ಧರ್ಮ-ಜಾತಿ ಎರಡೂ ಬೇರೆ


Team Udayavani, Apr 30, 2018, 10:17 AM IST

dav-4.jpg

ಹರಪನಹಳ್ಳಿ: ರಾಜಕೀಯ ನಾಯಕರು ಜಾತಿ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಭಗವಂತ ಸೃಷ್ಟಿಸಿರುವುದು ಮನುಷ್ಯ ಜಾತಿ ಮಾತ್ರ. ಧರ್ಮ ಮತ್ತು ಜಾತಿ ಎರಡೂ ಬೇರೆಯಾಗಿದ್ದು, ಧರ್ಮ ಮಾನವರನ್ನು ಒಗ್ಗೂಡಿಸುತ್ತದೆ, ಜಾತಿ ವಿಂಗಡಿಸುತ್ತದೆ ಎಂದು ಸಿರಿಗೆರೆ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿಶ್ಲೇಷಿಸಿದರು. ತಾಲೂಕಿನ ಎಂ.ಬಾವಿಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಹಾಗೂ ಪತ್ರಿ ಬಸವೇಶ್ವರ ಸ್ವಾಮಿಯ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕಾರಣ ಸಮಾಜವನ್ನು ಕಲುಷಿತಗೊಳಿಸಿದ್ದು, ಚುನಾವಣೆ ಸಂದರ್ಭದಲ್ಲಿ ಜಾತಿಗಳು ಬಯಲಿಗೆ ಬರುತ್ತವೆ. ರಾಜಕಾರಣಿಗಳು ನೀತಿಯನ್ನು ಬಂಡವಾಳ ಮಾಡುವ ಬದಲು ಜಾತಿಯನ್ನು ಬಂಡವಾಳನ್ನಾಗಿ ಮಾಡಿಕೊಳ್ಳುತ್ತಿದ್ದಾರೆ. ಇಂದು ರಾಜಕಾರಣಿಗಳನ್ನು ಭ್ರಷ್ಟರನ್ನಾಗಿ ಮಾಡಿರುವುದು ಮತದಾರರು. ಹಾಗಾಗಿ ಮತದಾರರು ಮಹಾ ಭ್ರಷ್ಟರಾಗಿದ್ದಾರೆ ಎಂದು ಹೇಳಿದರು.

ಮತದಾರರು ತೆಗೆದುಕೊಳ್ಳುವ ಹಣ 5 ವರ್ಷಕ್ಕೆ ಲೆಕ್ಕ ಹಾಕಿದಾಗ ಭಿಕ್ಷುಕರಿಗಿಂತಲೂ ಕಡೆಯಾಗಿರುತ್ತದೆ. ಅಲ್ಲದೇ ತಾಯಂದಿರು ಕೂಡ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ಇನ್ಯಾರೋ ತಂದು ಕೊಟ್ಟ ಸೀರೆಯನ್ನು ತೆಗೆದುಕೊಳ್ಳುವುದು ತಪ್ಪು. ಆದ್ದರಿಂದ ತಾಯಂದಿರು ಮರ್ಯಾದೆಯನ್ನು ಕಾಪಾಡಿಕೊಳ್ಳಬೇಕು. 

ಎಲ್ಲರೂ ಧರ್ಮವನ್ನು ಎತ್ತಿ ಹಿಡಿಯಬೇಕು. ಯಾವುದೇ ಅಮಿಷಗಳಿಗೆ ಒಳಗಾಗದೆ ಪರಿಶುದ್ಧ ಚುನಾವಣೆ ಆಗಲು ಪರಿಶುದ್ಧತೆಯಿಂದ ಮತದಾನ ಮಾಡಬೇಕು. ಆ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ತಿಳಿಸಿದರು. ಮನಗೋಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಪ್ರತಿಯೊಬ್ಬರೂ ಜಾತಿ, ಭೇದ ಭಾವ ಇಲ್ಲದಂತೆ ಪ್ರೀತಿ, ವಿಶ್ವಾಸದಿಂದ ಜೀವನ ನಡೆಸಬೇಕು. ನಾವು ಮಾಡಿದ ಕಾಯಕ, ಸಾಧನೆಗೆ ಕಾರಣವಾಗುತ್ತದೆ. ಆದ್ದರಿಂದ ಎಲ್ಲರೂ ಧಾರ್ಮಿಕ ಸಭೆ,
ಸಮಾರಂಭಗಳಲ್ಲಿ ಭಾಗವಹಿಸಿ ಸಂಸ್ಕಾರ ಕಲಿಯಬೇಕು. ಮಠ, ಮಾನ್ಯಗಳಿಗೆ ತನು, ಮನ, ಧನದ ಸಹಕಾರ ಭಾವನೆ ಇರಲಿ ಎಂದರು.

ನಿವೃತ್ತ ಕನ್ನಡ ಉಪನ್ಯಾಸಕ ಎಂ.ಪಿ.ಎಂ. ಶಾಂತವೀರಯ್ಯ ಮಾತನಾಡಿ, ವಿಜ್ಞಾನ, ತಂತ್ರಜ್ಞಾನ ಮುಂದುವರೆದಂತೆ ಶಾಂತಿ ನೆಮ್ಮದಿ ಇಲ್ಲದಾಗಿದೆ. ಶಿಷ್ಟಚಾರವಿಲ್ಲದೇ ಭ್ರಷ್ಟಾಚಾರವಾಗುತ್ತಿದೆ. ಧರ್ಮ ಬಿಟ್ಟು ಹೋಗದೇ ಎಲ್ಲರೂ ನ್ಯಾಯ, ನೀತಿ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು. 

ಸಾಧು ವೀರಶೈವ ಸಮಾಜದ ಅಧ್ಯಕ್ಷ ಬಿ. ಮಂಜುನಾಥ, ವೀರಶೈವ ಪಂಚಮಸಾಲಿ ತಾಲೂಕು ಅಧ್ಯಕ್ಷ ಪಾಟೀಲ್‌ ಬೆಟ್ಟನಗೌಡ, ನಿವೃತ್ತ ಪ್ರಾಚಾರ್ಯ ಎ. ಸಿದ್ದೇಶ್ವರ್‌, ವಕೀಲ ಕೆ. ಬಸವರಾಜ್‌, ನಿವೃತ್ತ ಶಿಕ್ಷಕ ಎಂ.ಬಸಪ್ಪ, ಕೆ.ಕುಬೇರಪ್ಪ, ಮಲ್ಲಿಕಾರ್ಜುನ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.