ರೈತ ಸಂಘದಿಂದ ಪ್ರತಿಭಟನೆ
Team Udayavani, Jul 7, 2020, 4:51 PM IST
ಜಗಳೂರು: ಕೃಷಿಹೊಂಡ ನಿರ್ಮಿಸಿಕೊಂಡ ಫಲಾನುಭವಿಗಳಿಗೆ ಸಹಾಯಧನ ಮತ್ತು ತಾಡಪಾಲ್ ವಿತರಣೆ ಮಾಡದೆ ರೈತರು ಕೃಷಿ ಇಲಾಖೆಗೆ ಅಲೆದಾಡುವಂತಾಗಿದೆ ಎಂದು ಆರೋಪಿಸಿ ರೈತ ಸಂಘ ಹಾಗೂ ಹಸಿರುಸೇನೆ (ಹುಚ್ಚಂಗಿಪುರ ರೇವಣಸಿದ್ದಪ್ಪ ಬಣ) ವತಿಯಿಂದ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ರಾಜ್ಯಾಧ್ಯಕ್ಷ ರೇವಣಸಿದ್ದಪ್ಪ ಮಾತನಾಡಿ, ಜಗಳೂರು ತಾಲೂಕಿನಲ್ಲಿ 2018-19ನೇ ಸಾಲಿನಲ್ಲಿ ಕೆಲವು ಗ್ರಾಮಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ವರ್ಷ ಕಳೆದಿದೆ. ಆದರೂ ಕೆಲವು ರೈತ ಫಲಾನುಭವಿಗಳಿಗೆ ಸಹಾಯಧನ ನೀಡಿಲ್ಲ ಮತ್ತು ಹೊಂಡ ನಿರ್ಮಿಸಿಕೊಂಡ ರೈತರಿಗೆ ಮಳೆ ಬಂದಾಗ ಹೊಂಡದಲ್ಲಿ ಸಂಗ್ರಹವಾದ ನೀರು ಇಂಗದಂತೆ ಸಂರಕ್ಷಿಸಿಕೊಳ್ಳಲು ತಾಡಪಾಲು ಮತ್ತು ಮಳೆ ಕೈಕೊಟ್ಟಾಗ ಬೆಳೆಗೆ ನೀರು ಹಾಯಿಸಿಕೊಳ್ಳಲು ಡಿಸೇಲ್ ಇಂಜಿನ್ ಮತ್ತು ಸ್ಪ್ರಿಂಕ್ಲರ್ ಸೆಟ್ ಪರಿಕರಗಳನ್ನು ವಿತರಣೆ ಮಾಡದೆ ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ ಎಂದು ಆರೋಪಿಸಿದರು.
ಭದ್ರಾ ಮೇಲ್ದಂಡೆ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಓಬಳೇಶ್ ಮಾತನಾಡಿ, ಕಳೆದ ಸಾಲಿನಲ್ಲಿ ಜಗಳೂರು ಬರಪೀಡಿತ ಪ್ರದೇಶವಾಗಿದ್ದು ಮಳೆ ಬೆಳೆ ಇಲ್ಲದೇ ರೈತರು ಕಂಗಾಲಾಗಿದ್ದರು. ಅಲ್ಪ ಸ್ವಲ್ಪ ಬೆಳೆದ ರೈತರು ಬೆಳೆ ವಿಮೆಯನ್ನು ಕಟ್ಟಿದ್ದರೂ ಇದುವರೆಗೂ ರೈತರ ಖಾತೆಗೆ ಬೆಳೆ ವಿಮೆ ಹಣ ಪಾವತಿಯಾಗಿಲ್ಲ. ಇದರಿಂದಾಗಿ ಬಿತ್ತನೆಗೆ ಬೀಜ, ಗೊಬ್ಬರ ಖರೀದಿಸಲು ಖಾಸಗಿ ದಲ್ಲಾಳಿ ಅಂಗಡಿಗಳ ಮೊರೆ ಹೋಗುವಂತಾಗಿದೆ. ಆದ್ದರಿಂದ ಕೂಡಲೇ ವಿಮೆ ಹಣವನ್ನು ಪಾವತಿ ಮಾಡುವಂತೆ ಆಗ್ರಹಿಸಿದರು.
ತಾಲೂಕು ರೈತ ಸಂಘದ ಅಧ್ಯಕ್ಷ ನಿಂಗಪ್ಪ, ಚಂದ್ರ ನಾಯ್ಕ, ಬಸವರಾಜಪ್ಪ, ಜಯಣ್ಣ, ಶಿವಾನಂದಪ್ಪ, ಲಂಕೇಶ ನಾಯ್ಕ, ಮುಸ್ಟೂರಪ್ಪ, ಚಂದ್ರಪ್ಪ, ಎಂ. ಕೃಷ್ಣಪ್ಪ, ನಾಗಪ್ಪ, ಶ್ರೀನಿವಾಸ, ಹನುಮಂತಪ್ಪ, ವಾಜೀದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು