ತ್ತೈಮಾಸಿಕ ಸಭೆ: ಅ.2ರ ವೇಳೆಗೆ 4 ತಾಲೂಕು ಬಯಲು ಶೌಚಮುಕ್ತ


Team Udayavani, Jul 29, 2017, 9:36 AM IST

29-DV-6.jpg

ದಾವಣಗೆರೆ: ಅಕ್ಟೋಬರ್‌ 2ರ ಗಾಂಧಿ ಜಯಂತಿ ವೇಳೆಗೆ ಜಿಲ್ಲೆಯ 4 ತಾಲೂಕುಗಳು ಬಯಲು ಶೌಚಮುಕ್ತ ಆಗಲಿವೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಎಸ್‌. ಅಶ್ವತಿ ತಿಳಿಸಿದ್ದಾರೆ.

ಶುಕ್ರವಾರ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಸ್ವಚ್ಛ ಭಾರತ್‌ ಮಿಷನ್‌ನ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ರಚಿಸಲಾಗಿರುವ ನೀರು ಮತ್ತು ನೈರ್ಮಲ್ಯ ಸಮಿತಿಯ ಮೊದಲನೇ ತ್ತೈಮಾಸಿಕ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಅವರು, ಅಕ್ಟೋಬರ್‌ 2ರ ಗಾಂಧಿ  ಜಯಂತಿಯಂದು ಜಿಲ್ಲೆಯ ಹೊನ್ನಾಳಿ, ದಾವಣಗೆರೆ, ಹರಿಹರ ಮತ್ತು ಚನ್ನಗಿರಿಯನ್ನು ಬಯಲು ಬಹಿರ್ದೆಸೆಮುಕ್ತ ತಾಲೂಕುಗಳೆಂದು ಘೋಷಿಸಲಾಗುವುದು. ಹರಪನಳ್ಳಿ ಮತ್ತು ಜಗಳೂರು ತಾಲೂಕುಗಳನ್ನು ಡಿಸೆಂಬರ್‌ ಮಾಹೆಯಲ್ಲಿ ಬಯಲು ಬಹಿರ್ದೆಸೆ ಮುಕ್ತ ತಾಲೂಕುಗಳೆಂದು ಘೋಷಿಸಲಾಗುವುದು ಎಂದರು. 

ಗರ್ಬಿಣಿಯರ ಮನೆಯಲ್ಲಿ ಗುಂಡಿ ತೋಡಬಾರದೆಂಬ ಸಂಪ್ರದಾಯವಿದ್ದರೂ ಮನವೊಲಿಕೆಯ ನಂತರ ಶೌಚಾಲಯ ಕಟ್ಟಿಸಿಕೊಳ್ಳಲು ಒಪ್ಪಿರುವ ಘಟನೆಗಳೂ ಇವೆ. ಗರ್ಬಿಣಿ, ಬಾಣಂತಿಯರಿಗೆ ಶೌಚಾಲಯ ಅತ್ಯಗತ್ಯವಾಗಿದ್ದು ಅವರ ಮನೆಗಳಲ್ಲಿ ಶೌಚಾಲಯ ಕಟ್ಟಿಸಿಕೊಳ್ಳಲು ಮನವೊಲಿಸಬೇಕಾಗಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷೆ ಉಮಾ ಎಂ ಪಿ ರಮೇಶ್‌ ಮಾತನಾಡಿ, ಹೊನ್ನಾಳಿ, ಚನ್ನಗಿರಿ ಸೇರಿದಂತೆ ಜಿಲ್ಲೆಯ ಗ್ರಾಮಗಳಲ್ಲಿ ಮನವೊಲಿಸುವ ಕಾರ್ಯದಲ್ಲಿ ತಾವೂ ಸಹ ತೊಡಗಿದ್ದು, ಅಧಿಕಾರಿಗಳು ಅನುಸರಣೆ ಕಾರ್ಯದಲ್ಲಿ ನಿಯಮಿತವಾಗಿ ತೊಡಗಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸೇರಿ ಶ್ರಮಿಸಿದರೆ
ಪರಿಣಾಮಕಾರಿ ಫಲಿತಾಂಶ ಸಾಧ್ಯ ಎಂದರು. ಯೋಜನಾ ಸಹ ನಿರ್ದೇಶಕ ಶಶಿಧರ ಮಾತನಾಡಿ, 2017-18ನೇ ಸಾಲಿನಲ್ಲಿ ಒಟ್ಟು 408.98 ಲಕ್ಷ ಅನುದಾನದಲ್ಲಿ 794 ಸಂಖ್ಯೆಯಲ್ಲಿ ಹಾಡು ಮತ್ತು ನಾಟಕ ಚಟುವಟಿಕೆಗಳು, 233 ಗೋಡೆ ಬರಹಗಳು, 794 ಬೀದಿನಾಟಕಗಳು, 23 ಮೇಳಗಳು, 233 ಹೋರ್ಡಿಂಗ್‌ ಮತ್ತು ಬ್ಯಾನರ್‌ಗಳು, 23 ಗುಂಪು ಸಭೆಗಳು, 6 ವಸ್ತು ಪ್ರದರ್ಶನಗಳು, 794 ಶ್ರವ್ಯ ದಶ್ಯ ಪ್ರಚಾರ, 1800 ಸ್ಕೂಲ್‌ ಜಾಥಾ, 46 ಜಾಗತಿ ಮತ್ತು ಕಾರ್ಯಾಗಾರಗಳು, 794 ಇಂಟರ್‌-ಪರ್ಸನಲ್‌ ಸಂವಹನ, 50000 ಐಇಸಿ ಸಾಮಗ್ರಿಗಳ ವಿತರಣೆ ಸೇರಿದಂತೆ ವಿವಿಧ ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ನಟರಾಜ್‌, ಜಿ ಪಂ ಉಪ ಕಾರ್ಯದರ್ಶಿ ಜಿ.ಎಸ್‌. ಷಡಕ್ಷರಪ್ಪ, ಜಿಲ್ಲಾಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮದ್ ಅಮಾನತು

ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು

1-dvg

Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.