ಪ್ರತಿಭಾ ಕಾರಂಜಿ ಮಕ್ಕಳಿಗೆ ಪೂರಕ
Team Udayavani, Sep 4, 2017, 3:48 PM IST
ಹೊನ್ನಾಳಿ: ಪ್ರಾಥಮಿಕ ಹಂತದಿಂದ ಪ್ರೌಢಶಾಲಾ ಹಂತದವರೆಗೆ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಗಳಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಪ್ತವಾದ ಪ್ರತಿಭೆ ಅರಳುತ್ತದೆ ಎಂದು ತಾಪಂ ಉಪಾಧ್ಯಕ್ಷ ಸಿ.ಆರ್. ಶಿವಾನಂದ್ ಹೇಳಿದರು.
ಪಟ್ಟಣದ ಭಾರತೀಯ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅನಾವರಣಗೊಳ್ಳಲು ಪಠ್ಯೇತರ ಚಟುವಟಿಕೆಗಳು ಪೂರಕವಾಗಿ ಕೆಲಸ ಮಾಡುತ್ತವೆ ತಾಲೂಕಿನ ಬಾಲ ಪ್ರತಿಭೆಗಳು ರಾಜ್ಯಮಟ್ಟದವರೆಗೂ ಭಾಗವಹಿಸಿ ತಾಲೂಕಿನ ಹೆಸರನ್ನು ಗುರ್ತಿಸುವ ಕಾರ್ಯ ಮಾಡಲಿ ಎಂದು ಹಾರೈಸಿದರು.ಜಿಪಂ ಸದಸ್ಯರಾದ ಎಂ.ಆರ್.ಮಹೇಶ್, ದೀಪಾ ಜಗದೀಶ್, ಸುರೇಂದ್ರನಾಯ್ಕ,
ಬಿಆರ್ಸಿ ಎಚ್.ಎಸ್.ಉಮಾಶಂಕರ್, ಅಕ್ಷರದಾಸೋಹ ಸಹಾಯಕ ನಿರ್ದೇಶಕ ವಿರೂಪಾಕ್ಷಪ್ಪ, ಜಿಲ್ಲಾ ತರಬೇತಿ ಸಂಸ್ಥೆ ಉಪನ್ಯಾಸಕ ಲಕ್ಷ ಣ್, ಸಂಸ್ಥೆ ಕಾರ್ಯದರ್ಶಿ ಡಾ|ರಾಜಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರು ಸಂಘದ ತಾಲೂಕು ಅಧ್ಯಕ್ಷ ಎಸ್.ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ
ಕೆ.ಎಂ. ಕರಿಬಸಯ್ಯ, ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರಪ್ಪ ಮಾತನಾಡಿದರು.
ಜಿಪಂ ಅಧ್ಯಕ್ಷೆ ಉಮಾ ರಮೇಶ್ ಉದ್ಘಾಟಿಸಿದರು. ತಾಪಂ ಅಧ್ಯಕ್ಷೆ ಸುಲೋಚನಮ್ಮ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಲ್. ರಂಗಪ್ಪ, ಇಸಿಒಗಳಾದ ಮಹಾಂತೇಶ್, ಗೋವಿಂದರಾಜ್, ಬಿಆರ್ಪಿ ಹನುಮಂತಪ್ಪ, ಸಿಆರ್ಪಿ ಮರಶುರಾಮಪ್ಪ, ಬಿವಿ ಸಂಸ್ಥೆ ಅಧ್ಯಕ್ಷೆ ಬಿ.ಎಲ್. ವೈಶ್ಯರ್, ಸರ್ಕಾರಿ ನೌಕರ ಒಕ್ಕೂಟ ಅಧ್ಯಕ್ಷ ಸಣ್ಣಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!