ತುಂಗಭದ್ರಾ ಸೇತುವೆಗೆ ಪೈಪ್‌ಲೈನ್‌ ಸಂಕಷ್ಟ


Team Udayavani, Oct 5, 2020, 6:55 PM IST

ತುಂಗಭದ್ರಾ ಸೇತುವೆಗೆ ಪೈಪ್‌ಲೈನ್‌ ಸಂಕಷ್ಟ

ಹರಿಹರ: ಇಲ್ಲಿನ ತುಂಗಭದ್ರಾ ಹಳೆ ಸೇತುವೆಯ ಇಕ್ಕೆಲಗಳಲ್ಲಿ ಅಳವಡಿಸಿರುವ ನೀರು ಸರಬರಾಜು ಪೈಪ್‌ಲೈನ್‌ಗಳು ಶತಮಾನ ಕಂಡ ಸೇತುವೆಗೆ ಉರುಳಾಗಿ ಪರಿಣಮಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

25 ವರ್ಷಗಳ ಹಿಂದೆ ಸೇತುವೆಯ ಒಂದು ಬದಿಗೆ ಎರಡನೇ ಹಂತದ ಕುಡಿಯುವ ನೀರು ಯೋಜನೆ ಪೈಪ್‌ಲೈನ್‌ ಅಳವಡಿಸಲಾಯಿತು. ಈಗ ಇನ್ನೊಂದು ಬದಿಗೆ 24 ಗಂಟೆ ನೀರು ಸರಬರಾಜು ಮಾಡುವ ಜಲಸಿರಿ ಯೋಜನೆ ಪೈಪ್‌ಲೈನ್‌ ಹಾಕಲಾಗಿದೆ. ಮಳೆ ನೀರು ಹರಿದು ಹೋಗಲು ರೂಪಿಸಿದ್ದ ಸೇತುವೆಯ ಎರಡೂಬದಿಯಲ್ಲಿ ರೂಪಿಸಿದ್ದ ಕಿಂಡಿಗಳ ಮೇಲೆ ಪೈಪ್‌  ಲೈನ್‌ ಬಂದಿರುವುದರಿಂದ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುತ್ತಿಲ್ಲ. ಸೇತುವೆ ಮೇಲೆ ಬೀಳುವ ಕಸ-ಕಡ್ಡಿ ಕಿಂಡಿಗಳಲ್ಲಿ ಅಡ್ಡ ನಿಂತು ಕಟ್ಟಿಕೊಂಡಿವೆ. ಅಲ್ಲದೆ ಹಳೆ ಪೈಪ್‌ಲೈನ್‌ ಕೆಳಗೆ ಬೆಳೆದಿರುವಂತೆ ಹೊಸ ಪೈಪ್‌ಲೈನ್‌ ಕೆಳಗೂ ಗಿಡ-ಗಂಟಿಗಳು ಬೆಳೆಯುತ್ತಿವೆ. ಇದರ ಪರಿಣಾಮವಾಗಿ ಮಳೆ ನೀರು ಕೆಳಗೆ ಸಾಗದೆ ಸೇತುವೆ ಮೇಲೆ ನಿಲ್ಲುವಂತಾಗಿದೆ.

ಶಿಥಿಲಾವಸ್ಥೆಯತ್ತ ಸೇತುವೆ: ಮಳೆ ನೀರು ಹರಿದು ಮುಂದೆ ಹೋಗದೆ ಅಲ್ಲಿಯೇ ನಿಲ್ಲುವುದರಿಂದ ಸೇತುವೆಯ ಭದ್ರತೆಗೆ ತೀವ್ರ ಧಕ್ಕೆ ಉಂಟಾಗುತ್ತದೆ. ಸೇತುವೆ ಹಳೆಯದಾಗಿರುವುರಿಂದ ಅದರ ಮೇಲೆ ಯಮ ಭಾರದ ಪೈಪ್‌ ಅಳವಡಿಸಿರುವುದುಅವೈಜ್ಞಾನಿಕವಾಗಿದೆ. ಅದರಲ್ಲೂ ಕಿಂಡಿಗಳುಸಹ ಬಂದ್‌ ಆಗಿ ಮಳೆ ನೀರು ನಿಂತರೆ ಭಾರಹೆಚ್ಚಾಗುವುದಲ್ಲದೆ ಇನ್ನೂ ಹತ್ತಾರು ವರ್ಷ ಬಾಳಿಕೆ ಬರುವ ಸೇತುವೆ ಬಹು ಬೇಗ ಶಿಥಿಲಾವಸ್ತೆ  ತಲುಪುವ ಅಪಾಯ ಎದುರಾಗಿದೆ.

ಹಳೆ ಪೈಪ್‌ಲೈನ್‌ ಕೆಳಗಿನ ಸ್ವಚ್ಛತೆ ಜವಾಬ್ದಾರಿ ನಗರಸಭೆಯದು. ಜಲಸಿರಿ ಪೈಪ್‌ಲೈನ್‌ ಕೆಳಗಿನ ಸ್ವಚ್ಛತಾ ಕಾರ್ಯ ಕೆಯುಐಡಿಎಫ್‌ಸಿಗೆ ಸಂಬಂಧಿಸಿದ್ದಾಗಿದೆ. ಆದರೆ ಸ್ವಚ್ಛತೆ ವಿಷಯ ತಮಗೆ ಸಂಬಂಧಿಸಿದ್ದೇ ಅಲ್ಲ ಎಂದು ನಿರ್ಲಕ್ಷ್ಯ ತಾಳಿರುವುದು ಸೇತುವೆಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

ಅನಾಹುತಕ್ಕೆ ಆಹ್ವಾನ: ಭಾರ ತಾಳಲಾರದೆ, ನಿರ್ವಹಣೆ ಇಲ್ಲದೆ ಸೇತುವೆ ಬಿದ್ದರೆ ಅನಾಹುತಕ್ಕೆ ದಾರಿ ಮಾಡಿಕೊಟ್ಟಂತಾಗುತ್ತದೆ. ಈಗಲೂ ಈ ಸೇತುವೆ ಮೇಲೆ ಲಘು ವಾಹನ, ಜನ ಸಂಚಾರವಿದೆ. ಜನರ ಪ್ರಾಣಕ್ಕೆ ತೊಂದರೆಯಾಗುವ ಜೊತೆಗೆ ನಗರದ ಜನತೆ ಕುಡಿಯುವ ನೀರಿಲ್ಲದೆ ಬಸವಳಿಯಬೇಕಾಗುತ್ತದೆ. ಸೇತುವೆ ಲೋಕೋಪಯೋಗಿ ಇಲಾಖೆಗೆ ಸೇರಿದೆ. ಇಲಾಖೆ ಅಧಿಕಾರಿಗಳನ್ನು ಈ ಬಗ್ಗೆ ಕೇಳಿದರೆ ನಾವು ನಗರಸಭೆಹಾಗೂ ಕೆಯುಐಡಿಎಫ್‌ಸಿಗೆ ಪತ್ರ ಬರೆದಿದ್ದೇವೆ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದಾರೆ. ಇನ್ನೊಂದೆಡೆ ಜಲಸಿರಿಯವರು, ನಗರಸಭೆ  ಯವರೂ ನಿರ್ವಹಣೆಗೆ ಮುಂದಾಗುತ್ತಿಲ್ಲ. ಒಟ್ಟಾರೆ ಸೇತುವೆಯ ಆಕ್ರಂದನವನ್ನು ಕೇಳುವವರೇ ಇಲ್ಲದಂತಾಗಿದೆ.

ಸೇತುವೆ ಅಕ್ಕ ಪಕ್ಕ ಸ್ವಚ್ಛತಾ ಕಾರ್ಯ ಕೈಗೊಳ್ಳಲು ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕಾರ್ಯದೊತ್ತಡ ದಿಂದ ಇನ್ನೂ ಕೆಲಸ ಮಾಡಿಲ್ಲ. ಹಾಗಾಗಿ ಮತ್ತೂಮ್ಮೆ ಅವರಿಗೆ ಸೂಚನೆ ನೀಡುತ್ತೇವೆ. -ದೇವರಾಜ್‌, ಎಇ, ಕೆಯುಐಡಿಎಫ್‌ಸಿ

 

-ಬಿ.ಎಂ. ಸಿದ್ಧಲಿಂಗಸ್ವಾಮಿ

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.