ವಿಕಲಚೇತನರಿಗೆ ವಾಹನ ವಿತರಿಸಲು ಸಿದ್ಧತೆ


Team Udayavani, Jul 27, 2018, 2:44 PM IST

27-july-12.jpg

ಬಳ್ಳಾರಿ: ಜಿಲ್ಲೆಯ ವಿಕಲಚೇತನರಿಗೆ ವಿತರಿಸಲಾಗುವ ತ್ರಿಚಕ್ರ ವಾಹನಗಳು ನಗರದ ವಿಕಲಚೇತರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆವರಣದಲ್ಲಿ ಸಿದ್ಧವಾಗಿದ್ದು, ಆ.15ರಂದು ನಡೆಯುವ ಸ್ವಾತಂತ್ರ್ಯೋತ್ಸವ ದಿನದಂದು ಫಲಾನುಭವಿಗಳಿಗೆ ವಿತರಿಸುವ ಸಾಧ್ಯತೆಯಿದೆ.

ಹಿಂದಿನ ಕಾಂಗ್ರೆಸ್‌ ಸರ್ಕಾರ ಕಳೆದ 2015-16ನೇ ಸಾಲಿನಲ್ಲಿ ಮೊದಲ ಬಾರಿಗೆ ವಿಕಲಚೇತನರಿಗೆ (ದೈಹಿಕ ನ್ಯೂನ್ಯತೆಯುಳ್ಳ) ತ್ರಿಚಕ್ರ ವಾಹನಗಳನ್ನು ವಿತರಿಸುವಂತೆ ಆದೇಶ ಹೊರಡಿಸಿತ್ತು. ಅದರಂತೆ ಮೊದಲ ವರ್ಷ (2015-16) ಮೊದಲ ಹಂತದಲ್ಲಿ 38 ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ ಇಲಾಖೆಯು ವಿತರಿಸಿತ್ತು. ಆದರೆ, ಆಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ಉಮಾಶ್ರೀ ಅವರು, ಮಹಿಳಾ ವಿಕಲಚೇತನರಿಗೂ ಹೆಚ್ಚಿನ ಪ್ರಮಾಣದಲ್ಲಿ ವಿತರಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಪುನಃ 14 ವಾಹನಗಳನ್ನು ಖರೀದಿಸಿ ವಿಶೇಷ ಮಹಿಳೆಯರಿಗೆ ವಿತರಿಸಲಾಗಿತ್ತು. ಬಳಿಕ 2016-17ರಲ್ಲಿ 72 ತ್ರಿಚಕ್ರ ವಾಹನಗಳನ್ನು ವಿತರಿಸಲಾಗಿದ್ದು, ಇದೀಗ 2017-18ನೇ ಸಾಲಿನ ಒಟ್ಟು 135 ತ್ರಿಚಕ್ರ ವಾಹನಗಳು ಇಲಾಖೆಯ ಕಚೇರಿ ಆವರಣದಲ್ಲಿ ಫಲಾನುಭವಿಗಳ ಕೈ ಸೇರಲು ಸಿದ್ಧವಾಗಿವೆ. ಅಂದು ಧ್ವಜಾರೋಹಣದ ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು ಅಥವಾ ಇಲಾಖೆಗೆ ಸಂಬಂಧಪಟ್ಟ ಸಚಿವರ ಸಮಕ್ಷಮದಲ್ಲಿ ವಾಹನಗಳ ಬೀಗವನ್ನು ಫಲಾನುಭವಿಗಳಿಗೆ ಹಸ್ತಾಂತರಿಸುವ ಮೂಲಕ ವಾಹನಗಳನ್ನು ವಿತರಿಸಲಾಗುತ್ತದೆ.

ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ಪೈಕಿ ಬಳ್ಳಾರಿ (ನಗರ ಕ್ಷೇತ್ರ ಬಿಟ್ಟು) ಗ್ರಾಮೀಣ 27, ಹಡಗಲಿ 21, ಸಂಡೂರು 8, ಹೊಸಪೇಟೆ 63, ಹ.ಬೊ.ಹಳ್ಳಿ 20, ಕಂಪ್ಲಿ 40, ಕೂಡ್ಲಿಗಿ 23, ಸಿರುಗುಪ್ಪ 28 ಸೇರಿ ಒಟ್ಟು 230 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಆದರೆ, ಕೇವಲ 135 ವಾಹನಗಳಿಗೆ ಮಾತ್ರ ಬೇಡಿಕೆ ಇರುವುದರಿಂದ ವಾಹನ ಪಡೆದು ಎರಡನೇ ಬಾರಿಗೆ ಸಲ್ಲಿಸಿದ ಒಟ್ಟು 44 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ಈ ಪೈಕಿ ವಿಜಯನಗರ (ಹೊಸಪೇಟೆ) ಕ್ಷೇತ್ರದ್ದೇ 24 ಅರ್ಜಿಗಳಾಗಿವೆ. ಒಟ್ಟು 135 ವಾಹನಗಳನ್ನು ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಗೂ ತಲಾ 15 ವಾಹನಗಳನ್ನು ವಿತರಿಸಲಾಗುತ್ತದೆ ಎನ್ನುತ್ತವೆ ಇಲಾಖೆಯ ಮೂಲಗಳು.

ಪ್ರತಿ ವಾಹನಕ್ಕೆ ಅಂದಾಜು 64500 ರೂ. ವೆಚ್ಚವಾಗಿದ್ದು, 135 ವಾಹನಗಳಿಗೆ ಒಟ್ಟು ಅಂದಾಜು 87 ಲಕ್ಷಕ್ಕೂ ಹೆಚ್ಚು ವೆಚ್ಚವಾಗಿದೆ. ಕಳೆದ ಜೂನ್‌ ತಿಂಗಳಾಂತ್ಯದಲ್ಲಿ ತ್ರಿಚಕ್ರ ವಾಹನಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಖರೀದಿಸಿದೆ. ಜಿಲ್ಲೆಯಲ್ಲಿ ಬುದ್ಧಿಮಾಂದ್ಯರು, ಕಿವುಡರು, ಮೂಗರು, ಅಂಧರು, ದೈಹಿಕ ನ್ಯೂನ್ಯತೆಯುಳ್ಳವರು ಸೇರಿ ಒಟ್ಟು 21 ಸಾವಿರಕ್ಕೂ ವಿಕಲಚೇತನರಿದ್ದು, ಈ ಪೈಕಿ ದೈಹಿಕ ನ್ಯೂನ್ಯತೆಯುಳ್ಳ ಅಂಗವಿಕಲರಿಗೆ ಮಾತ್ರ ಇಲಾಖೆಯಿಂದ ತ್ರಿಚಕ್ರ ವಾಹನವನ್ನು ವಿತರಿಸಲಾಗುತ್ತದೆ ಎಂದು ಇಲಾಖೆಯ ಸಬಲೀಕರಣ ಅಧಿಕಾರಿ ಮಹಾಂತೇಶ್‌ ತಿಳಿಸಿದ್ದಾರೆ.

ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಿಂದ ತ್ರಿಚಕ್ರ ವಾಹನಕ್ಕಾಗಿ ಅರ್ಜಿ ಸಲ್ಲಿಸಿದ್ದ 230 ಫಲಾನುಭವಿಗಳಲ್ಲಿ 44 ತಿರಸ್ಕರಿಸಲಾಗಿದೆ. ಇನ್ನುಳಿದ 186 ಫಲಾನುಭವಿಗಳಲ್ಲಿ ಸದ್ಯ ಖರೀದಿಸಿರುವ ವಾಹನಗಳು 135 ಜನರಿಗೆ ಮಾತ್ರ ಸಾಲಲಿದ್ದು, ಇನ್ನುಳಿದ 51 ಫಲಾನುಭವಿಗಳಿಗೆ ಜಿಲ್ಲಾ ಖನಿಜ ನಿಧಿಯಿಂದ ಖರೀದಿಸಿ ವಿತರಿಸುವ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸೂಚನೆ ಬಂದಲ್ಲಿ ಉಳಿದ 51 ಫಲಾನುಭವಿಗಳಿಗೂ ಪ್ರಸಕ್ತ ವರ್ಷವೇ ತ್ರಿಚಕ್ರ ವಾಹನ ಭಾಗ್ಯ ದೊರೆಯಲಿದೆ.

ವಿಕಲಚೇತನರಿಗಾಗಿ ಇಲಾಖೆಯಿಂದ ಒಟ್ಟು 135 ವಾಹನಗಳನ್ನು ಖರೀದಿಸಲಾಗಿದೆ. ಆ.15 ರಂದು ವಿತರಿಸಲು ಸಿದ್ಧತೆ ನಡೆಸಿದ್ದು, ಎಲ್ಲ ವಾಹನಗಳಿಗೂ ಆರ್‌ ಟಿಒ ಕಚೇರಿಯಲ್ಲಿ ಫಲಾನುಭವಿಗಳ ಹೆಸರಲ್ಲಿ ನೋಂದಣಿ ಮಾಡಿಸಿ, ಬೀಗದ ಕೈ ಜತೆಗೆ ಆರ್‌ಸಿ ಬುಕ್‌ ಕೊಟ್ಟು ಕಳುಹಿಸಲಾಗುವುದು. ಆದರೆ, ಫಲಾನುಭವಿಗಳು ವಾಹನಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. 135 ವಾಹನಗಳನ್ನು ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳ ತಲಾ 15 ಫಲಾನುಭವಿಗಳಿಗೆ ವಾಹನ ವಿತರಿಸಲಾಗುತ್ತದೆ.
ಮಹಾಂತೇಶ್‌,
ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.