ಅಚ್ಚಳಿಯದ ನೆನಪು ಬಿಟ್ಟು ಹೋದ ಅಪ್ಪು
Team Udayavani, Oct 31, 2021, 2:39 PM IST
ದಾವಣಗೆರೆ: “ಅಪ್ಪು’ ಎಂದೇ ಅಭಿಮಾನಿಗಳಿಂದ ಕರೆಯಲ್ಪಡುತ್ತಿದ್ದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್, ಜಿಲ್ಲೆಯಲ್ಲಿ ಅಚ್ಚಳಿಯದ ನೆನಪುಗಳನ್ನು ಬಿಟ್ಟು ಹೋಗಿದ್ದಾರೆ.
ತಮ್ಮ ತಂದೆ ಡಾ| ರಾಜ್ಕುಮಾರ್ ಆವರೊಂದಿಗೆ ಚಿಕ್ಕ ವಯಸ್ಸಿನಲ್ಲೇ ದಾವಣಗೆರೆಗೆ ಬಂದು ಹೋಗುತ್ತಿದ್ದ ಪುನೀತ್ಗೆ ದಾವಣಗೆರೆ ಎಂದರೆ ಫೇವರಿಟ್. ಚಿತ್ರಗಳ ಪ್ರಚಾರ, ಸಂಭ್ರಮಾಚರಣೆಗೆ ಬಂದ ಸಂದರ್ಭದಲ್ಲಿ ರಾಜ್ಕುಮಾರ್ ರವರು ದಾವಣಗೆರೆಯ ಬಗ್ಗೆ ಹೇಳುತ್ತಿದ್ದುದ್ದನ್ನು ಸದಾ ಸ್ಮರಿಸುತ್ತಿದ್ದರು.
ಅಂತಹ ದಾವಣಗೆರೆ ಜಿಲ್ಲೆಯಲ್ಲಿ ಪುನೀತ್ ರಾಜ್ ಕುಮಾರ್ ಹಲವಾರು ನೆನಪುಗಳ ಬಿಟ್ಟು ಹೋಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ರಾಜ್ ಕುಮಾರ್ರವರ ಮನೆಗೆ ಕರೆಯಲಾಗುವ ದೊಡ್ಮನೆ ಹೆಸರನ್ನೇ ಆಧಾರವಾಗಿಟ್ಟು ಕೊಂಡು ತಯಾರಾಗಿದ್ದ “ದೊಡ್ಮನೆ ಹುಡುಗ’ ಚಿತ್ರದ ಚಿತ್ರೀಕರಣ ಸಂತೇಬೆನ್ನೂರಿನ ಐತಿಹಾಸಿಕ ಪುಷ್ಕರಣಿಯಲ್ಲಿ ನಡೆದಿತ್ತು. ಪುನೀತ್ ರಾಜ್ ಕುಮಾರ್ ಮನೋಜ್ಞವಾಗಿ ಅಭಿನಯಿಸಿದ್ದು ಸಂತೇಬೆನ್ನೂರು ಮತ್ತು ಸುತ್ತಮುತ್ತಲಿನ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.
ಸಂತೇಬೆನ್ನೂರಿನ ಪುಷ್ಕರಣಿಯ ಸೊಬಗಿಗೆ ಮಾರು ಹೋಗಿದ್ದ ಪುನೀತ್ ರಾಜ್ಕುಮಾರ್, ಚಿತ್ರಕರಣದ ದಿನವಿಡೀ ಪುಷ್ಕರಣಿಯ ಕಲಾತ್ಮಕತೆಯನ್ನುಕಣ್ತುಂಬಿಸಿಕೊಂಡಿದ್ದರು. ಹಿರಿಯ ನಟ ಎಸ್.ಎಲ್. ಸ್ವಾಮಿ, ನಟಿ ರಾಧಿಕಾ ಪಂಡಿತ್ ಅವರೊಂದಿಗೆ ಸಾಕಷ್ಟು ಬಾರಿ ಚರ್ಚಿಸಿದ್ದರು. ಈಗ ಅದು ಬರೀ ನೆನಪು ಮಾತ್ರ.
ಶ್ರೀನಗರ ಕಿಟ್ಟಿ, “ಲೂಸ್ ಮಾದ’ ಖ್ಯಾತಿಯ ಯೋಗಿ ಅವರೊಂದಿಗೆ ಪುನೀತ್ ರಾಜ್ಕುಮಾರ್ ನಟಿಸಿದ್ದ “ಹುಡುಗರು’ ಚಿತ್ರದ ಚಿತ್ರೀಕರಣ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲೇ 2011ರಲ್ಲಿ ನಡೆದಿತ್ತು. ಚಿತ್ರದ ದೃಶ್ಯವೊಂದರಲ್ಲಿ ಯೋಗಿ, ನಾವು ಈಗ ಎಲ್ಲಿಗೆ ಹೋಗುತ್ತಿದ್ದೇವೆ ಎಂದು ಕೇಳಿದಾಗ ಶ್ರೀನಗರ ಕಿಟ್ಟಿ, ಚಿತ್ರದುರ್ಗ ಹತ್ತಿರದ ಜಗಳೂರಿಗೆ ಎಂದು ಹೇಳುತ್ತಾರೆ. ಆ ಮಾತು ಬರೀ ಡೈಲಾಗ್ಗೆ ಮಾತ್ರ ಸೀಮಿತವಾಗದೆ ನಿಜವಾಗಿಯೂ ಜಗಳೂರಿನ ಸಾರ್ವಜನಿಕ ಆಸ್ಪತ್ರೆ ರಸ್ತೆ, ಪೊಲೀಸ್ ಠಾಣೆ ಮುಂಭಾಗ ಚಿತ್ರೀಕರಣವೂ ನಡೆದಿತ್ತು. ಪುನೀತ್ ರಾಜ್ಕುಮಾರ್ ಅಭಿನಯಿಸಿದ್ದರು.
ಜಗಳೂರಿನಂತಹ ಸಣ್ಣ ಪಟ್ಟಣವನ್ನು ಆಯ್ಕೆ ಮಾಡಿಕೊಂಡು ಚಿತ್ರೀಕರಣ ನಡೆಸಿದ್ದನ್ನು ಜನರು ಮರೆಯುವಂತೆಯೇ ಇಲ್ಲ. ದಾನಶೂರ ಕರ್ಣನಾಗಿದ್ದರು: ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೂ ಗೊತ್ತಾಗದಂತೆ ದಾನ, ಧರ್ಮ, ಸಹಾಯ ಮಾಡಬೇಕು ಎನ್ನುವ ಮಾತಿ ನಂತೆ ನಡೆದುಕೊಳ್ಳುತ್ತಿದ್ದ ಪುನೀತ್ ರಾಜ್ಕುಮಾರ್, ಅನೇಕರಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡಿದ್ದಾರೆ.
ಚನ್ನಗಿರಿ ಪಟ್ಟಣದ ಕಣಸಾಲು ಬಡಾವಣೆ ನಿವಾಸಿ ಕುಮಾರ್ ಮತ್ತು ಮಂಜುಳಾ ದಂಪತಿ ಪುತ್ರಿ ಪ್ರೀತಿಯೂ ಸಹಾಯ ಪಡೆದವರಲ್ಲಿ ಒಬ್ಬರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪ್ರೀತಿಯ ಶಸ್ತ್ರಚಿಕಿತ್ಸೆಗೆ 12.5 ಲಕ್ಷ ರೂ.ಗಳನ್ನು ಪುನೀತ್ ರಾಜ್ ಕುಮಾರ್ರವರೇ ಭರಿಸಿದ್ದರು. ಮಗಳಿಗೆ ಪುನರ್ಜನ್ಮ ನೀಡಿರುವ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನಕ್ಕೆ ಕುಮಾರ್ ಕುಟುಂಬ ಕಂಬನಿ ಮಿಡಿದಿದೆ.
ದೊಡ್ಮನೆ ಹುಡುಗ, ನಟಸಾರ್ವಭೌಮ, ಯುವರತ್ನ ಚಿತ್ರಗಳ ಪ್ರಚಾರ, ಸಂಭ್ರಮಾಚರಣೆಗೆ ದಾವಣಗೆರೆಗೆ ಪುನೀತ್ ರಾಜ್ಕುಮಾರ್ ಬಂದಿದ್ದರು. ಅವರು ಬಹಳ ಇಷ್ಟಪಡುತ್ತಿದ್ದ ರಾಘವೇಂದ್ರ ರಾಜ್ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಚಿಕ್ಕಪ್ಪನಿಗೆ ಸಾಥ್ ನೀಡಿದ್ದರು. ನಟಸಾರ್ವಭೌಮ ಚಿತ್ರದ 25ನೇ ದಿನದ ಸಂಭ್ರಮಾಚರಣೆಗೆ ದಾವಣಗೆರೆಗೆ ಬಂದಿದ್ದ
ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪುನೀತ್ ರಾಜ್ಕುಮಾರ್, ಒಂದೊಳ್ಳೆಯ ಕಥೆ ದೊರೆತಲ್ಲಿ ನಾನು, ಶಿವಣ್ಣ, ರಾಘಣ್ಣ ಒಟ್ಟಿಗೆ ಫಿಲ್ಮ್ ಮಾಡುತ್ತೇವೆ. ಕಥೆಗಾಗಿ ಹುಡುಕಾಟ ನಡೆಯುತ್ತಿದೆ ಎಂದಿದ್ದರು. ಆದರೆ ವಿಧಿಯಾಟದ ಮುಂದೆ ಈ ಕನಸು ನನಸಾಗಲೇ ಇಲ್ಲ.
ಕಳೆದ ಜ.18 ರಂದು ಹರಿಹರ ಪೀಠದಲ್ಲಿ ನಡೆದ ಹರ ಜಾತ್ರಾ ಮಹೋತ್ಸವದಲ್ಲಿ ಸಚಿವ ಮುನಿರತ್ನಂ ಅವರೊಂದಿಗೆ ಬಂದಿದ್ದ ಪುನೀತ್ ರಾಜ್ಕುಮಾರ್ ಈಗ ನೆನಪುಮಾತ್ರ. ದಾವಣಗೆರೆ ಜಿಲ್ಲೆಯ ವಿವಿಧೆಡೆ ಅಚ್ಚಳಿಯದ ನೆನಪುಗಳ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ.
-ರಾ. ರವಿಬಾಬು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್