ಉತ್ಪನ್ನಗಳು ಪರಿಸರ ಪೂರಕವಾಗಿರಲಿ: ಡಾ| ಮಂಜಪ್ಪ


Team Udayavani, Jan 18, 2019, 6:30 AM IST

dvg-5.jpg

ದಾವಣಗೆರೆ: ಜನರು ಉತ್ಪಾದಿಸುವ ಉತ್ಪನ್ನಗಳು ಪರಿಸರದ ಮೇಲೆ ಪರಿಣಾಮ ಬೀರದಂತೆ ಜಾಗ್ರತೆ ವಹಿಸಬೇಕು ಎಂದು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜಿನ ನಿರ್ದೇಶಕ ಡಾ| ಎಸ್‌. ಮಂಜಪ್ಪ ಹೇಳಿದರು.

ನಗರದ ಬಿಐಇಟಿಯ ಕಾಲೇಜಿನಲ್ಲಿ ಗುರುವಾರ ಕಾಲೇಜಿನ ಪರಿಸರ ಇಂಜಿನಿಯರಿಂಗ್‌ನ ಸ್ನಾತಕೋತ್ತರ ವಿಭಾಗ, ಸಿವಿಲ್‌ ಇಂಜಿನಿಯರಿಂಗ್‌ ವಿಭಾಗ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಪರಿಸರ ಪರಿಣಾಮಗಳ ಅಧ್ಯಯನದಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತು ಹಮ್ಮಿಕೊಂಡಿರುವ ಮೂರು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜನರಿಗೆ ಆಹಾರ, ಇಂಧನ, ಆರೋಗ್ಯ ಭದ್ರತೆ ಅತ್ಯಗತ್ಯ. ಆದರೆ, ಅಂತಹ ಉತ್ಪನ್ನಗಳು ಪರಿಸರದ ಮೇಲೆ ಯಾವ ರೀತಿ ದುಷ್ಪರಿಣಾಮ ಬೀರುತ್ತವೆ ಎಂಬುದರ ಬಗ್ಗೆ ಪ್ರತಿಯೊಬ್ಬರು ಅವಲೋಕನ ಮಾಡಬೇಕು. ಪರಿಸರ ಪೂರಕವಾಗಿ ಕೃಷಿ ಮಾಡಲು ಮುಂದಾಗಬೇಕು ಎಂದರು.

ಆರೋಗ್ಯಕ್ಕಾಗಿ ಉತ್ಪಾದಿಸುವ ಔಷಧಿಗಳಿಗಾಗಿ ಅನೇಕ ರಸಾಯನಿಕಗಳು ಅಗತ್ಯವಾಗಿ ಬೇಕಾಗಿರುತ್ತದೆ. ಕೆಲವೊಂದು ರಸಾಯನಿಕ ಉತ್ಪನ್ನಗಳಿಗಿಂತ 100 ಪಟ್ಟು ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದೆಲ್ಲದರ ಪರಿಣಾಮವಾಗಿ ಪರಿಸರದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ ಎಂದು ಹೇಳಿದರು.

ಭಾರತ 1960ರಲ್ಲಿ ಬೇರೆ ಭಾಗಗಳಿಂದ ಆಹಾರ ಆಮದು ಮಾಡಿಕೊಳ್ಳುತ್ತಿತ್ತು. ಈಗ ಆಹಾರ ಖಾತ್ರಿ ದೊರೆಯುತ್ತಿದೆ. ಸಕ್ಕರೆ ಉತ್ಪಾದನೆಯಲ್ಲಿ ಎರಡನೇ ಮತ್ತು ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದೆ. ಆದರೆ, ಈ ದಾರಿಯಲ್ಲಿ ಪರಿಸರದ ಮೇಲೆ ಅಪಾರ ಪರಿಣಾಮವಾಗಿದೆ ಎಂದು ಹೇಳಿದರು.

ಉದ್ಯಮಗಳು ಪರಿಸರದ ಮೇಲೆ ಒತ್ತಡ ಹೆಚ್ಚಿಸುತ್ತಿವೆ. ಇಂತಹ ಸಮಸ್ಯೆ ಬಗೆಹರಿಸಲು ಪರಿಸರ ಇಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿಗಳು ಇತರೆ ಎಲ್ಲಾ ವಿಜ್ಞಾನ ಹಾಗೂ ಸಾಮಾಜಿಕ ವಿಜ್ಞಾನ ವಿಭಾಗಗಳ ಸ್ನೇಹಿತರೊಂದಿಗೆ ಜೊತೆಗೂಡಿ ಹೊಸ ಹೊಸ ಆವಿಷ್ಕಾರಕ್ಕೆ ಮುಂದಾಗಬೇಕು ಎಂದರು.

ದಾವಣಗೆರೆ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ| ಬಸವರಾಜ್‌ ಬಣಕಾರ್‌ ಮಾತನಾಡಿ, ಈಗಿನ ಇಂಜಿನಿಯರ್‌ಗಳು ಸಹಜವಾಗಿ ಹಿತಕರ ವಾತಾವರಣ ಇರುವಂತಹ ಮನೆಗಳನ್ನು ನಿರ್ಮಾಣ ಮಾಡಲು ಮುಂದಾಗಬೇಕು. ಇದಕ್ಕೆ ಸಾಂಪ್ರದಾಯಿಕ ಮನೆಗಳು ಮಾದರಿಯಾಗಿವೆ ಎಂದು ಹೇಳಿದರು.

ಡಾ| ಜಿ.ಪಿ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಿವಿ ಸಿಂಡಿಕೇಟ್ ಮಾಜಿ ಸದಸ್ಯ ಸಿ.ಎಚ್. ಮುರಿಗೇಂದ್ರಪ್ಪ, ಸಿವಿಲ್‌ ಇಂಜಿನಿಯರಿಂಗ್‌ ವಿಭಾಗದ ಮುಖ್ಯಸ್ಥ ಡಾ| ಎಚ್.ಬಿ. ಅರವಿಂದ್‌, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಂತೀಯ ವಿಭಾಗದ ಉಪ ಪರಿಸರ ಅಧಿಕಾರಿ ಎಸ್‌.ಸಿ. ಸುರೇಶ್‌, ಕಾಲೇಜು ಪ್ರಾಂಶುಪಾಲ ಕೆ.ಎಸ್‌. ಬಸವರಾಜಪ್ಪ, ಡಾ| ಬಿ.ಇ. ರಂಗಸ್ವಾಮಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Koppala; ದಲಿತರ ಮನೆಯಲ್ಲಿ ಸಾಮಾನ್ಯರಂತೆ ಕುಳಿತು ಉಪಹಾರ ಸೇವಿಸಿದ ಯದುವೀರ ಒಡೆಯರ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Chikkmagaluru; ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಬಲಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Crime: ಮೊಬೈಲ್‌ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.