ಭೂಮಿಯ ಆರೋಗ್ಯ ಕಾಪಾಡಲು ಮುಂದಾಗಿ


Team Udayavani, Jan 14, 2019, 6:12 AM IST

dvg-7.jpg

ದಾವಣಗೆರೆ: ದೇಶದ ನಿಜವಾದ ಉತ್ಪಾದಕ ರೈತ ವಿನಃ ಟಾಟಾ, ಬಿರ್ಲಾ ಅಲ್ಲ ಎಂದು ಧಾರವಾಡದ ಮನಗುಂಡಿಯ ಶ್ರೀ ಗುರುಬಸವ ಮಹಾಮನೆಯ ನಿಸರ್ಗ ಚಿಕಿತ್ಸೆ ತಜ್ಞ ಶ್ರೀ ಬಸವಾನಂದ ಸ್ವಾಮೀಜಿ ಹೇಳಿದರು.

ಪಿ.ಬಿ. ರಸ್ತೆಯ ರೇಣುಕಾ ಮಂದಿರದಲ್ಲಿ ಭಾನುವಾರ ಕೃಷಿ ಇಲಾಖೆ ಹಮ್ಮಿಕೊಂಡಿರುವ 2 ದಿನಗಳ ಸಾವಯವ ಮತ್ತು ಸಿರಿಧಾನ್ಯ ಮೇಳ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಟಾಟಾ, ಬಿರ್ಲಾ ಮುಂತಾದವರು ಈ ಭೂಮಿಯನ್ನು ಬರಡಾಗಿಸಿದ್ದಾರೆ. ಅವರು ಅನುತ್ಪಾದಕರು. ಆದರೆ, ದೇಶದ ನಿಜವಾದ ಉತ್ಪಾದಕ ರೈತ ಮಾತ್ರ. ಈ ಹಿನ್ನೆಲೆಯಲ್ಲಿ ರೈತ ಬೆಳೆದ ಬೆಳೆ ನೇರವಾಗಿ ಗ್ರಾಹಕರಿಗೆ ದೊರಕುವಂತಾಗಬೇಕು. ರೈತರು ಅಭಿವೃದ್ಧಿ ಹೊಂದಬೇಕು ಎಂದರು.

ರೈತರು ಇಂದು ಹಣ ಗಳಿಸುವ ಭರದಲ್ಲಿ ಕೃಷಿ ಪದ್ಧತಿಯನ್ನು ಬದಲಾಯಿಸಿಕೊಂಡಿದ್ದಾರೆ. ಒಂದೇ ಬೆಳೆ ಬೆಳೆಯಲು ಸೀಮಿತವಾಗಿ ನಷ್ಟ ಅನುಭವಿಸುತ್ತಿದ್ದಾರೆ. ಮತ್ತೂಂದೆಡೆ ಲಾಭದ ನಿರೀಕ್ಷೆಯಿಂದ ವ್ಯಾಪಕವಾಗಿ ರಾಸಾಯನಿಕ ಬಳಸುತ್ತಿದ್ದಾರೆ. ಇದರಿಂದ ಭೂಮಿಯ ಜೀವಸತ್ವ ಕಡಿಮೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ರೈತರು ವರ್ಷದ 365 ದಿನವೂ ಕೂಡ ಉದ್ಯೋಗ ಸೃಷ್ಟಿಸಿಕೊಳ್ಳಬೇಕು. ಆದರೆ, ಶೇ.70 ರಿಂದ 80ರಷ್ಟು ಜನರು ಆ ಕೆಲಸ ಮಾಡುತ್ತಿಲ್ಲ. ಈ ಧೋರಣೆ ಬದಲಾಗಬೇಕು. ನಮ್ಮ ಸಮೃದ್ಧ ಜೀವನಕ್ಕೆ ಎಷ್ಟು ಬೇಕೋ ಅಷ್ಟನ್ನು ಒಂದೇ ಕಡೆ ಬೆಳೆದು ನೆಮ್ಮದಿಯ ಜೀವನ ಕಂಡುಕೊಳ್ಳಬೇಕು ಎಂದರು.

ನೇಗಿಲ ಮೇಲೆಯೇ ನಿಂತಿದೆ ಧರ್ಮ. ಇದನ್ನ ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ರೈತರು ಕೃಷಿ ವಿಜ್ಞಾನಿ ಸುಭಾಷ್‌ ಪಾಳೇಗಾರ್‌ ಅವರು ತಿಳಿಸಿದ ಕೃಷಿ ರಥದ ಚಕ್ರಗಳಾದ ಬೀಜಾಮೃತ, ಜೀವಾಮೃತ, ಮುಚ್ಚಿಗೆ, ತೇವಾಂಶ ಈ ನಾಲ್ಕು ಅಂಶಗಳನ್ನು ಅಳವಡಿಸಿಕೊಂಡು ಜೈವಿಕ ಕೃಷಿ ಪದ್ಧತಿ ಹಾಗೂ ನೈಸರ್ಗಿಕ ಕೃಷಿ ಪದ್ಧತಿ ಮಾಡಲು ಮುಂದಾಗಬೇಕು. ಆ ಮೂಲಕ ಭೂಮಿಯ ಆರೋಗ್ಯ ಕಾಪಾಡುವ ಜೊತೆಗೆ ತಮ್ಮ ಆರೋಗ್ಯವನ್ನು ಸಮೃದ್ಧವಾಗಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ರೈತರಿಗೆ ಇಂದು ದುಃಖ, ಸಾಲ, ಅಪಮಾನ ಎಲ್ಲವೂ ಇದೆ. ಆದರೆ ಅದಕ್ಕೆ ಧೃತಿಗೆಡಬಾರದು. ದೇಶದ ಚಕ್ರ ತಿರುಗಬೇಕಾದರೆ ಕೃಷಿ ಅತ್ಯಗತ್ಯ. ಆದ್ದರಿಂದ ಕೃಷಿಕರಾಗಿರುವುದಕ್ಕೆ ಹೆಮ್ಮೆಪಡಿ, ಕೀಳರಿಮೆ ಬೇಡ. ಆರೋಗ್ಯಪೂರ್ಣ ಕೃಷಿ ಮಾಡಿ ಎಂದು ಹೇಳಿದರು.

ರಾಜ್ಯದಲ್ಲಿ ಕಿರಿಧಾನ್ಯ, ತೃಣ ಧಾನ್ಯ ಎಂದು ಕರೆಯಲಾಗುತ್ತಿದ್ದ ಸತ್ವಯುತ ಧಾನ್ಯಗಳನ್ನು ಸಿರಿಧಾನ್ಯ ಎಂದು ಪ್ರಥಮ ಬಾರಿಗೆ ಕರೆ ಕೀರ್ತಿ ಮೈಸೂರಿನ ಆಹಾರ ತಜ್ಞ ಡಾ| ಖಾದರ್‌ ಅವರಿಗೆ ಸಲ್ಲುತ್ತದೆ. ಅದೇ ರೀತಿ ಜೈವಿಕ ಕೃಷಿ ಪದ್ಧತಿಯನ್ನು ಪರಿಚಯಿಸಿದ ಶ್ರೇಯಸ್ಸು ಕೃಷಿ ತಜ್ಞ ಸುಭಾಷ್‌ ಪಾಳೇಗಾರ್‌ ಅವರಿಗೆ ಸಲ್ಲುತ್ತದೆ ಎಂದರು.

ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಕುಂದೂರು ಹನುಮಂತಪ್ಪ, ಡಾ| ಪ್ರಕಾಶ್‌ ಭಟ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.