ಭಕ್ತರಿಗೆ ಮೂಲಸೌಲಭ್ಯ ಒದಗಿಸಿ
Team Udayavani, Mar 10, 2019, 8:15 AM IST
ಜಗಳೂರು: ಮಡ್ರಳ್ಳಿ ಚೌಡೇಶ್ವರಿ ಹಾಗೂ ಕೊಡದಗುಡ್ಡದ ಶ್ರೀವೀರಭದ್ರೇಶ್ವರ ಸ್ವಾಮಿಯ ಜಾತ್ರೆ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ, ಭಕ್ತಾದಿಗಳಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಶಾಸಕ ಎಸ್.ವಿ. ರಾಮಚಂದ್ರ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಮಡ್ರಳ್ಳಿ ಸಮುದಾಯ ಭವನದಲ್ಲಿ ಶ್ರೀ ಚೌಡೇಶ್ವರಿ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಮಾ.22ರಿಂದ 25 ರವರೆಗೆ ಜಾತ್ರೆ ನಡೆಯಲಿದ್ದು, ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ತುರ್ತು ಚಿಕಿತ್ಸೆ, ಅಗ್ನಿ ಶಾಮಕ ವಾಹನ, ಪೊಲೀಸ್ ಭದ್ರತೆ ಮೊದಲಾದ ಸೌಲಭ್ಯ ಒದಗಿಸಬೇಕು.
22 ರಂದು ರಥೋತ್ಸವ ಜರುಗುವಾಗ ದೇವಾಲಯದ ಸಮೀಪ ಬೃಹತ್ ವಾಹನಗಳ ಸಂಚಾರ ನಿರ್ಬಂಧಿಸಬೇಕು. ಜಾತ್ರೆಯಲ್ಲಿ ಕೃಷಿ, ತೋಟಗಾರಿಕೆ, ಮೀನುಗಾರಿಕೆ, ಕೊಂಡುಕುರಿ, ಪಶುಪಾಲನೆ, ಕಂದಾಯ, ಶಿಕ್ಷಣ ಇಲಾಖೆ, ರೇಷ್ಮೇ ಸೇರಿದಂತೆ ಹಲವು ಇಲಾಖೆಗಳ ವಸ್ತು ಪ್ರದರ್ಶನ ಏರ್ಪಡಿಸಿದರೆ ಜನರಿಗೆ ವಿವಿಧ ಇಲಾಖೆಗಳ ಮಾಹಿತಿ ಲಭ್ಯವಾಗಲಿದೆ. ಇದೇ ರೀತಿ ಕೊಡದಗುಡ್ಡದಲ್ಲಿ ನಡೆಯುವ ಜಾತ್ರೆಯಲ್ಲೂ ಸಹ ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ಜಿಪಂ ಸದಸ್ಯ ಎಸ್.ಕೆ. ಮಂಜುನಾಥ್, ಮಾಜಿ ಸದಸ್ಯ ಸೊಕ್ಕೆ ನಾಗರಾಜ್, ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ, ಇಓ ಜಾನಕಿರಾಮ್, ಜಿಪಂ ಸಹಾಯಕ ಕಾರ್ಯ ನಿರ್ವಾಹಕಾಧಿಕಾರಿ ಬಾಲಸ್ವಾಮಿ, ಟಿಎಚ್ಓ ನಾಗರಾಜ್, ಬೆಸ್ಕಾ ಇಂಜಿನಿಯರ್ ಪ್ರವೀಣಕುಮಾರ್, ಸಿಪಿಐ ಪ್ರವೀಣ್
ನೀಲಮ್ಮನವರ್, ಬಿಳಿಚೋಡು ಪಿಎಸ್ಐ ಉಮೇಶಬಾಬು, ಗ್ರಾಪಂ ಅಧ್ಯಕ್ಷೆ ಲಕ್ಷ್ಮಿಬಾಯಿ ಮಲ್ಲಿಕಾರ್ಜುನ್, ಉಪಾಧ್ಯಕ್ಷ ಹನುಮಂತಪ್ಪ, ಮುಖಂಡರಾದ ಚಂದ್ರಪ್ಪ, ಗಿರಿಯಪ್ಪ, ದಳಪತಿ ಬಸೆಟ್ಟೆಪ್ಪ, ಮಲ್ಲೇಶಪ್ಪ, ಪೂಜಾರಿ ಮಲ್ಲಪ್ಪ, ಕಾಡಪ್ಪ, ಹಳ್ಳೆಪ್ಪ, ಪಿಡಿಒ ನಾಗರಾಜ್, ಶಿವಕುಮಾರ್, ಶಶಿಧರ ಪಾಟೀಲ್, ಅಂಜಿನಪ್ಪ, ಕರಿಯಪ್ಪ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ