ಮಳೆ ಎಫೆಕ್ಟ್ : 384 ಸರ್ಕಾರಿ ಕಟ್ಟಡಗಳಿಗೆ ಹಾನಿ

ಶಾಲಾ ಕೊಠಡಿಗಳದ್ದೇ ಸಿಂಹಪಾಲು-ಪ್ರಸ್ತಾವನೆ ಸಲ್ಲಿಸಿದ್ದರೂ ಅನುದಾನ ಬಂದಿಲ್ಲ

Team Udayavani, Jul 22, 2022, 3:44 PM IST

21

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಅಬ್ಬರದ ಮಳೆಗೆ ಈವರೆಗೆ ಒಟ್ಟು 384 ಸರ್ಕಾರಿ ಕಟ್ಟಡಗಳು ಹಾನಿಗೆ ಒಳಗಾಗಿವೆ.

ಕಳೆದ ಕೆಲವೇ ದಿನಗಳ ಹಿಂದೆ ಜಿಲ್ಲೆಯಲ್ಲಿ ಮಳೆಯ ಸುಳಿವೇ ಇರಲಿಲ್ಲ. ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಟ್ಟಡಗಳು, ಕೆರೆ, ರಸ್ತೆಗಳು ಎಲ್ಲವೂ ಹಾನಿಗೀಡಾಗಿವೆ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿರುವ ಮಿನಿ ವಿಧಾನಸೌಧಗಳಲ್ಲಿ ಬಹುತೇಕ ಸರ್ಕಾರಿ ಇಲಾಖಾ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಗಳಡಿಯಲ್ಲಿ ನಡೆಯುವ ಹಾಸ್ಟೆಲ್‌ಗ‌ಳ ಪೈಕಿ ಬಹುತೇಕ ಸ್ವಂತ ಕಟ್ಟಡ ಹೊಂದಿವೆ. ಹಾಗಾಗಿ ಮಳೆಯಿಂದ ತೊಂದರೆಗೀಡಾದ ಪ್ರಕರಣ ಅಷ್ಟಾಗಿ ಕಂಡುಬಂದಿಲ್ಲ.

ಭಾರೀ ಮಳೆಯಿಂದಾಗಿ ದಾವಣಗೆರೆ ತಾಲೂಕಿನಲ್ಲಿ 95, ಹರಿಹರದಲ್ಲಿ 40, ಹೊನ್ನಾಳಿಯಲ್ಲಿ 89, ಚನ್ನಗಿರಿಯಲ್ಲಿ 72 ಹಾಗೂ ಜಗಳೂರಿನಲ್ಲಿ 50 ಸೇರಿದಂತೆ 346 ಶಾಲೆ, ಹರಿಹರದಲ್ಲಿ 5, ಜಗಳೂರಿನಲ್ಲಿ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರ, ದಾವಣಗೆರೆಯಲ್ಲಿ 7, ಚನ್ನಗಿರಿಯಲ್ಲಿ 4, ಜಗಳೂರಿನಲ್ಲಿ 19 ಇತರೆ ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ. ಒಟ್ಟಾರೆ 384 ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ.

ಶಾಲಾ ಕಟ್ಟಡಗಳೇ ಜಾಸ್ತಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಆಗುತ್ತಿರುವ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಸಣ್ಣ, ದೊಡ್ಡ ದುರಸ್ತಿಗೆ ಬಂದಿರುವ ಸರ್ಕಾರಿ ಕಟ್ಟಡಗಳಲ್ಲಿ ಶಾಲಾ ಕೊಠಡಿಗಳದ್ದೇ ಸಿಂಹಪಾಲು. 346 ಶಾಲೆಗಳ ದುರಸ್ತಿ ಕಾರ್ಯ ಆಗಬೇಕಿದೆ. ಚನ್ನಗಿರಿ ತಾಲೂಕಿನಲ್ಲಿ ಕೆಲವು ಕಡೆ ಕಟ್ಟಡದ ಕೊರತೆಯಿಂದಾಗಿ ಬಯಲೇ ಶಾಲೆಯಂತಾಗಿದೆ. ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸುವ ಸಾಧ್ಯತೆಯನ್ನ ಅಲ್ಲಗೆಳೆಯುವಂತಿಲ್ಲ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಅದರಲ್ಲೂ “ಅರೆ ಮಲೆನಾಡು’ ಖ್ಯಾತಿ ಮತ್ತು ಹಿಂದುಳಿದ ಪ್ರದೇಶದ ಜಗಳೂರು ತಾಲೂಕಿನಲ್ಲಿ ಹೆಚ್ಚಾಗಬಹುದು ಎಂಬ ನಿರೀಕ್ಷೆಯೂ ಇದೆ.

ಮಳೆಗೂ ಮುನ್ನವೇ ಚನ್ನಗಿರಿ ತಾಲೂಕಿನಲ್ಲಿ 86 ಕೊಠಡಿಗಳು, ದಾವಣಗೆರೆ ಉತ್ತರದಲ್ಲಿ 43, ದಾವಣಗೆರೆ ದಕ್ಷಿಣದಲ್ಲಿ 93, ಹರಿಹರದಲ್ಲಿ 40, ಹೊನ್ನಾಳಿ ಮತ್ತು ನ್ಯಾಮತಿಯಲ್ಲಿ 117, ಜಗಳೂರಿನಲ್ಲಿ 31 ಕೊಠಡಿಗಳು ದುರಸ್ತಿಗೆ ಬಂದಿದ್ದವು. ಮಳೆ ಗಾಯದ ಮೇಲೆ ಉಪ್ಪು ಸುರಿದಂತೆ ಇನ್ನಷ್ಟು ಹಾನಿಗೆ ಕಾರಣವಾಗುತ್ತಿದೆ. ಚನ್ನಗಿರಿ ತಾಲೂಕಿನಲ್ಲಿ 86 ಕೊಠಡಿಗಳ ದುರಸ್ತಿಗೆ 118.5ಲಕ್ಷ, ದಾವಣಗೆರೆ ಉತ್ತರದಲ್ಲಿ 43 ಕೊಠಡಿಗಳಿಗೆ 52 ಲಕ್ಷ, ದಾವಣಗೆರೆ ದಕ್ಷಿಣದಲ್ಲಿ 93 ಕೊಠಡಿಗಳಿಗೆ 177 ಲಕ್ಷ, ಹರಿಹರದಲ್ಲಿ 40 ಕೊಠಡಿಗಳಿಗೆ 96.25 ಲಕ್ಷ, ಹೊನ್ನಾಳಿ ಮತ್ತು ನ್ಯಾಮತಿಯಲ್ಲಿ 117 ಕೊಠಡಿಗಳಿಗೆ 232 ಲಕ್ಷ, ಜಗಳೂರಿನಲ್ಲಿ 31 ಕೊಠಡಿಗಳಿಗೆ 75.5 ಲಕ್ಷ ಒಟ್ಟು 751.25 ಲಕ್ಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೆ ಅನುದಾನ ಬಂದಿಲ್ಲ. ಹಾಗಾಗಿ ಶಾಲಾ ಕೊಠಡಿಗಳು ದುರಸ್ತಿ ಭಾಗ್ಯದಿಂದ ದೂರ ಉಳಿದಿವೆ. ಮಕ್ಕಳು ಇರುವ ಸೌಲಭ್ಯದಲ್ಲೇ ಪಾಠ ಕಲಿಯುವ ಅನಿವಾರ್ಯತೆ ಇದೆ.

ರಾಜ್ಯ ಸರ್ಕಾರ ಆದಷ್ಟು ಬೇಗ ಅನುದಾನ ಒದಗಿಸಿದಲ್ಲಿ ಸರ್ಕಾರಿ ಕಟ್ಟಡಗಳು ಮುಖ್ಯವಾಗಿ ಶಾಲೆಗಳು ದುರಸ್ತಿ ಆಗಲಿವೆ. ಮಕ್ಕಳು ನಿರ್ಭೀತಿಯಿಂದ ಕಲಿಯುವ ವಾತಾವರಣವೂ ನಿರ್ಮಾಣ ಆಗಲಿದೆ. ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯ. ಮಳೆ ಮತ್ತು ಮತ್ತಿತರ ಕಾರಣಗಳಿಂದ ಶಾಲಾ ಕೊಠಡಿಗಳು ದುರಸ್ತಿಗೆ ಬಂದಿವೆ. ದುರಸ್ತಿ ಕಾರ್ಯಕ್ಕೆ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುದಾನ ನಿರೀಕ್ಷೆಯಲ್ಲಿದ್ದೇವೆ. ಅನುದಾನ ದೊರೆತ ನಂತರ ದುರಸ್ತಿ ಕಾರ್ಯ ಪ್ರಾರಂಭವಾಗಲಿದೆ. ∙ ಜಿ.ಆರ್‌. ತಿಪ್ಪೇಶಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ

-ರಾ. ರವಿಬಾಬು

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.