ ಕೊಡಿಸುವಲ್ಲಿ ಏಕಿಷ್ಟು ಕಾಳಜಿ ತೋರುತ್ತಿದ್ದಾರೆ ಎಂಬುದಕ್ಕೆ ಅವರೇ ಹಲವು ಸಭೆ-ಸಮಾರಂಭಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. “ನಾನು ಐದು ವರ್ಷದವನಿದ್ದಾಗ ನನ್ನ ತಂದೆ ಅಕಾಲಿಕ ಮರಣ ಹೊಂದಿದರು. ಆಗ ನಮಗೆ ಕಿತ್ತು ತಿನ್ನುವ ಬಡತನ. ಆ ಸಮಯದಲ್ಲಿ ನನ್ನ ತಾಯಿ ವಿಧವಾ ವೇತನಕ್ಕೆ ಅರ್ಜಿ ಹಾಕಿದಾಗ ಅಧಿಕಾರಿಗಳು ತಾಯಿಗೆ ಅನೇಕ ಸಲ ಕಚೇರಿಗೆ ಅಲೆದಾಡಿಸಿದರು. 25 ರೂ. ಮಾಸಾಶನಕ್ಕೆ 100 ರೂ. ಲಂಚ ನೀಡಿ ನನ್ನ ತಾಯಿ ವಿಧವಾ ವೇತನದ ಆದೇಶಪತ್ರ ಪಡೆಯಬೇಕಾಯಿತು. ಇದನ್ನೆಲ್ಲ ಗಮನಿಸಿದ ನಾನು ಶ್ರದ್ಧೆಯಿಂದ ಓದಿ ಜಿಲ್ಲಾಧಿಕಾರಿಯಾದೆ. ನನ್ನ ತಾಯಿ ಪಟ್ಟ ಕಷ್ಟ ಬೇರೆ ಯಾವ ತಾಯಂದಿರೂ ಪಡಬಾರದೆಂದು ಮನೆ ಬಾಗಿಲಿಗೆ ಹೋಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮಾಸಾಶನ ಕೊಡಿಸುವ ಕೆಲಸ ಮಾಡುತ್ತಿದ್ದೇನೆ’.

ವೃದ್ಧಾಪ್ಯ ವೇತನ ಪಡೆಯಲು ಎಲ್ಲಿ ಅರ್ಜಿಕಬೇಕು ಗೊತ್ತಿರಲಿಲ್ಲ. ಪಿಂಚಣಿಗಾಗಿ ಕಚೇರಿಗೆ ಅಲೆದಾಡಲು ಆರೋಗ್ಯವೂ ಸರಿಯಿರಲಿಲ್ಲ. ಆದ್ದರಿಂದ ಪಿಂಚಣಿ ಪಡೆಯುವ ವಿಚಾರವನ್ನೇ ಕೈಬಿಟ್ಟಿದ್ದೆ. ಪಂಚಾಯಿತಿ ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ದಾಖಲೆಗಳನ್ನು ಪಡೆದು ಪಿಂಚಣಿ ಬರುವಂತೆ ಮಾಡಿ ಸಹಾಯ ಮಾಡಿದ್ದಾರೆ. -ಬಸಪ್ಪ ಎಚ್‌.ಎನ್‌., ಸುರಹೊನ್ನೆ

ಕೋವಿಡ್ ಸಂದರ್ಭದಲ್ಲಿಯೂ ಕೆಲವು ಕಡೆ ಅಧಿಕಾರಿಗಳು ಮನೆ ಮನೆಗೆ ಹೋಗಿ ಫಲಾನುಭವಿಗಳನ್ನು ಹುಡುಕಿ ಮಾಸಾಶನ ಕೊಡಿಸುವ ವ್ಯವಸ್ಥೆ ಮಾಡಿದ್ದಾರೆ. ಕೊರೊನಾ ಹಾವಳಿ ಕಡಿಮೆಯಾಗುತ್ತಿದ್ದಂತೆ ಮತ್ತೆ ಪಿಂಚಣಿ ಅದಾಲತ್‌ ಮುಂದುವರಿಸುತ್ತೇವೆ. -ಮಹಾಂತೇಶ್‌ ಬೀಳಗಿ, ದಾವಣಗೆರೆ ಡಿಸಿ

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.