ಭವಿಷ್ಯದ ಬರ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿ: ರಮೇಶ್
Team Udayavani, Aug 21, 2017, 3:07 PM IST
ಹರಿಹರ: ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಮೂಲಕ ಮುಂಬರುವ ಬರ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಸಿದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಮಿನಿ ವಿಧಾನಸೌದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅವರು, ಪ್ರಸಕ್ತ ವರ್ಷವೂ ಮಳೆಯಿಲ್ಲದೆ ಕುಡಿಯುವ ನೀರಿನ ಹಾಗೂ ದನಕರುಗಳ ಮೇವಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆಯಿದ್ದು, ಅಧಿಕಾರಿಗಳು ಮುಂಬರುವ ಸಂಕಷ್ಟ ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ತಾಲೂಕಿನಲ್ಲಿ ನೀರಿನ ಸಮಸ್ಯೆ ತೀವ್ರಗೊಳ್ಳಬಹುದಾದ ಜನವಸತಿ ಪ್ರದೇಶಗಳನ್ನು ಈಗಲೇ ಗುರುತಿಸಿ, ಪರ್ಯಾಯ
ವ್ಯವಸ್ಥೆ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ನೀರಿನ ಸಮಸ್ಯೆ ಇರುವ ಜನವಸತಿ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಸ್ಥಳೀಯ ನಗರಸಭೆ, ಪುರಸಭೆ, ಗ್ರಾಪಂ ವಿಳಂಬವಿಲ್ಲದೆ ಟ್ಯಾಂಕರ್ ಬಿಲ್ ಪಾವತಿಸಬೇಕು ಎಂದರು.
ನೀರಿನ ಮಿತ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಗುತ್ತೂರಿನಲ್ಲಿ ಈಗಲೇ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದು ದೂರು
ಬಂದಿದ್ದು, ಸಂಬಂಧಿಸಿದ ಗ್ರಾಮೀಣ ಕುಡಿಯುವ ನೀರು ಇಂಜಿನಿಯರ್ ಕೂಡಲೆ ಸ್ಥಳಕ್ಕೆ ತೆರಳಿ ಸಮಸ್ಯೆ ನಿವಾರಿಸಬೇಕು ಎಂದು ಸೂಚಿಸಿದರು. ಮಳೆಯಿಲ್ಲದೆ ತಾಲೂಕಿನ ಜಮೀನುಗಳು ಬೀಳಾಗಿದ್ದು, ಬರುವ ಬೇಸಿಗೆಯಲ್ಲಿ ದನಕರುಗಳಿಗೆ ಮೇವಿನ ಸಮಸ್ಯೆ ಬಿಗಡಾಯಿಸಬಹುದಾಗಿದೆ. ನಮ್ಮ ತಾಲೂಕಿನಿಂದ ಮೇವು ಬೇರೆ ಕಡೆಗೆ ಸಾಗಾಣಿಕೆ ಆಗದಂತೆ ಪಶು ಸಂಗೋಪನೆ ಹಾಗೂ ಕೃಷಿ ಇಲಾಖಾಧಿಕಾರಿಗಳು ಜಾಗ್ರತೆ ವಹಿಸಬೇಕು
ಎಂದರು.
ರೈತರು ಒಂದು ಬೆಳೆ ಬಿತ್ತನೆ ಮಾಡಿದ ನಂತರ ಬೀಜ ಬೆಳೆಯದಿದ್ದರೆ ಅದನ್ನು ಅಳಿಸಿ, ಮತ್ತೆ ಬಿತ್ತನೆ ನಡೆಸಿರುತ್ತಾರೆ. ಇಂತಹ ಸಂದರ್ಭದಲ್ಲಿ ರೈತರಿಗೆ ವಿಮೆ ಕೊಡಿಸಲು ಕಷ್ಟವಾಗುವುದರಿಂದ ಗ್ರಾಮ ಲೆಕ್ಕಾಧಿಕಾರಿಗಳು ಬಿತ್ತನೆ ಮಾಡಿದ ನಂತರ ಒಮ್ಮೆ ಹಾಗೂ 7-8 ದಿನಗಳಲ್ಲಿ ಬೀಜ ಮೊಳಕೆಯೊಡೆದಾಗ ಮತ್ತೂಮ್ಮೆ ಜಿಪಿಎಸ್ ಮಾಡಬೇಕು. ರೈತರು ವಿಮೆ ಪಡೆದುಕೊಳ್ಳುವಲ್ಲಿ ಯಾವುದೇ ಲೋಪವಾಗದಂತೆ ಗ್ರಾಮ ಲೆಕ್ಕಾಧಿಕಾರಿಗಳು ಎಚ್ಚರಿಕೆಯಿಂದ ಈ ಕಾರ್ಯ ನಿರ್ವಹಿಸಬೇಕು ಎಂದರು. ಸಾರ್ವಜನಿಕ ಆಸ್ಪತ್ರೆಯ ಗುತ್ತಿಗೆ ಕಾರ್ಮಿಕರ ಹಾಗೂ ದಿನಗೂಲಿ ಕಾರ್ಮಿಕರ ಸಂಘದಿಂದ ಕಾರ್ಮಿಕ ಇಲಾಖೆಯ ಮಾರ್ಗಸೂಚಿಯಂತೆ ವೇತನ ಮತ್ತಿತರೆ ಸೌಕರ್ಯ ಒದಗಿಸಲು ಆಗ್ರಹಿಸಿ ಡಿಸಿಗೆ ಮನವಿ ಸಲ್ಲಿಸಲಾಯಿತು.
ತಹಶೀಲ್ದಾರ್ ಜಿ.ನಳಿನಾ, ಪೌರಾಯುಕ್ತೆ ಎಸ್.ಲಕ್ಷ್ಮೀ, ಇಒ ನೀಲಗಿರಿಯಪ್ಪ, ಕೃಷ್ಣಪ್ಪ ಜಾಡರ್, ವೆಂಕಟಮ್ಮ, ವಿವಿಧ ಇಲಾಖಾಧಿಕಾರಿಗಳು ಹಾಜರಿದ್ದರು. ನಂತರ ಶಾಸಕ ಎಚ್.ಎಸ್.ಶಿವಶಂಕರ್ ಜೊತೆ ನಗರದ ಒಳಚರಂಡಿ, ಹಳೆ ಪಿಬಿ ರಸ್ತೆ ಅಭಿವೃದ್ಧಿ ಮುಂ ತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್