![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಮನೆ-ತಾರಸಿ ಮೇಲೆ ಪ್ರಾರ್ಥನೆ ಸಲ್ಲಿಸಿದ್ರು
Team Udayavani, May 26, 2020, 5:54 AM IST
![ಮನೆ-ತಾರಸಿ ಮೇಲೆ ಪ್ರಾರ್ಥನೆ ಸಲ್ಲಿಸಿದ್ರು](https://www.udayavani.com/wp-content/uploads/2020/05/Dav-Ramzan-620x394.jpg)
ಹರಿಹರ: ರಂಜಾನ್ ಅಂಗವಾಗಿ ಮುಸ್ಲಿಂ ಸಮುದಾಯದ ಚಿಣ್ಣರು ಹೊಸ ಬಟ್ಟೆ ಧರಿಸಿ ಸಂಭ್ರಮಿಸಿದರು.
ಹರಿಹರ: ಹಸಿವಿನ ಮೌಲ್ಯ, ಬಡವರ ಬಗ್ಗೆ ಕಾಳಜಿ, ಆತ್ಮ ಪರಿಷ್ಕರಣೆಯ ಸಂದೇಶ ನೀಡುವ ಈದ್-ಉಲ್ -ಫಿತರ್ (ರಂಜಾನ್) ಹಬ್ಬವನ್ನು ಸೋಮವಾರ ತಾಲೂಕಿನಾದ್ಯಂತ ಮುಸ್ಲಿಂ ಸಮುದಾಯದವರು ಸರಳವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಲಾಕ್ಡೌನ್ ನಿಮಿತ್ತ ಈದ್ಗಾ ಮೈದಾನ, ಮಸೀದಿಗಳ ಸಾಮೂಹಿಕ ಪ್ರಾರ್ಥನೆಗಳಿಂದ ದೂರ ಉಳಿದು ತಮ್ಮ ಮನೆಗಳಲ್ಲಿ ಕುಟುಂಬದ ಸದಸ್ಯರೊಂದಿಗೆ ಪ್ರಾರ್ಥನೆ ಸಲ್ಲಿಸಲಾಯಿತು. ಹಲವರು ತಮ್ಮ ಮನೆಗಳ ತಾರಸಿ ಮೇಲೆಯೆ ಬೆಳಿಗ್ಗೆ ಹಬ್ಬದ ಪ್ರಾರ್ಥನೆ ಸಲ್ಲಿಸಿದರೆ, ಹಂಚಿನ ಮನೆಯವರು ಮನೆಯೊಳಗೆ ಸಲ್ಲಿಸಿದರು. ಬಹುತೇಕರಿಗೆ ಹಬ್ಬದ ಪ್ರಾರ್ಥನೆ ಮನೆಗಳಲ್ಲಿ ಸಲ್ಲಿಸುತ್ತಿರುವುದು ಪ್ರಥಮ ಅನುಭವವಾಯಿತು.
ಲಾಕ್ಡೌನ್ ಜನರ ದುಡಿಮೆ ಮೇಲೆ ಗದಾಪ್ರಹಾರ ಮಾಡಿದ್ದರೂ, ಮುಸ್ಲಿಮರು ಮನೆಗಳಲ್ಲಿ ಸಿಹಿ ಅಡುಗೆ ಮಾಡಿ ಸೇವಿಸಿದರು. ಕೆಲವರು ಅನ್ಯಧರ್ಮಿಯ ನೆರೆಹೊರೆಯವರಿಗೆ ಸಿಹಿಯೂಟವನ್ನು ಹಂಚಿದರು. ಬಡವರೂ ಕೂಡ ಹೊಸ ಬಟ್ಟೆ ಧರಿಸುವ ಈ ಹಬ್ಬದಲ್ಲಿ ಬಹುತೇಕರು ಹಳೆ ಬಟ್ಟೆಗಳನ್ನೇ ಆಶ್ರಯಿಸಿದರು. ಕೆಲ ಮಕ್ಕಳು ಮಾತ್ರ ಹೊಸ ಬಟ್ಟೆ ಧರಿಸಿ ಸಂಭ್ರಮ ಪಟ್ಟರು. ಸಮಾಜದವರ ಕರೆಯ ಮೇರೆಗೆ ಈ ಬಾರಿ ಹೊಸ ಬಟ್ಟೆ ಖರೀದಿಯಿಂದ ಜನರು ದೂರವಿದ್ದರು.
ಕುಟುಂಬದಲ್ಲಿರುವಆಭರಣ, ಆಸ್ತಿ, ಆದಾಯವವನ್ನು ಆಧರಿಸಿ ನೀಡುವ ದಾನಕ್ಕೆ ಜಕಾತ್ ಎಂದೂ, ಕುಟುಂಬದ ಸದಸ್ಯರ ಸಂಖ್ಯೆಯನ್ನಾಧರಿಸಿ ನೀಡುವ ದಾನಕ್ಕೆ ಫಿತರಾ ಎನ್ನಲಾಗುತ್ತದೆ. ಉಳ್ಳವರು ಸುತ್ತಲಿನ ಬಂಧು, ಬಳಗ, ವಿಧವೆ, ಅನಾಥರಿಗೆ ದಾನ ಮಾಡಿದರು. ತಾಲೂಕಿನಭಾನುವಳ್ಳಿ, ಕರಲಹಳ್ಳಿ, ಮಲೆಬೆನ್ನೂರು, ಬೆಳ್ಳೂಡಿ, ಕೊಂಡಜ್ಜಿ, ಹೊಳೆಸಿರಿಗೆರೆ, ಕೆ.ಎನ್. ಹಳ್ಳಿ, ಅಮರಾವತಿ, ಎಕ್ಕೆಗೊಂದಿ, ರಾಜನಹಳ್ಳಿ, ಹಲಸಬಾಳು ಇತರೆ ಗ್ರಾಮಗಳಲ್ಲೂ ರಂಜಾನ್ ಆಚರಿಸಲಾಯಿತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.