ಕಡಲೆ ಬೆಳೆಗಾರರಿಂದ ಪ್ರತಿಭಟನೆ
Team Udayavani, Apr 13, 2022, 4:03 PM IST
ಜಗಳೂರು: ಎಲ್ಲಾ ವಿಧದ ಕಡಲೆ ಬೀಜಗಳನ್ನು ಖರೀದಿಸಬೇಕೆಂದು ಒತ್ತಾಯಿಸಿ ತಾಲೂಕಿನ ಕಡಲೆ ಬೆಳೆಗಾರರು ಕಡಲೆ ಬೀಜಗಳನ್ನು ತಾಲೂಕು ಕಚೇರಿ ಮುಂಭಾಗದಲ್ಲಿ ಕಡಲೆ ಬೀಜಗಳನ್ನು ಸುರಿದು ಪ್ರತಿಭಟನೆ ನಡೆಸಿದರು.
ಪಟ್ಟಣದಲ್ಲಿ ಕಡಲೆ ಖರೀದಿ ಕೇಂದ್ರ ತೆರೆಯಲಾಗಿದೆ. ಆದರೆ ಕೆಲವು ದಿನಗಳಿಂದ ಕಡಲೆ ಬೀಜದಲ್ಲಿ ಗುಣಮಟ್ಟದವಿಲ್ಲ ಎಂಬ ನೆಪ ಹೇಳಿ ಖರೀದಿಸುತ್ತಿಲ್ಲ. ಕಡಲೆಯಲ್ಲಿ ಕಲ್ಲು-ಮಣ್ಣು ಇರುವುದು ಸಹಜ, ಆದರೆ ಗುಣಮಟ್ಟದ ನೆಪ ಹೇಳಿ ಖರೀದಿಸದೇ ಇರುವುದು ವಿಪರ್ಯಾಸ ಎಂದು ಜಿಪಂ ಮಾಜಿ ಸದಸ್ಯ ರಾಮರೆಡ್ಡಿ ದೂರಿದರು.
ಮಾಜಿ ಶಾಸಕ ಎಚ್.ಪಿ. ರಾಜೇಶ್ ಮಾತನಾಡಿ, ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಮಾಡಬೇಡಿ. ಸಾಲ ಮಾಡಿ ವ್ಯವಸಾಯ ಮಾಡುತ್ತಿರುವ ಅವರ ಬಗ್ಗೆ ಅಧಿಕಾರಿಗಳು ಕಾಳಜಿ ತೋರಬೇಕೆಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಪಪಂ ಸದಸ್ಯರಾದ ರವಿಕುಮಾರ್, ರಮೇಶ್, ಸತೀಶ್, ತಾನಾಜಿ, ರೇವಣಸಿದ್ದಪ್ಪ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ