ದೇವನಗರಿ ಸುಂದರ-ಶುಚಿತ್ವಕ್ಕೆ ಯೋಜನೆ

•ಉದ್ಯಮಿಗಳ ನೆರವಿನಿಂದ ವಾರದಲ್ಲಿ ಕಾರ್ಯಾರಂಭ: ಜಿಲ್ಲಾಧಿಕಾರಿ •ಉದ್ಯಮಗಳಿಂದ ಲಾಭದ ಶೇ. 2 ವೆಚ್ಚ

Team Udayavani, Jul 23, 2019, 9:30 AM IST

dg-tdy-1

ದಾವಣಗೆರೆ: ಡಿಸಿ ಜಿ.ಎನ್‌.ಶಿವಮೂರ್ತಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಲಿನ್ಯಮುಕ್ತ ದಾವಣಗೆರೆ ಕಾರ್ಯಯೋಜನೆ ಮಾಹಿತಿ ನೀಡಿದರು.

ದಾವಣಗೆರೆ: ಪರಿಸರ ಸ್ನೇಹಿ ಹಾಗೂ ಮಾಲಿನ್ಯಮುಕ್ತ ದಾವಣಗೆರೆ ನಗರವನ್ನಾಗಿಸಲು ಉದ್ಯಮಿಗಳ ಸಹಯೋಗದಲ್ಲಿ ಕಾರ್ಯಯೋಜನೆ ಅನುಷ್ಠಾನಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.

ನಗರವನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಈಗಾಗಲೇ ಸ್ಮಾರ್ಟ್‌ ಸಿಟಿ ಯೋಜನೆಯಡಿ ಕಾರ್ಯಕ್ರಮ ರೂಪಿಸಲಾಗಿದೆ. ಅದರ ಜತೆಗೆ ನಗರವನ್ನು ಮತ್ತಷ್ಟು ಸುಂದರೀಕರಣ ಹಾಗೂ ಶುಚಿತ್ವ ಕಾಪಾಡುವ ಹಿನ್ನೆಲೆಯಲ್ಲಿ ಆಯ್ದ ಉದ್ಯಮಿಗಳ ನೆರವಿನೊಂದಿಗೆ ಯೋಜನೆ ಕಾರ್ಯಗತಗೊಳಿಸಲಾಗುವುದು. ಈ ಸಂಬಂಧ ಅವರೊಂದಿಗೆ ಸೋಮವಾರ ಬೆಳಿಗ್ಗೆ ಸಭೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್‌.ಶಿವಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕುಂದುವಾಡ ಕೆರೆ, ಜಿಲ್ಲಾ ಆಸ್ಪತ್ರೆ ಉದ್ಯಾನವನ, ನಗರದ ಪ್ರಮುಖ ವೃತ್ತಗಳನ್ನು ಅಭಿವೃದ್ಧಿ ಪಡಿಸಿ, ಅವುಗಳ ನಿರ್ವಹಣೆ ಹೊಣೆಯನ್ನು ಉದ್ಯಮಿಗಳು ನಿಭಾಯಿಸಲಿದ್ದಾರೆ. ಉದ್ಯಮಿಗಳು ತಮ್ಮ ಲಾಭಾಂಶ ಶೇ.2 ರಷ್ಟು ಮೊತ್ತವನ್ನು ಈ ಕಾರ್ಯಕ್ಕೆ ವಿನಿಯೋಗಿಸಲಿದ್ದಾರೆ. ನಗರದ ಸೌಂದರಿಕರಣ ಹಾಗೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಆಂದೋಲನದ ರೀತಿ ಕಾರ್ಯಗತವಾಗಲಿರುವ ಯೋಜನೆಯ ರೂಪುರೇಷೆ ವಾರದೊಳಗೆ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಕುಂದುವಾಡ ಕೆರೆ ಕಾರಂಜಿ ಉತ್ಕೃಷ್ಟವಾದದ್ದು. ನೀರಿನ ಸಮಸ್ಯೆಯಿಂದಾಗಿ ಅದು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ ಕುಂದುವಾಡ ಕೆರೆ ಅಭಿವೃದ್ಧಿ ಜತೆಗೆ ಅದನ್ನು ಮತ್ತಷ್ಟು ಸುಂದರಗೊಳಿಸಲಾಗುವುದು. ಅಲ್ಲಿ ವಾಯುವಿಹಾರಕ್ಕಾಗಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಮಂದಿ ತೆರಳುತ್ತಾರೆ. ವಾಕರ್ ಪಾಥ್‌, ಕೆರೆ ಸಂರಕ್ಷಣೆ, ಆಕರ್ಷಕ ಹೂವಿನ ಗಿಡ ಬೆಳೆಸುವುದು ಸೇರಿದಂತೆ ಹಲವು ಅಭಿವೃದ್ಧಿ ಕ್ರಮ ಕೈಗೊಳ್ಳಲಾಗುವುದು. ಇದೇ ರೀತಿ ನಗರದ ಪ್ರಮುಖ ವೃತ್ತಗಳಲ್ಲಿ ಸ್ವಚ್ಛತೆ ಕಾಪಾಡುವ ಜತೆಗೆ ಅವುಗಳನ್ನು ಸುಂದರಗೊಳಿಸಲಾಗುವುದು. ಆ ವೃತ್ತಗಳಲ್ಲಿ ಕಸದ ಬುಟ್ಟಿ ಇರಿಸಲಾಗುವುದು ಎಂದು ತಿಳಿಸಿದರು.

ಸರ್ಕಾರಿ ಖಾಲಿ ಜಾಗದಲ್ಲಿ ಅರಣ್ಯ ಇಲಾಖೆ ಸಹಕಾರದೊಂದಿಗೆ ಗಿಡ ಬೆಳೆಸಲಾಗುವುದು. ಮುಂದಿನ ದಿನಗಳಲ್ಲಿ ಮನೆ ಮನೆಗೂ ಎರಡು ಡಸ್ಟ್‌ ಬಿನ್‌ ವ್ಯವಸ್ಥೆ ಮಾಡಲಾಗುವುದು. ಇದು ಮಾಲಿನ್ಯ ನಿಯಂತ್ರಿಸಲು ಸಹಕಾರಿಯಾಗಲಿದೆ. ಮುಖ್ಯವಾಗಿ ರೋಗ ರುಜಿನ ತಡೆಗೂ ಅನುಕೂಲವಾಗಲಿದೆ. ಸ್ಮಾರ್ಟ್‌ ಸಿಟಿ ಯೋಜನೆಯಡಿಯೂ ಹಲವಾರು ಕಾರ್ಯಕ್ರಮ ಅನುಷ್ಠಾಗೊಳ್ಳುವುದರಿಂದ ದಾವಣಗೆರೆ ನಗರ ಸುಂದರವಾಗಲಿದೆ ಎಂದು ತಿಳಿಸಿದರು. ನಗರದ ಶುಚಿತ್ವ ಹಾಗೂ ಸುಂದರೀಕರಣದ ಕಾರ್ಯದಲ್ಲಿ ಉದ್ಯಮಿಗಳ ಜತೆಗೆ ನಗರದ ಸಂಘ ಸಂಸ್ಥೆಗಳು, ಕಂಪನಿಗಳು ಮುಂದೆ ಬಂದು ಈ ಆಂದೋಲನಕ್ಕೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಕೆ.ವಿ. ಕೊಟ್ರೇಶ್‌ ಈ ಸಂದರ್ಭದಲ್ಲಿದ್ದರು.

ಯಾರ್ಯಾರಿಗೆ ಯಾವ್ಯಾವ ಅಭಿವೃದ್ಧಿಯ ಜವಾಬ್ದಾರಿ, ನಿರ್ವಹಣೆ ಉಸ್ತುವಾರಿ

ಆರಾಧ್ಯ ಸ್ಟೀಲ್ ಅ್ಯಂಡ್‌ ವೈರ್‌ ರೋಪ್‌ ಇಂಡಸ್ಟ್ರೀಸ್‌- ಕುಂದುವಾಡ ಕೆರೆ ಕಾರಂಜಿ.
ಕಾರ್ಗಿಲ್ ಇಂಡಿಯಾ ಲಿ.ಬೆಳ್ಳೂಡಿ-ಕುಂದುವಾಡ ಕೆರೆ ಫುಟ್ಪಾತ್‌, ಗಾರ್ಡನಿಂಗ್‌.
ಮಹಾರಾಜ ಸೋಪ್ಸ್‌ ಆ್ಯಂಡ್‌ ಡಿಟರ್‌ಜೆಂಟ್ಸ್‌-ಚಿಗಟೇರಿ ಜಿಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಉದ್ಯಾನವನಅಭಿವೃದ್ಧಿ ಜತೆಗೆ ನೀರಿನ ವ್ಯವಸ್ಥೆ ಮತ್ತು ಗುಂಡಿ ಮಹಾದೇವಪ್ಪ ವೃತ್ತ ನವೀಕರಣ.
ರಿಲಯನ್ಸ್‌ ಮಾರ್ಟ್‌ ಪಿಬಿ ರಸ್ತೆ-ವಿದ್ಯಾನಗರ ವೃತ್ತ ಹಾಗೂ ವಿದ್ಯಾನಗರ 2ನೇ ಬಸ್‌ ನಿಲ್ದಾಣ ಉದ್ಯಾನವನ.
ಗ್ರಾಸಿಂ ಇಂಡಸ್ಟ್ರೀಸ್‌ ಕುಮಾರಪಟ್ಟಣಂ-ಡಿಸಿ ವೃತ್ತ (ಕ್ಲಾಕ್‌ ಟವರ್‌ 100 ಅಡಿ ರಸ್ತೆ) ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತ ಹಾಗೂ ಡಿಸಿ ವೃತ್ತದಿಂದ ಸಂಗೊಳ್ಳಿ ರಾಯಣ್ಣ ವೃತ್ತ್ತದವರೆಗಿನ ರಸ್ತೆ ವಿಭಜಕ ಅಭಿವೃದ್ಧಿ.
ಹ್ಯಾಟ್ಸನ್‌ ಆಗ್ರೋ ಪ್ರಾಡಕ್ಟ್ , ಕುಂದೂರು- ಎಂಸಿಸಿ ಎ ಬ್ಲಾಕ್‌.
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ-ದೇವರಾಜ ಅರಸು ವೃತ್ತ.
ಮಹಾನಗರ ಪಾಲಿಕೆ-ಜಯದೇವ ವೃತ್ತ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ-ಟ್ರೀ ಗಾರ್ಡ್‌ ಸರಬರಾಜು.
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ:

ಹಂದಿ ಸ್ಥಳಾಂತರದ ಬಗ್ಗೆ ತಾಂತ್ರಿಕ ಅಡಚಣೆ ಇದೆ. ಅವುಗಳ ಮಾಲೀಕರು ನ್ಯಾಯಾಲಯದ ಮೊರೆ ಹೋಗಿರುವುದರಿಂದ ಆ ಕಾರ್ಯ ಸ್ಥಗಿತವಾಗಿದೆ. ನ್ಯಾಯಾಲಯದ ಆದೇಶದಿಂದಾಗಿ ದಾವಣಗೆರೆ ನಗರವಷ್ಟೇ ಅಲ್ಲ, ಇಡೀ ರಾಜ್ಯದಲ್ಲೇ ಈ ಆದೇಶ ಅನ್ವಯವಾಗಿದೆ. ಹಾಗಾಗಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಜಿಲ್ಲಾಧಿಕಾರಿ ಉತ್ತರಿಸಿದರು. ರಸ್ತೆ ಬದಿ ಲಾರಿ ಹಾಗೂ ಟ್ಯಾಕ್ಸಿಗಳ ನಿಲುಗಡೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದರಿಂದ ಅವುಗಳ ನಿಲ್ದಾಣಕ್ಕಾಗಿ ಪರ್ಯಾಯ ಜಾಗ ಹುಡುಕಲಾಗುತ್ತಿದೆ. ನಗರ ಬೆಳೆಯುತ್ತಿರುವುದರಿಂದ ಜಾಗ ದೊರೆಯುತ್ತಿಲ್ಲ. ಆದರೂ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.