ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ
Team Udayavani, Jan 2, 2021, 4:11 PM IST
ದಾವಣಗೆರೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿಸೋಮವಾರ ಜಯದೇವ ವೃತ್ತದಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ಪ್ರತಿಗಳನ್ನುಹರಿದುಹಾಕುವ ಮೂಲಕ ಹೊಸ ವರ್ಷದದಿನವನ್ನು ಆಚರಿಸಿದರು. “ಕಾರ್ಮಿಕಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನುರಕ್ಷಿಸುತ್ತೇವೆ, ಕಾರ್ಪೋರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ’ ಎಂಬ ಪ್ರತಿಜ್ಞೆಯೊಂದಿಗೆ ಹೊಸ ವರ್ಷದ ದಿನವನ್ನುಸ್ವಾಗತಿಸಿದರು.
ಕೇಂದ್ರ ಸರ್ಕಾರ ಎಲ್ಲಾ ನಾಲ್ಕು ಕಾರ್ಮಿಕಸಂಹಿತೆಗಳನ್ನು ರದ್ದುಗೊಳಿಸಬೇಕು.ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು.. ಎಲ್ಲಾ ರೀತಿಯ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು. ಆದಾಯ ತೆರಿಗೆಯ ಮಿತಿಯಿಂದಹೊರಗಿರುವ ಎಲ್ಲಾ ಕುಟುಂಬಗಳಿಗೂಮಾಸಿಕ 7,500 ನಗದು ಹಣ ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಡವರಿಗೆ ಪ್ರತಿಯೊಬ್ಬರಿಗೂ ಪ್ರತಿತಿಂಗಳು 10 ಕೆ.ಜಿ. ಆಹಾರ ಧಾನ್ಯಗಳನ್ನುಉಚಿತವಾಗಿ ನೀಡಬೇಕು. ಗ್ರಾಮೀಣಉದ್ಯೋಗ ಖಾತರಿ ಯೋಜನೆಯಡಿಯಲ್ಲಿವಾರ್ಷಿಕ 200 ದಿನಗಳ ಕೆಲಸ ಮತ್ತು ದಿನಕ್ಕೆ700 ರೂಪಾಯಿ ಕೂಲಿ ನೀಡಬೇಕು, ನಗರ ಪ್ರದೇಶಗಳಿಗೂ ಈ ಯೋಜನೆ ವಿಸ್ತರಿಸಬೇಕು.ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು. ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ರಕ್ಷಣಾಯೋಜನೆಗಳನ್ನು ವಿಸ್ತರಿಸಬೇಕು. ಉಚಿತವಾಗಿಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಎಲ್ಲರಿಗೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು