ಬಾಕಿ ವೇತನ ಪಾವತಿಗೆ ಆಗ್ರಹ
Team Udayavani, Oct 22, 2019, 11:13 AM IST
ಜಗಳೂರು: ಏಳು ತಿಂಗಳು ಕಳೆದರೂ ವೇತನ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ದಿನಗೂಲಿ ನೌಕರರು ಸಂಜೆ ಕಚೇರಿ ಮುಂಭಾಗದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.
ಸೋಮವಾರ ಬೆಳಗ್ಗೆಯಿಂದ ವಲಯ ಅರಣ್ಯಾ ಧಿಕಾರಿಗಾಗಿ ನೌಕರರು ಕಾದರೂ ಸಹ ಈಗ ಬರುತ್ತೇನೆ, ಆಗ ಬರುತ್ತೇನೆ ಎಂದು ಹೇಳುತ್ತ ಸಂಜಾಯದರೂ ಅಧಿಕಾರಿ ಬಾರದ್ದರಿಂದ ನೌಕರರು ದಿಢೀರ್ ಪ್ರತಿಭಟನೆ ನಡೆಸಿದರು.
ಇಲಾಖೆಯ ಸುಮಾರು 30 ದಿನಗೂಲಿ ನೌಕರರರಿಗೆ ಕಳೆದ ಏಳು ತಿಂಗಳುಗಳಿಂದ ಸರಿಯಾಗಿ ವೇತನ ದೊರೆತಿಲ್ಲ. ಈ ಬಗ್ಗೆ ಕೇಳಿದರೆ ಅಧಿಕಾರಿ ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಸಂಬಳ ಇಲ್ಲದೇ ಕುಟುಂಬ ನಿರ್ವಹಣೆ ಕಷ್ಟಕರವಾಗಿದೆ ಎಂದು ನೌಕರರು ದೂರಿದರು. ಅರಣ್ಯದಲ್ಲಿ ಮತ್ತು ಸಸ್ಯ ಕ್ಷೇತ್ರಗಳಲ್ಲಿ ಹಗಲಿರುಳೆನ್ನೆದೆ ಕಷ್ಟ ಪಟ್ಟು ದುಡಿಯುತ್ತಿದ್ದರೂ ಸಹ ವೇತನ ನೀಡದೇ ಇರುವುದರಿಂದ ಊಟಕ್ಕೂ ಸಹ ಕಷ್ಟಪಡುತ್ತಿದ್ದೇವೆ.
ಇಲಾಖೆಯ ನಿಯಮದಂತೆ 9600 ರೂ. ಸಂಬಳವಿದ್ದರೂ ಕೂಡ ವಲಯ ಅರಣ್ಯ ಅಧಿಕಾರಿಗಳು 7 ಸಾವಿರ ರೂ. ನೀಡುತ್ತಿದ್ದಾರೆ. ಈ ವೇತನವನ್ನೂ ಸಮಯಕ್ಕೆ ಸರಿಯಾಗಿ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ