ಪ್ರತಿಧ್ವನಿಸಿದ ಕಲಬೆರಕೆ ಬೀಜ

•ಮಾಸಿಕ ಪ್ರಗತಿ ಪರಿಶೀಲನೆ•ಬಿತ್ತನೆ ಬೀಜ ಪರಿಶೀಲನೆಗೆ ವಿಜ್ಞಾನಿಗಳ ತಂಡ ಶೀಘ್ರ ಭೇಟಿ

Team Udayavani, Jun 18, 2019, 3:14 PM IST

dg-tdy-4..

ದಾವಣಗೆರೆ: ಜಿಪಂ ಅಧ್ಯಕ್ಷೆ ಶೈಲಜಾ ಬಸವರಾಜ್‌ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.

ದಾವಣಗೆರೆ: ಬೇಸಿಗೆ ಹಂಗಾಮಿನಲ್ಲಿ ಹರಿಹರ ತಾಲೂಕಿನ ವಿವಿಧ ಭಾಗದಲ್ಲಿ ಭತ್ತದ ಕಲಬೆರಕೆ ಬಿತ್ತನೆ ಬೀಜ ಮಾರಾಟದ ವಿಚಾರ ಸೋಮವಾರ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಬಸವರಾಜ್‌ ಅಧ್ಯಕ್ಷತೆಯಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರತಿಧ್ವನಿಸಿತು.

ಕರ್ನಾಟಕ ಬೀಜ ನಿಗಮದಿಂದಲೇ ಹರಿಹರ ತಾಲೂಕಿನ ಬನ್ನಿಕೋಡು ಇತರೆ ಭಾಗದಲ್ಲಿ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಪೂರೈಕೆ ಮಾಡಲಾಗಿದೆ ಎಂದು ರೈತರು ತಮ್ಮ ಗಮನಕ್ಕೆ ತಂದಿದ್ದಾರೆ. ಅಂತಹ ಬೀಜ ಮಾರಾಟ ಮಾಡಿದವರ ವಿರುದ್ಧ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅಧ್ಯಕ್ಷೆ ಶೈಲಜಾ ಬಸವರಾಜ್‌ ಕೃಷಿ ಇಲಾಖೆ ಉಪ ನಿರ್ದೇಶಕ ಶರಣಪ್ಪ ಬಿ. ಮುದಗಲ್ ಅವರನ್ನ ಪ್ರಶ್ನಿಸಿದರು.

ಕಳಪೆ ಗುಣಮಟ್ಟದ್ದಲ್ಲ, ಬಿತ್ತನೆ ಬೀಜದಲ್ಲಿ ಇತರೆ ಬೀಜಗಳ ಬೆರಕೆ ಮಾಡಲಾಗಿದೆ. ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ, ಸಂಬಂಧಿತ ವಿಜ್ಞಾನಿಗಳಿಗೆ ವರದಿ ಸಲ್ಲಿಸಿದ್ದಾರೆ. 2-3 ದಿನಗಳಲ್ಲಿ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ಶರಣಪ್ಪ ಬಿ. ಮುದಗಲ್ ಮಾಹಿತಿ ನೀಡಿದರು.

ಪ್ರತಿ ಹಂಗಾಮಿನಲ್ಲೂ ಇದೇ ಸಮಸ್ಯೆ ರೈತರು ಅನುಭವಿಸಬೇಕಾಗುತ್ತದೆ. ಮುಂದೆ ಎಂದೆಂದೂ ಕಳಪೆ, ನಕಲಿ ಬಿತ್ತನೆ ಬೀಜ ಮಾರಾಟ ಆಗದಂತೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಶೈಲಜಾ ಬಸವರಾಜ್‌ ಸೂಚಿಸಿದರು.

ದಾವಣಗೆರೆ ಜಿಲ್ಲೆಯ ವಾತಾವರಣಕ್ಕೆ ಹೊಂದಾಣಿಕೆ ಆಗುವಂತಹ ಬಿತ್ತನೆ ಬೀಜ ಮಾತ್ರ ಮಾರಾಟ ಮಾಡಬೇಕು ಎಂದು ಬಿತ್ತನೆ ಬೀಜ ಮಾರಾಟಗಾರರ ಸಭೆಯಲ್ಲಿ ತಿಳಿಸಲಾಗಿದೆ ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶರಣಪ್ಪ ತಿಳಿಸಿದರು.

ಕೃಷಿ ಇಲಾಖೆ, ಬಿತ್ತನೆ ಬೀಜ ಮಾರಾಟಗಾರರೊಂದಿಗೆ ರೈತರು, ಮುಖಂಡರ ಸಭೆ ನಡೆಸಿ, ಇಲಾಖೆ ಕಳಪೆ ಬಿತ್ತನೆ ಬೀಜ ಮಾರಾಟದ ತಡೆಗೆ ಕೈಗೊಂಡಿರುವ ಕ್ರಮ, ರೈತರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಎಚ್. ಬಸವರಾಜೇಂದ್ರ ಸೂಚಿಸಿದರು.

ಜಗಳೂರು ತಾಲೂಕಿನ ಸೊಕ್ಕೆ ಹೋಬಳಿ ಗ್ರಾಮದ ರೈತರನ್ನ ಬಿತ್ತನೆ ಬೀಜಕ್ಕಾಗಿ ಒಂದು ವಾರದಿಂದ ಹೊಸಕರೆಯಿಂದ ಜಗಳೂರಿಗೆ, ಜಗಳೂರಿನಿಂದ ಹೊಸಕೆರೆಗೆ ಅಲೆದಾಡಿಸಲಾಗುತ್ತಿದೆ. ಎಲ್ಲಾ ದಾಖಲೆ ಇದ್ದರೂ ಬಿತ್ತನೆ ಬೀಜವೇ ಖಾಲಿ ಆಗಿದೆ ಎನ್ನಲಾಗುತ್ತಿದೆಯಂತೆ. ಸಂಬಂಧಿತ ರೈತ ಸಂಪರ್ಕ ಕೇಂದ್ರದ ಅಧಿಕಾರಿಗೆ ಸೂಚನೆ ನೀಡಿ, ರೈತರಿಗೆ ಬಿತ್ತನೆ ಬೀಜ ವ್ಯವಸ್ಥೆ ಮಾಡಬೇಕು ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆ. ಸವಿತಾ ಕೃಷಿ ಇಲಾಖೆ ಉಪ ನಿರ್ದೇಶಕ ಶರಣಪ್ಪ ಬಿ. ಮುದಗಲ್ಗೆ ಸೂಚಿಸಿದರು.

ಬಾಡ ಗ್ರಾಮದ ರಾಜು ಎಂಬ ರೈತ ಆತ್ಮಹತ್ಯೆಗೆ ಒಳಗಾಗಿ ಎರಡು ವರ್ಷ ಕಳೆದರೂ ಉಪ ವಿಭಾಗಾಧಿಕಾರಿ ಅಧ್ಯ್ಕಕ್ಷತೆಯ ಸಮಿತಿ ಮುಂದೆ ಆತನಿಗೆ ಸಂಬಂಧಿತ ಕಡತ ಮಂಡನೆ ಆಗಿಲ್ಲ. ಗ್ರಾಮ ಲೆಕ್ಕಾಧಿಕಾರಿ, ರಾಜಸ್ವ ನಿರೀಕ್ಷಕರು ಕೃಷಿ ಇಲಾಖೆಗೆ ಫೈಲ್ ಕಳಿಸಲಾಗಿದೆ ಎಂದು ಹೇಳುತ್ತಾರೆ. ಆ ಫೈಲ್ ಎಲ್ಲಿದೆ, ಯಾವ ಕಾರಣಕ್ಕೆ ಇನ್ನೂ ಎಸಿ ಸಮಿತಿ ಮುಂದೆ ಬಂದಿಲ್ಲ ಎಂದು ಅಧ್ಯಕ್ಷೆ ಶೈಲಜಾ ಬಸವರಾಜ್‌ ಪ್ರಶ್ನಿಸಿದರು. ಆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಶರಣಪ್ಪ ಬಿ. ಮುದಗಲ್ ತಿಳಿಸಿದರು.ಮಳೆ ಕೊರತೆ, ತೋಟಗಾರಿಕಾ ಇಲಾಖಾ ಕಾರ್ಯಕ್ರಮ, ಫಲಾನುಭವಿಗಳ ಆಯ್ಕೆ, ಶಿಕ್ಷಣ, ಆರೋಗ್ಯ ಇಲಾಖೆ ಬಗ್ಗೆ ಚರ್ಚೆ ನಡೆಯಿತು.

ಕೊಳವೆ ಬಾವಿ ಜಟಾಪಟಿ: ಅತೀ ಅಗತ್ಯ ಇರುವ ಕಡೆ ಕೊಳವೆಬಾವಿ ಕೊರೆಸುವಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಸ್ಪಂದಿಸುತ್ತಿಲ್ಲ. ಜಿಲ್ಲಾ ಪಂಚಾಯತ್‌ ವತಿಯಿಂದ ಒಬ್ಬ ಸದಸ್ಯರ ಕ್ಷೇತ್ರದಲ್ಲಿ ಕೊಳವೆ ಬಾವಿ ಕೊರೆಸಲಿಕ್ಕೆ ಆಗಲೇ ಇಲ್ಲ ಎಂದು ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಶೈಲಜಾ ಬಸವರಾಜ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ಸಾಕಷ್ಟು ಚರ್ಚೆಗೆ ಕಾರಣವಾಯಿತು.

ಟಾಸ್ಕ್ಫೋರ್ಸ್‌ ಮೂಲಕ 7 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಪೈಪ್‌ಲೈನ್‌, ನಿರ್ವಹಣೆಗೆ ಬಳಕೆ ಮಾಡಲಾಗುತ್ತಿದೆ. ಕೊಳವೆ ಬಾವಿ ಕೊರೆಸುವುದು ಕೊನೆಯ ಆದ್ಯತೆ. ಅನುದಾನ ಇದೆ ಎಂದು ಹೇಗೆ ಬೇಕೋ, ಎಲ್ಲಿ ಬೇಕೋ ಅಲ್ಲಿ ಅವೈಜ್ಞಾನಿಕವಾಗಿ ಕೊಳವೆಬಾವಿ ಕೊರೆಸುವುದಲ್ಲ. ಸರ್ಕಾರ ಸಹ ಕೊಳವೆಬಾವಿ ಕೊರೆಸುವುದಕ್ಕೆ ಒಪ್ಪುವುದಿಲ್ಲ ಎಂದು ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಎಚ್. ಬಸವರಾಜೇಂದ್ರ ಹೇಳಿದರು.

ನಮಗೂ ಪರಿಸರದ ಬಗ್ಗೆ ಬಹಳ ಕಾಳಜಿ ಇದೆ. ತೀರ ಅಗತ್ಯ ಮತ್ತು ತುರ್ತು ಇರುವ ಕಡೆ ಕೊಳವೆ ಬಾವಿ ಕೊರೆಸುವುದು ತಪ್ಪಲ್ಲ. ಕೊಳವೆಬಾವಿ ಇಲ್ಲದೆ ಸಮುದ್ರಕ್ಕೆ ಪೈಪ್‌ಲೈನ್‌ ಹಾಕಲಿಕ್ಕೆ ಹಣ ಬಳಕೆ ಮಾಡಿಕೊಳ್ಳಲಾದೀತೇ? ಜಿಲ್ಲಾ ಪಂಚಾಯತ್‌ನಿಂದ ಎಷ್ಟು ಬೋರ್‌ಗಳನ್ನ ವೈಜ್ಞಾನಿಕವಾಗಿ ಮತ್ತು ಎಷ್ಟು ಅವೈಜ್ಞಾನಿಕವಾಗಿ ಕೊರೆಸಲಾಗಿದೆ ಎಂದು ಮಾಹಿತಿ ಕೊಡಿ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಎಚ್.ಎನ್‌. ರಾಜುಗೆ ಪ್ರಶ್ನಿಸಿದರು. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆ. ಸವಿತಾ, ಜಗಳೂರು ತಾಲೂಕಿನಲ್ಲಿ ಅರ್ಧ, ಒಂದು ಇಂಚು ನೀರು ಸಿಕ್ಕರೂ ಸಾಕು ಎನ್ನುವ ಪರಿಸ್ಥಿತಿ ಇರುವಾಗ ಬೋರ್‌ ಕೊರೆಸುವುದು ವೈಜ್ಞಾನಿಕ, ಅವೈಜ್ಞಾನಿಕ ಎನ್ನುವುದು ಸರಿ ಅಲ್ಲ. ನಮಗೆ ಒಂದು ಲೋಟ ನೀರು ಸಹ ಮುಖ್ಯ ಎಂಬುದನ್ನ ಅರ್ಥ ಮಾಡಿಕೊಂಡು ಅಧಿಕಾರಿಗಳು ಸ್ಪಂದಿಸಬೇಕು ಎಂದು ತಾಕೀತು ಮಾಡಿದರು. ಕೊಳವೆ ಬಾವಿ ಕೊರೆಸುವ ವಿಚಾರ ಸಾಕಷ್ಟು ಸಮಯ ಚರ್ಚೆ ನಡೆಯಿತು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.