ಖಾಸಗಿ ವೈದ್ಯರ ಪ್ರತಿಭಟನೆ; ರೋಗಿಗಳ ಪರದಾಟ


Team Udayavani, Jul 29, 2018, 5:29 PM IST

dvg-2.jpg

ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ)ಮಸೂದೆ ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘಟನೆ ಶನಿವಾರ ಕರೆ ನೀಡಿದ್ದ ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂಗಳ ಹೊರ ರೋಗಿಗಳ ಬಂದ್‌ ಹಿನ್ನೆಲೆಯಲ್ಲಿ ರೋಗಿಗಳು ಸಾಕಷ್ಟು ಪರದಾಡುವಂತಾಯಿತು.

ಮೆಡಿಕಲ್‌ ಹಬ್‌… ದಾವಣಗೆರೆಯಲ್ಲಿ 60 ನರ್ಸಿಂಗ್‌ ಹೋಂ, 85 ಖಾಸಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ವಿಭಾಗ ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದರಿಂದ ಅನೇಕರು ತೊಂದರೆ ಅನುಭವಿಸಿದರು. 

ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂಗಳ ಬಂದ್‌ ಬಗ್ಗೆ ಮಾಹಿತಿ ಇಲ್ಲದೆ ಬಂದವರು ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂಗಳ ಸಿಬ್ಬಂದಿ ವಿಚಾರಿಸಿ, ಬೇಸರದಿಂದ ಹಿಂತಿರುಗುವುದು ಸಾಮಾನ್ಯವಾಗಿತ್ತು.

ಕೆಲವಾರು ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂ ಹೊರತುಪಡಿಸಿ ಬೇರೆ ಕಡೆ ಬಂದ್‌ ಬಗ್ಗೆ ಯಾವುದೇ ಮಾಹಿತಿ
ಇರಲಿಲ್ಲ. ಸಂಪೂರ್ಣ, ಅರ್ಧ ಬಾಗಿಲು ಹಾಕಿದ್ದರಿಂದ ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂಗಳಿಗೆ ಬಂದವರು
ಏನೂ ಗೊತ್ತಾಗದೆ ಪರಿತಪಿಸಿದರು. ಬಾಣಂತಿ, ಗರ್ಭಿಣಿಯರು,

ಇತರೆ ಆರೋಗ್ಯ ಸಮಸ್ಯೆಯಿಂದ ನರಳುತ್ತಿದ್ದವರು ಸಂಜೆ 6 ಗಂಟೆಯವರೆಗೆ ಡಾಕ್ಟರ್‌ ಸಿಗುವುದಿಲ್ಲ ಎಂಬ ವಿಷಯ
ತಿಳಿದು, ವಾಪಸ್ಸಾದರು. ಆದರೆ, ದೂರದ ಊರುಗಳಿಂದ ಬಂದವರು ಅತ್ತ ಡಾಕ್ಟರ್‌ ಕಾಣದೆ, ಇನ್ನೊಂದು ಕಡೆ ತಮ್ಮ
ಊರಿಗಳಿಗೂ ಹೋಗಲಾಗದ ಸಂದಿಗ್ಧತೆ ಅನುಭವಿಸಿದರು.
 
ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂಗಳ ಬಂದ್‌ ಕಾರಣಕ್ಕೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಸಾಮಾನ್ಯ
ದಿನಕ್ಕಿಂತಲೂ ಹೆಚ್ಚಿನ ಜನಸಂದಣಿ ಕಂಡು ಬಂದಿತು. ಎಲ್ಲಾ ವೈದ್ಯರು ಕರ್ತವ್ಯಕ್ಕೆ ಹಾಜರಾಗಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ
ಒಳ ಮತ್ತು ಹೊರ ರೋಗಿಗಳು ಇದ್ದ ಕಾರಣಕ್ಕೆ ಜನರು ಕಾಯುವಂತಾಯಿತು. 

ಅತಿ ಹೆಚ್ಚಿನ ಖಾಸಗಿ ಆಸ್ಪತ್ರೆ, ಕ್ಲಿನಿಕ್‌, ನರ್ಸಿಂಗ್‌ ಹೋಂಗಳು ಇರುವ ಪಿ.ಜೆ. ಬಡಾವಣೆ, ಎಂಸಿಸಿ ಎ, ಎಂಸಿಸಿ ಬಿ ಬ್ಲಾಕ್‌ ಇತರೆಡೆ ಜನರು ಕಾಯುತ್ತಿರುವುದು ಕಂಡು ಬಂದಿತು. ಬಾಪೂಜಿ, ಎಸ್‌.ಎಸ್‌. ಆಸ್ಪತ್ರೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ಕರ್ತವ್ಯಕ್ಕೆ ಹಾಜರಾಗಿದ್ದರು.
 
ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‌ಎಂಸಿ) ಮಸೂದೆ
ವಿರೋಧಿಸಿ ಭಾರತೀಯ ವೈದ್ಯಕೀಯ ಸಂಘಟನೆ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸುದ್ದಿಗೋಷ್ಠಿ ನಡೆಸಿ, ರಾಷ್ಟ್ರೀಯ  ವೈದ್ಯಕೀಯ ಆಯೋಗ(ಎನ್‌ಎಂಸಿ) ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.