ಪ್ಲಾಸ್ಟಿಕ್ ತ್ಯಾಜ್ಯದಿಂದ ಸಕಲರಿಗೆ ಅಪಾಯ


Team Udayavani, Jun 6, 2018, 11:19 AM IST

dvg-2.jpg

ದಾವಣಗೆರೆ: ಪ್ಲಾಸ್ಟಿಕ್‌ ತ್ಯಾಜ್ಯದಿಂದ ಭೂಮಂಡಲದ ಸಕಲ ಜೀವ ಸಂಕುಲಕ್ಕೆ ಅಪಾಯ ಎದುರಾಗುತ್ತಿದ್ದು, ಪ್ರತಿಯೊಬ್ಬರೂ ಸಂಪೂರ್ಣವಾಗಿ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್‌.ಎಚ್‌. ಹೊಸಗೌಡರ್‌ ಮನವಿ ಮಾಡಿದ್ದಾರೆ.

ಮಂಗಳವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಾಗನೂರು ಬಸಪ್ಪ ಪಬ್ಲಿಕ್‌ ಟ್ರಸ್ಟ್‌, ಜಿಲ್ಲಾ ವಕೀಲರ ಸಂಘ, ಪರಿಸರ ಸಂರಕ್ಷಣಾ, ಮಾನವ ಹಕ್ಕುಗಳ ವೇದಿಕೆ ಸಹಯೋಗದಲ್ಲಿ ಮಾಗನೂರು ಬಸಪ್ಪ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ, ಮಾತನಾಡಿದ ಅವರು, ಪ್ಲಾಸ್ಟಿಕ್‌, ತ್ಯಾಜ್ಯ ಹೊರಸೂಸುವ ರಾಸಾಯನಿಕದಿಂದ ಭೂಮಿ ಮೇಲಿನ ಜೀವ ಸಂಕುಲ, ಜಲಮೂಲ ಮತ್ತು ಜಲಚರಗಳು ನಾಶವಾಗುವ ಅಪಾಯ ಎದುರಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ಲಾಸ್ಟಿಕ್‌ ಮಣ್ಣಿನಲ್ಲಿ ಎಂದಿಗೂ ಕೊಳೆಯದು. ಅದನ್ನು ಸುಟ್ಟಾಗ ಹೊರಸೂಸುವ ರಾಸಾಯನಿಕಯುಕ್ತ ಹೊಗೆಯು ಕ್ಯಾನ್ಸರಿಗೆ ಕಾರಣ ಆಗುವ ವಿಷಕಾರಿ ಅನಿಲ ಬಿಡುಗಡೆ ಆಗುತ್ತದೆ. ಕಸದ ಜೊತೆ ಪ್ಲಾಸ್ಟಿಕ್‌ ಸೇವಿಸುವ ಪಶುಪಕ್ಷಿ, ಪ್ರಾಣಕ್ಕೆ ಕಂಟಕ ಎದುರಾಗುತ್ತಿದೆ.

ಆದ್ದರಿಂದ ಜನತೆ ಎಚ್ಚೆತ್ತು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಲ್ಲಿಸಲೇ ಬೇಕು ಎಂದರು. ಪ್ಲಾಸ್ಟಿಕ್‌ ತ್ಯಾಜ್ಯ ಉಂಟು ಮಾಡುತ್ತಿರುವ ಘೋರ ಪರಿಣಾಮದ ಬಗ್ಗೆ ನಾವು ಗಂಭೀರವಾಗಿ ಆಲೋಚಿಸಿಲ್ಲ. ಸಿಕ್ಕಸಿಕ್ಕಲ್ಲಿ ಕಸ ಬಿಸಾಡುವ ಮೂಲಕ ಪರಿಸರ ಮಾಲಿನ್ಯಕ್ಕೆ ಕಾರಣರಾಗಿದ್ದೇವೆ. ಪರಿಸರ ಸ್ವಚ್ಚವಾಗಿಡುವುದು ಕೇವಲ ಸರ್ಕಾರ ಮತ್ತು ಸ್ಥಳೀಯ ಸಂಸ್ಥೆಗಳ ಹೊಣೆಯಲ್ಲ. ಪರಿಸರ ಸ್ವಚ್ಚವಾಗಿಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ತಿಳಿಸಿದರು.

1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಜಿ. ಶಿವಶಂಕರೇಗೌಡ ಮಾತನಾಡಿ, ಪ್ರತಿಯೊಬ್ಬರಲ್ಲಿರುವ ಮೊಬೈಲ್‌ ಹೊರ ಸೂಸುವ ವಿಕಿರಣದಿಂದಲೂ ಸಹ ಪರಿಸರಕ್ಕೆ ಅಪಾಯ ಇದೆ. ಮೊಬೈಲ್‌ ಟವರ್‌ಗಳನ್ನು
ಜನವಸತಿಯಿಂದ ದೂರದಲ್ಲಿ ಸ್ಥಾಪಿಸಬೇಕಿದೆ. ಇ-ತ್ಯಾಜ್ಯವೂ ಪರಿಸರಕ್ಕೆ ಗಂಭೀರ ಸವಾಲಾಗುತ್ತಿದೆ. ಅದರ ನಿರ್ಮೂಲನೆಗೆ ಪರಿಣತರು ಸಂಶೋಧನೆ ನಡೆಸಬೇಕು ಎಂದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಜನ್ಮದಿನ ಒಂದೊಂದು ಸಸಿ ನೆಡುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು ಎಂದು ತಿಳಿಸಿದರು.

ಪ್ಲಾಸ್ಟಿಕ್‌ ಮಾಲಿನ್ಯ ಜೀವಕ್ಕೆ ಮಾರಕ…
ವಿಷಯ ಕುರಿತು ಉಪನ್ಯಾಸ ನೀಡಿದ ರಾಜ್ಯ ಕಾನೂನು ಸೇವಾ ಪ್ರಾಧಿ ಕಾರದ ಸದಸ್ಯ ಎಲ್‌. ಎಚ್‌. ಅರುಣ್‌ಕುಮಾರ್‌, ನಾವೆಲ್ಲರೂ ವಾಸಿಸುವ ಭೂಮಿಯ ಮೇಲೆ ಅರಣ್ಯ ನಾಶದ ಮೂಲಕ ನದಿ ಮೂಲಗಳಿಗೆ ಧಕ್ಕೆ ಉಂಟು ಮಾಡುತ್ತಿದ್ದೇವೆ. ಅಪಾಯಕಾರಿ ಘನ ತ್ಯಾಜ್ಯ ವಿಲೇವಾರಿ ಮಾಡದೇ ಎಲ್ಲೆಂದರಲ್ಲಿ ಎಸೆಯುವ, ಗಣಿಗಾರಿಕೆ ಮೂಲಕ ಪ್ರಕೃತಿಯ ವಿರುದ್ಧ ದೌರ್ಜನ್ಯ ಎಸಗುತ್ತಿದ್ದೇವೆ. ಪರಿಸ್ಥಿತಿ ಇದೇ ರೀತಿ ಮುಂದುವರೆದರೆ ಮುಂಬರುವ ದಿನಗಳಲ್ಲಿ ಘೋರ ಪರಿಣಾಮ ಎದುರಿಸಬೇಕಾಗುತ್ತದೆ. ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳ ಬಳಕೆ ಪರಿಸರ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಶಿಕ್ಷಾರ್ಹ ಅಪರಾಧ. 5 ವರ್ಷ ತನಕ ಸೆರೆವಾಸ ಅಥವಾ 1ಲಕ್ಷದವರೆಗೂ ದಂಡ ವಿಧಿಸಬಹುದು ಎಂದು ತಿಳಿಸಿದರು.

ಮಾಗನೂರು ಬಸಪ್ಪ ಪಬ್ಲಿಕ್‌ ಟ್ರಸ್ಟ್‌ ಗೌರವ ಕಾರ್ಯದರ್ಶಿ ಎಂ.ಬಿ. ಸಂಗಮೇಶ್ವರಗೌಡ್ರು, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಚ್‌. ಲೋಕಿಕೆರೆ ಸಿದ್ದಪ್ಪ, ಪರಿಸರ ಪ್ರೇಮಿ ಸಾಲುಮರದ ವೀರಾಚಾರಿ, ಪರಿಸರ ಸಂರಕ್ಷಣಾ ವೇದಿಕೆ ಅಧ್ಯಕ್ಷ ಗಿರೀಶ್‌ ಎಸ್‌. ದೇವರಮನಿ ಇತರರು ಇದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.