ಸರ್ಕಾರ ಧರಣಿಗೆ ಸ್ಪಂದಿಸದಿದ್ರೆ ಹೋರಾಟ
ವಾಲ್ಮೀಕಿ ಶ್ರೀಗಳ ಅಹೋರಾತ್ರಿ ಧರಣಿಗೆ ಎಲ್ಲ ಸಮಾಜದವರೂ ಬೆಂಬಲಿಸಲಿ: ಯೋಗಾನಂದ ಶ್ರೀ
Team Udayavani, Apr 26, 2022, 2:08 PM IST
ಮಲೇಬೆನ್ನೂರು: ನಿವೃತ್ತ ನ್ಯಾಯಾಧಿಧೀಶ ನಾಗಮೋಹನದಾಸ್ ಆಯೋಗದ ವರದಿ ಅನುಷ್ಠಾನಕ್ಕಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಳೆದ 75 ದಿನಗಳಿಂದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ಅಹೋರಾತ್ರಿ ನಡೆಸುತ್ತಿರುವ ಶಾಂತಿಯುತ ಧರಣಿಗೆ ಎಲ್ಲಾ ಸಮಾಜದವರೂ ಬೆಂಬಲ ವ್ಯಕ್ತಪಡಿಸಬೇಕು ಎಂದು ಯಲವಟ್ಟಿಯ ಶ್ರೀ ಯೋಗಾನಂದ ಸ್ವಾಮೀಜಿ ಹೇಳಿದರು.
ವಾಲ್ಮೀಕಿ ಶ್ರೀಗಳು ನಡೆಸುತ್ತಿರುವ ಧರಣಿ ಬೆಂಬಲಿಸಿ ಪಟ್ಟಣದ ಸ್ವಾಭಿಮಾನಿ ಎಸ್ಸಿ-ಎಸ್ಟಿ ಸಂಘಟನೆಗಳ ಒಕ್ಕೂಟ ಏರ್ಪಡಿಸಿದ್ದ ಮಲೇಬೆನ್ನೂರಿನಿಂದ ಹರಿಹರದವರೆಗಿನ ಪಾದಯಾತ್ರೆ ಸಂದರ್ಭದಲ್ಲಿ ಶ್ರೀಗಳು ಮಾತನಾಡಿದರು. ಪ್ರಸನ್ನಾನಂದ ಸ್ವಾಮೀಜಿಯವರ ಶಾಂತಿಯುತ ಧರಣಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಸರ್ಕಾರ ಕೂಡಲೇ ಸೂಕ್ತ ನಿರ್ಧಾರ ತೆಗೆದುಕೊಳ್ಳದಿದ್ದರೆ ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ಎಚ್ಚರಿಸಿದರು.
ಹೊಸಳ್ಳಿ ವೇಮನ ಮಠದ ಬಸವಪ್ರಭು ಸ್ವಾಮೀಜಿ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ, ಹಿಂದುಳಿದ ಎಲ್ಲಾ ಸಮಾಜದ ಏಳಿಗೆಗಾಗಿ, ಹಿಂದುಳಿದವರೂ ಇತರರಂತೆ ಸಮಾಜದಲ್ಲಿ ಉನ್ನತ ಹುದ್ದೆ ಪಡೆಯಲಿ ಎಂಬ ಸದುದ್ದೇಶದಿಂದ ವಾಲ್ಮೀಕಿ ಶ್ರೀಗಳು ಧರಣಿ ನಡೆಸುತ್ತಿದ್ದಾರೆ. ಎಲ್ಲಾ ಸಮಾಜದವರು ಅವರಿಗೆ ಬೆಂಬಲ ಸೂಚಿಸಿದಲ್ಲಿ ಅವರಿಗೆ ಮತ್ತಷ್ಟು ಬಲ ತುಂಬಿದಂತಾಗುತ್ತದೆ ಎಂದರು.
ಈಗ ಇರುವ ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ನಡೆಸುತ್ತಿರುವ ಧರಣಿ ಐತಿಹಾಸಿಕ ಧರಣಿಯಾಗಿದೆ. ಸರ್ಕಾರ ಮೂಗಿನ ತುದಿಗೆ ತುಪ್ಪ ಸವರುವ ಕೆಲಸ ಮಾಡದೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಸಂಬಂಧ ಸರ್ಕಾರದ ಗಮನಕ್ಕೆ ತರಬೇಕೆಂದು ಮಾಜಿ ಶಾಸಕ ಬಿ.ಪಿ. ಹರೀಶ್ ಅವರಲ್ಲಿ ಮನವಿ ಮಾಡಿದರು.
ಡಾ| ಬಿ.ಆರ್. ಅಂಬೇಡ್ಕರ್ ಹಾಗೂ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪಾದಯಾತ್ರೆಗೆ ಚಾಲನ ನೀಡಲಾಯಿತು. ಮಾಜಿ ಶಾಸಕ ಬಿ.ಪಿ. ಹರೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಮಂಜುನಾಥ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ಅಬಿದ್ ಅಲಿ, ಜಿ. ಅನಂದ್, ಬೆಣ್ಣೆಹಳ್ಳಿ ಹಾಲೇಶಪ್ಪ, ನಂದಿಗಾವಿ ಶ್ರೀನಿವಾಸ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ. ಚಿದಾನಂದಪ್ಪ, ಎಸ್.ಜಿ. ಪರಮೇಶ್ವರಪ್ಪ, ಬೋವಿ ಕುಮಾರ್, ಪಿ.ಎಸ್. ಶಿವಕುಮಾರ್, ಎ.ಕೆ. ಲೋಕೇಶ್, ಸೋಮಶೇಖರಪ್ಪ, ಬಸವರಾಜ್, ಮಂಜು, ಬಸವರಾಜ್ ದೊಡ್ಮನಿ, ಕಿರಣ್, ಅಶೋಕ್, ವೀರಭದ್ರಪ್ಪ, ಮೊದಲಾದವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಪಿಎಸ್ಐಗಳಾದ ರವಿಕುಮಾರ್, ಶಂಕರ್ ಗೌಡ ಹಾಗೂ ಸಿಬ್ಬಂದಿ ಬಂದೋಬಸ್ತ್ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
MUST WATCH
ಹೊಸ ಸೇರ್ಪಡೆ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ