ಪೈಪ್ಲೈನ್ ಅಡುಗೆ ಅನಿಲ ಸಂಪರ್ಕ ಶೀಘ್ರ: ಸಿದ್ದೇಶ್ವರ
Team Udayavani, Nov 27, 2020, 5:45 PM IST
ದಾವಣಗೆರೆ: ಜನವರಿಯಲ್ಲಿ ದಾವಣಗೆರೆ ನಗರದಲ್ಲಿ ಮನೆ ಮನೆಗೆ ಪೈಪ್ಲೈನ್ ಮೂಲಕ ಅಡುಗೆ ಅನಿಲ ಸಂಪರ್ಕ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ತಿಳಿಸಿದರು.
ಕೇಂದ್ರ ಸರ್ಕಾರದ ಪೆಟ್ರೋಲಿಯಂ ಮತ್ತು ನ್ಯಾಚುರಲ್ ಗ್ಯಾಸ್ ರೆಗ್ಯುಲೇಟರಿ ಬೋರ್ಡ್ವತಿಯಿಂದ ದಾವಣಗೆರೆ ಮತ್ತು ಚಿತ್ರದುರ್ಗ ನಗರಗಳಲ್ಲಿರುವ ಮನೆಗಳಿಗೆ ಪೈಪ್ ಮೂಲಕ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷಿ ಯೋಜನೆಯ ಕುರಿತು ಗುರುವಾರ ಯೂನಿಸಾನ್ ಕಂಪನಿ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.
ಯೂನಿಸಾನ್ ಕಂಪನಿ ಅಡಿಷನಲ್ ಮ್ಯಾನೇಜರ್ ಸುದೀಪ್ ಶರ್ಮಾ ಮಾತನಾಡಿ,2018 ರಲ್ಲಿ ಯೋಜನೆಗೆ ಭೂಮಿಪೂಜೆ ನೆರವೇರಿಸಲಾಗಿತ್ತು. ಕೇಂದ್ರ ಸರ್ಕಾರದಪೆಟ್ರೋಲಿಯಂ ಸಚಿವಾಲಯ ನಡೆಸಿದಹರಾಜು ಪ್ರಕ್ರಿಯೆಯಲ್ಲಿ ದೇಶದ ಒಟ್ಟು 86 ಭೌಗೋಳಿಕ ಪ್ರದೇಶಗಳನ್ನು ವಿವಿಧ ಕಂಪನಿಗಳಿಗೆ ಹಂಚಿಕೆ ಮಾಡಲಾಗಿದೆ. ಯೂನಿಸಾನ್ ಕಂಪನಿಚಿತ್ರದುರ್ಗ ಮತ್ತು ದಾವಣಗೆರೆ ಭೌಗೋಳಿಕ ಪ್ರದೇಶಗಳನ್ನು ಹಂಚಿಕೆ ಮಾಡಲಾಗಿದೆ. ಮುಂಬರುವ ಏಳೆಂಟು ವರ್ಷಗಳಲ್ಲಿ ದಾವಣಗೆರೆಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸುಮಾರು 1.10 ಲಕ್ಷ ಮನೆಗಳಿಗೆ ಪೈಪ್ಡ್ ಗ್ಯಾಸ್ ಸಂಪರ್ಕ ಕಲ್ಪಿಸುವ ಉದ್ದೇಶವಿದೆ ಎಂದು ಮಾಹಿತಿ ನೀಡಿದರು.
ಈಗಾಗಲೇ ಚಿತ್ರದುರ್ಗ ನಗರದಲ್ಲಿ ಮನೆ ಮನೆಗೆ ಅಡುಗೆ ಅನಿಲ ಸಂಪರ್ಕ ಕಲ್ಪಿಸುವಕಾಮಗಾರಿ ಪ್ರಾರಂಭಿಸಲಾಗಿದೆ. ದಾವಣಗೆರೆಯ ಎಸ್.ಎಸ್. ಬಡಾವಣೆ ಮತ್ತು ವಿನಾಯಕಬಡಾವಣೆಯಲ್ಲಿ ಜನವರಿಯಲ್ಲಿ ಕಾಮಗಾರಿ ಪ್ರಾರಂಭ ಮಾಡಲಾಗುವುದು. ಈಗಾಗಲೇ ಸರ್ವೆ ಕಾರ್ಯ ನಡೆಸಿದ್ದು, ಸುಮಾರು 16 ಕಿಮೀ ಪೈಪ್ಲೈನ್ ಕಾಮಗಾರಿ ನಡೆಸುವಉದ್ದೇಶವಿದೆ. ಕಾಮಗಾರಿಯ ಸಂಪೂರ್ಣ ವಿವರವನ್ನು ದಾವಣಗೆರೆ ಮಹಾನಗರ ಪಾಲಿಕೆಗೆಸಲ್ಲಿಸಲಾಗಿದೆ. ಪೈಪ್ ಲೈನ್ ಅಳವಡಿಸಿದ ನಂತರ ರಸ್ತೆ ದುರಸ್ತಿ ಸೇರಿದಂತೆ ಇತರೆ ಡ್ಯಾಮೇಜ್ ಚಾರ್ಜ್ಗಳ ಡಿಮ್ಯಾಂಡ್ ನೋಟ್ ಅನ್ನುಪಾಲಿಕೆಯವರು ನೀಡಿದ ನಂತರ ಕಾಮಗಾರಿ ಪ್ರಾರಂಭಿಸುವುದಾಗಿ ತಿಳಿಸಿದರು.
ಗೇಲ್ ಕಂಪನಿಯ ನ್ಯಾಚುರಲ್ ಗ್ಯಾಸ್ ಪೈಪ್ ಲೈನ್ ಪ್ಲಾಂಟ್ ಚಿತ್ರದುರ್ಗದಲ್ಲಿದೆ. ಅಲ್ಲಿಂದಸುಮಾರು 60 ಕಿಮೀ ಉದ್ದದ ಪೈಪ್ಲೈನ್ ಮಾಡಿದಾವಣಗೆರೆ ನಗರದ ಸಮೀಪ 1 ಎಕರೆ ಜಾಗದಲ್ಲಿ ಗ್ಯಾಸ್ ರಿಸೀವಿಂಗ್ ಸ್ಟೇಷನ್ ನಿರ್ಮಾಣ ಮಾಡಲಾಗುವುದು ಎಂದರು. ಗ್ಯಾಸ್ ರಿಸಿವಿಂಗ್ ಸ್ಟೇಷನ್ ನಿರ್ಮಾಣ ಮಾಡಲು ಒಂದು ಎಕರೆ ಜಮೀನಿನ ಹುಡುಕಾಟ ದಲ್ಲಿರುವುದಾಗಿ ಸಂಸದರ ಗಮನ ಸಳೆದರು.
ತಕ್ಷಣ ಜಿಲ್ಲಾಧಿಕಾರಿಯವರೊಂದಿಗೆ ದೂರವಾಣಿ ಮುಖಾಂತರ ಮಾತನಾಡಿದ ಸಂಸದರು, ಯೂನಿಸಾನ್ ಕಂಪನಿಯವರ ಜೊತೆ ಮಾತನಾಡಿನಗರದ ಸಮೀಪ ಕಂಪನಿಯ ಬೇಡಿಕೆ ಅನುಸಾರ ಜಮೀನು ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
ಜಮೀನು ಲಭ್ಯತೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಹೆದ್ದಾರಿ ಪಕ್ಕದಲ್ಲಿ ಪೈಪ್ಲೈನ್ ಅಳವಡಿಸಲು ಅನುಮತಿ ನೀಡಿದ ತಕ್ಷಣ ಚಿತ್ರದುರ್ಗದಿಂದ ದಾವಣಗೆರೆ ನಗರಕ್ಕೆ ಕಾಮಗಾರಿ ಪ್ರಾರಂಭಿಸುವುದಾಗಿ ಸುದೀಪ್ ಶರ್ಮಾ ತಿಳಿಸಿದರು. ಜನವರಿಯಲ್ಲಿ ಬಡಾವಣೆಗಳಲ್ಲಿ ಕೆಲಸ ಪ್ರಾರಂಭವಾದ ತಕ್ಷಣ ಉಳಿದ ವಾರ್ಡುಗಳಿಗೆಅನುಮತಿ ಕೋರಿ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿದರೆ ಅನುಮತಿ ನೀಡುವುದಾಗಿಮಹಾನಗರ ಪಾಲಿಕೆಯ ಆಯುಕ್ತ ವಿಶ್ವನಾಥ ಮುದ್ದಜ್ಜಿ ಹೇಳಿದರು. ಯೂನಿಸಾನ್ ಕಂಪನಿ ಸಂಪರ್ಕಾಧಿಕಾರಿ ಸುನೀಲ್ ಪೂಜಾರಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ