ಜನಪದರ ಜ್ಞಾನ ಶ್ರೇಷ್ಠ: ಸ್ವಾಮೀಜಿ


Team Udayavani, Jan 18, 2019, 6:20 AM IST

dvg-4.jpg

ದಾವಣಗೆರೆ: ಜೀವನದ ಅನುಭವದ ಆಧಾರದಲ್ಲಿ ಕಂಡುಕೊಂಡ ಜನಪದರ ಜ್ಞಾನ ಮತ್ತು ತಂತ್ರಜ್ಞಾನ ಅತ್ಯಂತ ಶ್ರೇಷ್ಠ ಎಂದು ಹೆಬ್ಟಾಳ್‌ ವಿರಕ್ತ ಮಠದ ಶ್ರೀ ಮಹಾಂತ ರುದ್ರೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.

ಗುರುವಾರ ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಪಾರಂಪರಿಕ ವೈದ್ಯ ಗುರುಕುಲ, ಪಾರಂಪರಿಕ ವೈದ್ಯ ಪರಿಷತ್‌ ಮತ್ತು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಂಯುಕ್ತಾಶ್ರಯಲ್ಲಿ 2016-17 ಶೈಕ್ಷಣಿಕ ಸಾಲಿನ ಜನಪದ ವೈದ್ಯ ಸರ್ಟಿಫಿಕೇಟ್ ಶಿಕ್ಷಣದ ಪ್ರಮಾಣಪತ್ರ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜನಪದರ ವೈದ್ಯ ಪದ್ಧತಿ ಆಧುನಿಕ ವೈದ್ಯ ಪದ್ಧತಿಗಿಂತಲೂ ಶ್ರೇಷ್ಠವಾದುದು. ಜಾನಪದ ವಿಶ್ವವಿದ್ಯಾಲಯ ಅಂತಹ ಶಿಕ್ಷಣ ಕೊಡ ಮಾಡಿದೆ. ಪಡೆದ ಜ್ಞಾನವನ್ನು ಸರಿಯಾದ ರೀತಿ ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಯತೀಶ್‌ ಎಲ್‌. ಕೋಡಾವತ್‌ ಮಾತನಾಡಿ, ಕರ್ನಾಟಕ ಜನಪದ ಸಾಹಿತ್ಯ, ಕಲೆ ಮತ್ತು ಪಾರಂಪರಿಕ ಜ್ಞಾನದ ಗಣಿ. ಆ ಸಂಪತ್ತಿನ ಸಂರಕ್ಷಣೆ, ಸಂವರ್ಧನೆ, ಸಂಗ್ರಹ, ಪರಿಷ್ಕರಣೆ ಹಾಗೂ ವೈಜ್ಞಾನಿಕ ಸಂಶೋಧನೆಯ ಉದ್ದೇಶದಿಂದ ವಿಶ್ವವಿದ್ಯಾಲಯ ಕಾರ್ಯೋನ್ಮೋಖವಾಗಿದೆ. ಗ್ರಾಮೀಣರ ಮತ್ತು ಅಲಕ್ಷಿತ ಸಮುದಾಯದ ಜ್ಞಾನವನ್ನು ಶೈಕ್ಷಣಿಕ ಶಿಸ್ತಿಗೆ ಅಳವಡಿಸುವ ಮೂಲಕ ಜನಪದರ ಜ್ಞಾನವನ್ನು ಪುನರುಜ್ಜೀವನಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ವ್ಯವಹಾರಿಕ ದೃಷ್ಟಿಯಿಂದ ಕೂಡಿರುವ ಆಧುನಿಕ ಜ್ಞಾನ- ತಂತ್ರಜ್ಞಾನದಲ್ಲಿ ಮಾನವೀಯ ಮೌಲ್ಯದ ಕೊರತೆ ಇದೆ. ಜನಪದರ ಅನುಭವ ಆಧಾರದಲ್ಲಿ ಕಟ್ಟಿಕೊಂಡ ಜ್ಞಾನ, ಸಾಹಿತ್ಯ, ಕಲೆ ಎಲ್ಲದರಲ್ಲಿ ಮಾನವೀಯ ಮನೋಭಾವ ಅಡಕವಾಗಿದೆ. ಬಹುತೇಕ ಜನಪದ ಜ್ಞಾನ ಮೌಖೀಕವಾಗಿ ಸಾಹಿತ್ಯದಲ್ಲಿ ಕಾಣಬಹುದಾಗಿದೆ. ಭಾರತದಲ್ಲಿ ಕಂಡುಕೊಂಡ ವೈದ್ಯ ಜ್ಞಾನ ಸಂಪತ್ತು ಯಾವುದೋ ವಿಧದಲ್ಲಿ ಶ್ರೀಮಂತ ರಾಷ್ಟ್ರಗಳಿಗೆ ತಲುಪಿ, ಅಲ್ಲಿನ ಕಂಪನಿಗಳಿಂದ ಔಷಧಗಳು ಮತ್ತು ಉತ್ಪನ್ನಗಳು ತಯಾರಾಗಿ ನಮಗೆ ಮಾರಾಟವಾಗುತ್ತಿದೆ ಎಂದು ತಿಳಿಸಿದರು.

ನೆಲಮೂಲದ ಜ್ಞಾನ ವೈಜ್ಞಾನಿಕವಾಗಿ ವಿಶ್ಲೇಷಣೆಗೊಂಡು, ಭಾರತೀಯ ಕ್ರಿಯಾಶೀಲ ವಿಜ್ಞಾನಿಗಳಿಗೆ ಆ ಜ್ಞಾನ ತಲುಪಿ ಸಾರ್ವತ್ರಿಕ ಬಳಕೆ ಆಗುವಂತಾಗಬೇಕು. ಜನಪದ ವೈದ್ಯ ಶಿಕ್ಷಣ ಪಡೆದವರು ಪಡೆದ ಜ್ಞಾನವನ್ನು ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಬಳಕೆ ಮಾಡಿಕೊಂಡು ಜಾನಪದ ವಿಶ್ವವಿದ್ಯಾಲಯದ ಘನತೆಯ ಹೆಚ್ಚಿಸುವಂತಾಗಬೇಕು ಎಂದು ಆಶಿಸಿದರು.

ಪಾರಂಪರಿಕ ವೈದ್ಯ ಗುರುಕುಲ ಪ್ರಾಂಶುಪಾಲ ಬಿ.ಎಂ. ಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಪಾರಂಪರಿಕ ವೈದ್ಯ ಪರಿಷತ್‌ ರಾಜ್ಯ ಅಧ್ಯಕ್ಷ ನೇರ್ಲಿಗೆ ಗುರುಸಿದ್ದಪ್ಪ, ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಟಿ.ಎನ್‌. ದೇವರಾಜ್‌, ಪಾರಂಪರಿಕ ವೈದ್ಯ ಪರಿಷತ್‌ ಸಂಸ್ಥಾಪಕ ಪ್ರೊ| ಜಿ. ಹರಿರಾಮಮೂರ್ತಿ, ಶಾಂತವೀರಪ್ಪ ಇತರರು ಇದ್ದರು. ಪಂಕಜಾ ಸ್ವಾಗತಿಸಿದರು. ದೇವರಾಜ್‌ ನಿರೂಪಿಸಿದರು. ಮಮತಾ ವಂದಿಸಿದರು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.