ನಿವೇಶನ-ಮನೆ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 2, 2019, 2:15 PM IST
ದಾವಣಗೆರೆ: ಆವರಗೆರೆ 23ನೇ ವಾರ್ಡ್ ಕೊಳಗೇರಿ ನಿವಾಸಿಗಳ ಪ್ರತಿಭಟನೆ.
ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇರುವಂತಹ ನಿವೇಶನ ರಹಿತರನ್ನು ಗುರುತಿಸಿ ನಿವೇಶನ, ಮನೆ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿ ಸೋಮವಾರ ಆವರಗೆರೆ 23ನೇ ವಾರ್ಡ್ ಕೊಳಗೇರಿ ನಿವಾಸಿಗಳ ಸಂಘದ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.
ಸ್ಮಾರ್ಟ್ಸಿಟಿ ಆಗುತ್ತಿರುವ ದಾವಣಗೆರೆಯಲ್ಲಿ ಸಾವಿರಾರು ಜನರು ನಿವೇಶನರಹಿತರು, ಸ್ವಂತ ಸೂರಿಲ್ಲದವರು ಇದ್ದಾರೆ. ಕಳೆದ ಹಲವಾರು ವರ್ಷಗಳಿಂದ ಆಶ್ರಯ ಯೋಜನೆಯಡಿ ಯಾರೊಬ್ಬರಿಗೆ ಮನೆ, ನಿವೇಶನ ಕೊಟ್ಟಿಲ್ಲ. ತಲೆಗೊಂದು ಸೂರು… ಎನ್ನುವುದು ಬರೀ ಘೋಷಣೆಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ದಾವಣಗೆರೆ ನಗರದ ಆವರಗೆರೆ ಶೇಖರಪ್ಪ ಬಡಾವಣೆ, ಆಂಜನೇಯ ಮಿಲ್ ಬಡಾವಣೆ, ಪಿ. ಬಸವನ ಗೌಡ ಬಡಾವಣೆ, ಗೋಶಾಲೆ ಹಳ್ಳದ ಪಕ್ಕ ಗುಡಿಸಲುಗಳು. ರಾಮನಗರ ನಗರದ ವಿವಿಧ ಬಡಾವಣೆಗಳ ಜನರು ನಿವೇಶನ, ಮನೆ ಇಲ್ಲದೆ ಹಲವು ವರ್ಷಗಳಿಂದ ಮಹಾನಗರ ಪಾಲಿಕೆ, ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುತ್ತಿದ್ದಾರೆ. ಈವರೆಗೆ ನಿವೇಶನ, ಆಶ್ರಯಮನೆ ಕೊಡಲಿಕ್ಕೆ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ದೂರಿದರು.
ಇಂದಿನ ಬೆಲೆ ಏರಿಕೆ ದಿನಗಳಲ್ಲಿ ಬಾಡಿಗೆ ಮನೆಯಲ್ಲಿದ್ದುಕೊಂಡು ಜೀವನ ನಡೆಸುವುದು ಕಷ್ಟ ಆಗುತ್ತಿದೆ. ನಿವೇಶನ ರಹಿತರ ಸಮಸ್ಯೆ ಅರ್ಥಮಾಡಿಕೊಂಡು ಕೂಡಲೇ ನಿವೇಶನ, ಮನೆ ಸೌಲಭ್ಯ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಸಂಘದ ಅಧ್ಯಕ್ಷ ಆವರಗೆರೆ ವಾಸು, ಪ್ರಧಾನ ಕಾರ್ಯದರ್ಶಿ ಸಿ. ಗುರುಮೂರ್ತಿ, ಕೆರನಹಳ್ಳಿರಾಜು, ಮಂಜುನಾಥ ಡಿ. ತಿಪ್ಪೇಶಿ ಎ. ಶಾರದಾ, ಗೋಶಾಲೆ ಲತಾ, ಮಂಜುಳಾ, ಪ್ರೇಮ, ಕವಿತಾ, ಸೈಯದ್ ಖಾಜಾಪೀರ್, ರಂಗನಾಥ್, ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ