ಕೋಳಿ ಸಾಕಣೆದಾರಗೆ ವಂಚನೆ: ದೇವರಾಜ್ ಆರೋಪ
Team Udayavani, Apr 15, 2022, 3:14 PM IST
ದಾವಣಗೆರೆ: ದಾವಣಗೆರೆ ತಾಲೂಕಿನ ಐಗೂರು ಗ್ರಾಮದ ಸಿ.ಎಸ್. ಶಿವಮೂರ್ತಪ್ಪ ಎಂಬ ಕೋಳಿ ಸಾಕಾಣಿಕೆದಾರರಿಗೆ ಖಾಸಗಿ ಕಂಪನಿಯಿಂದ ವಂಚನೆಯಾಗಿದೆ ಎಂದು ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಲ್ಲಾಪುರದ ದೇವರಾಜ್ ದೂರಿದರು.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೂರ್ತಪ್ಪ ಖಾಸಗಿ ಕಂಪನಿಯಿಂದ ಫೆ. 22ರಂದು ಪ್ರತಿ ಕೋಳಿಮರಿಗೆ 41 ರೂಪಾಯಿಯಂತೆ 20 ಸಾವಿರ ಕೋಳಿಮರಿ ಖರೀದಿಸಿದ್ದರು. ಕಂಪನಿಯವರು ಹೇಳಿದಂತೆ ಸಾಕಾಣಿಕೆ ಮಾಡಿದರೂ ನಿರೀಕ್ಷಿತ ಪ್ರಮಾಣದಲ್ಲಿ ಕೋಳಿ ಮರಿ ಬೆಳೆದಿಲ್ಲ. ಕಂಪನಿಯವರಿಗೆ ಕೇಳಿದರೆ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಕಂಪನಿ ನೀಡಿರುವ ಕೋಳಿ ಮರಿ ಸರಿಯಾದ ಪ್ರಮಾಣದಲ್ಲಿ ಬೆಳೆಯದೆ ನಷ್ಟಕ್ಕೆ ಒಳಗಾಗಿರುವ ರೈತರಿಗೆ ಕಂಪನಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಏ. 18ರಂದು ಸೋಮವಾರ ದಾವಣಗೆರೆಯ ಶಾಮನೂರು ರಸ್ತೆಯ ಲಕ್ಮ್ಷೀ ಫ್ಲೋರ್ ಮಿಲ್ ಬಳಿ ಇರುವ ಕಂಪನಿ ಕಚೇರಿಗೆ ಕೋಳಿಮರಿಗಳೊಂದಿಗೆ ಮುತ್ತಿಗೆ ಹಾಕಲಾಗುತ್ತದೆ. ಇತರೆ ಕೋಳಿ ಸಾಕಾಣಿಕೆದಾರರು ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಐಗೂರು ಗ್ರಾಮದ ಶಿವಮೂರ್ತಪ್ಪ ಆಗಿರುವ ವಂಚನೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು. ಜಿಲ್ಲಾಡಳಿತ ಶನಿವಾರದ ಒಳಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಸೋಮವಾರ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬುಳ್ಳಾಪುರದ ಹನುಮಂತಪ್ಪ, ಐಗೂರು ಶಿವಮೂರ್ತಪ್ಪ, ಬುಳ್ಳಾಪುರದ ಪರಮೇಶ್ವರಪ್ಪ, ನಾಗರಕಟ್ಟೆ ಜಯ ನಾಯ್ಕ, ಗೌಡ್ರುಬಸವರಾಜ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ