ರಾಜ್ಯದಲ್ಲಿ ಕೆಲವೇ ದಿನದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ: ಸಿ.ಎಂ.ಇಬ್ರಾಹಿಂ ಭವಿಷ್ಯ
Team Udayavani, Feb 13, 2022, 4:40 PM IST
ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ರೀತಿ ಫಂಚರ್ ಆದ ಬಸ್ ಇದ್ದಂತೆ. ಯಾವಾಗ ಏನಾಗುತ್ತೋ ಗೊತ್ತಿಲ್ಲ. ಏನು ಬೇಕಾದರೂ ಆಗಬಹುದು. ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರಲಿದೆ ಎಂದು ವಿಧಾನ ಪರಿಷತ್ತು ಸದಸ್ಯ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕಥೆ ಆಗಲೇ ಮುಗಿದಿದೆ. ಅದನ್ನು ಸುಡಬೇಕೋ ಉಳಬೇಕೋ ಎನ್ನುವುದೇ ಸದ್ಯ ಇರುವ ಪ್ರಶ್ನೆ. ಬಸವಕೃಪಾ (ಲಿಂಗಾಯತ) ಆದರೆ ಊಳಬೇಕು. ಕೇಶವ ಕೃಪಾ (ಆರ್ಎಸ್ಎಸ್) ಆದರೆ ಸುಡಬೇಕು ಎನ್ನುವ ಸ್ಥಿತಿಯಿದೆ ಎಂದರು.
ಇದನ್ನೂ ಓದಿ:ಧರ್ಮ ಗ್ರಂಥಕ್ಕೆ ಬೆಂಕಿ: ಪಾಕಿಸ್ಥಾನದಲ್ಲಿ ಗುಂಪಿನಿಂದ ವ್ಯಕ್ತಿಯ ಬರ್ಬರ ಹತ್ಯೆ
ಬಿಜೆಪಿಯವರಿಗೆ ರಾಮ ಮಂದಿರ ಆಯಿತು, ಗೋ ಹತ್ಯೆ ಆಯಿತು. ಈಗ ಹಿಜಾಬ್ ಹಿಡಿದಿದ್ದಾರೆ. ಹಿಜಾಬ್ ಅಂದರೆ ಬಿಜೆಪಿಯವರಿಗೆ ಅರ್ಥವೇ ಗೊತ್ತಿಲ್ಲ. ಹಿಜಾಬ್ ಅಂದರೆ ತಲೆ ಮೇಲೆ ಸೆರಗು ಹೊತ್ತುಕೊಳ್ಳುವುದು. ಕೆಲ ಮಹಿಳೆಯರು ಮುಖದ ತುಂಬ ಸೆರಗು ಹೊತ್ತುಕೊಳ್ಳುತ್ತಾರೆ. ಅದು ತಪ್ಪಾ. ಅವರು ಸಮವಸ್ತ್ರ ಮಾಡಲಿ. ಮಕ್ಕಳು ವೇಲ್ ಹೆಗಲ ಮೇಲೆ ಹಾಕಿಕೊಳ್ಳುತ್ತಾರೆ. ಅದೇ ವೇಲ್ ತಲೆ ಮೇಲೆ ಹಾಕಿಕೊಂಡರೆ ಇವರಿಗೆ ಏನು ಕಷ್ಟ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ