ಮಾನವ ಕಳ್ಳಸಾಗಣೆ ತಡೆಯಿರಿ
Team Udayavani, Jun 13, 2018, 11:29 AM IST
ಹರಿಹರ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಾರ್ಮಿಕ, ಪೊಲೀಸ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಾನವ ಕಳ್ಳಸಾಗಣೆ ತಡೆಯುವ ಹಾಗೂ ರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ನಗರದಲ್ಲಿ ಮಂಗಳವಾರ ಜಾಗೃತಿ ಜಾಥಾ ನಡೆಸಲಾಯಿತು.
ಎಂಆರ್ಬಿ ಶಾಲೆ ಆವರಣದಿಂದ ಆರಂಭವಾದ ಜಾಥಾಕ್ಕೆ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರಾದ ವೈ.ಕೆ. ಬೇನಾಳ ಚಾಲನೆ ನೀಡಿದರು. ಜಾಥಾ ಹಳೆ ಪಿ.ಬಿ ರಸ್ತೆ, ಗಾಂಧಿ ವೃತ್ತ, ಮುಖ್ಯ ರಸ್ತೆ, ಶಿವಮೊಗ್ಗ ವೃತ್ತ, ಶಿವಮೊಗ್ಗ ರಸ್ತೆ, ಶೋಭಾ ಟಾಕೀಸ್ ವೃತ್ತ ಮಾರ್ಗವಾಗಿ ಸಾಗಿತು.
ಜಾಥಾದಲ್ಲಿ ಪಾಲ್ಗೊಂಡಿದ್ದ ಮಕ್ಕಳು, ಮಾನವ ಕಳ್ಳಸಾಗಣೆ ಬೇಡ, ಮಕ್ಕಳು ಬಾಲಕಾರ್ಮಿಕರಾಗಬಾರದು, ಬಾಲ್ಯ ಮತ್ತು ಶಿಕ್ಷಣ ಮಕ್ಕಳ ಹಕ್ಕು ಎಂದು ಘೋಷಣೆ ಕೂಗುತ್ತ ಘೋಷ ವಾಕ್ಯಗಳ ಫಲಕ ಪ್ರದರ್ಶಿಸಿ ಜಾಗೃತಿ ಮೂಡಿಸಿದರು.
ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯಗಳ ನ್ಯಾಯಾಧಿಧೀಶರಾದ ಬೆಣ್ಣಿಕಲ್ ಸುಮಲತಾ, ಅವಿನಾಶ್ ಚಿಂದು ಎಚ್., ವಕೀಲರ ಸಂಘದ ಅಧ್ಯಕ್ಷ ಬಸವರಾಜ್ ಓಂಕಾರಿ, ತಹಶೀಲ್ದಾರ್ ರಕ್ಷಿತ್ ಕೆ.ಆರ್., ಎಪಿಪಿಗಳಾದ ಶಂಷೀರ್ ಅಲಿ ಖಾನ್, ಎಂ.ಎಂ ಬಸವರಾಜ್, ಎಜಿಬಿ ಸಿ.ಚನ್ನಪ್ಪ, ಬಿಇಒ ನರಸಿಂಹಪ್ಪ ಡಿ., ಸಮಾಜ ಕಲ್ಯಾಣಾಧಿಕಾರಿ ಪರಮೇಶ್ವರಪ್ಪ, ಸಿಡಿಪಿಒ ರಾಮಲಿಂಗಪ್ಪ ಎನ್. ಅರಳಗುಪ್ಪಿ, ಕಾರ್ಮಿಕ ನಿರೀಕ್ಷಕ ಟಿ.ರಾಜಪ್ಪ, ಎಂಆರ್ಬಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್. ಕೃಷ್ಣಮೂರ್ತಿ ಶ್ರೇಷ್ಠಿ, ಶಿಕ್ಷಕ ಅರುಣ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ