ಕುಂದೂರಿನ ರೇಣುಕಾಚಾರ್ಯ ತೋಟದಲ್ಲಿ ಚಂದ್ರಶೇಖರ್ ಅಂತ್ಯಕ್ರಿಯೆಗೆ ಸಕಲ ಸಿದ್ದತೆ
Team Udayavani, Nov 4, 2022, 1:31 PM IST
ದಾವಣಗೆರೆ: ಹೊನ್ನಾಳಿ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರಎಂ. ಪಿ. ರಮೇಶ್ ಪುತ್ರ ಎಂ.ಆರ್. ಚಂದ್ರಶೇಖರ್ (24) ಅಂತ್ಯಕ್ರಿಯೆ ಹೊನ್ನಾಳಿ ತಾಲೂಕಿನ ಕುಂದೂರಿನಲ್ಲಿ ನಡೆಸಲು ಎಲ್ಲ ಸಿದ್ಧತೆ ನಡೆದಿದೆ.
ಕಳೆದ ಭಾನುವಾರ (ಅ.30) ನಾಪತ್ತೆಯಾಗಿದ್ದ ಚಂದ್ರಶೇಖರ್ ಅವರು ಗುರುವಾರ ಎಚ್. ಕಡದಕಟ್ಟೆ ತುಂಗಾ ನಾಲೆಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಗುರುವಾರ ರಾತ್ರಿಯೇ ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ತಡರಾತ್ರಿಯೇ ಪಾರ್ಥಿವ ಶರೀರವನ್ನು ಹೊನ್ನಾಳಿಗೆ ತೆಗೆದುಕೊಂಡು ಹೋಗಿ ಸಾರ್ವಜನಿಕ ದರ್ಶನಕ್ಕಿಡಲಾಗಿತ್ತು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಒಳಗೊಂಡಂತೆ ಅನೇಕರು ಮನೆಗೆ ಭೇಟಿ ನೀಡಿ ರೇಣುಕಾಚಾರ್ಯ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಹೊನ್ನಾಳಿ, ನ್ಯಾಮತಿ ಸೇರಿದಂತೆ ಹಳ್ಳಿಗಳಿಂದಲೂ ಜನರು ಜಮಾಯಿಸಿದ್ದು, ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಮುಖಂಡರು, ಕಾರ್ಯಕರ್ತರು ಅಂತಿಮ ದರ್ಶನ ಪಡೆದರು. ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
ಇದನ್ನೂ ಓದಿ:ನಾಪತ್ತೆಯಾಗುವ ಮೊದಲು ವಿನಯ್ ಗುರೂಜಿ ಆಶ್ರಮಕ್ಕೆ ಬಂದಿದ್ದ ಚಂದ್ರಶೇಖರ್
ಹೊನ್ನಾಳಿಯ ಹಿರೇಮಠದ ವೃತ್ತದಿಂದ, ಮರಳೋಣಿ ರಸ್ತೆ, ದುರ್ಗಿಗುಡಿ ಸರ್ಕಲ್ ನಿಂದ ಪೇಟೆ ಹಳದಮ್ಮ ದೇಸ್ಥಾನದಿಂದ ಕೆನರಾಬ್ಯಾಂಕ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ ದೇವನಾಯ್ಕನಹಳ್ಳಿ, ಗೊಲ್ಲರಹಳ್ಳಿ ಮಾರ್ಗವಾಗಿ ಮಾಸಡಿ, ತರಗನಹಳ್ಳಿ ಸಿಂಗಟಗೆರೆ, ಹನುಮನಹಳ್ಳಿಗೆ ಪಾರ್ಥಿವ ಶರೀರ ತಲುಪಿದೆ. ಬಳಿಕ ರೇಣುಕಾಚಾರ್ಯರ ಹುಟ್ಟೂರು ಕುಂದೂರು ತಲುಪಿ, ಕುಂದೂರಿನ ಪ್ರಮುಖ ರಸ್ತೆಯಲ್ಲಿ ಅಂತಿಮ ಯಾತ್ರೆ ನಡೆಯಲಿದೆ.
ಕುಂದೂರಿನಲ್ಲಿರುವ ರೇಣುಕಾಚಾರ್ಯರ ತೆಂಗಿನತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ರೇಣುಕಾಚಾರ್ಯರ ತಂದೆ, ತಾಯಿ ಹಾಗೂ ಚಂದ್ರುವಿನ ಅಜ್ಜ ಅಜ್ಜಿಯ ಸಮಾಧಿ ಮಧ್ಯೆ ಅಂತ್ಯಕ್ರಿಯೆ ನಡೆಯಲಿದೆ. ಕುಂದೂರಿನಲ್ಲಿ ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಜನರು ಮುಚ್ಚಿದ್ದಾರೆ. ಬಂದ್ ವಾತಾವರಣ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ