ಪ್ರತಿಭಟನೆಗೆ ರಜೆ ಕೋರಿ ಮನವಿ
Team Udayavani, Feb 17, 2019, 7:29 AM IST
ಹೊನ್ನಾಳಿ: ಪಂಚಾಯತ್ ರಾಜ್ ಇಲಾಖೆಯ ಮಲತಾಯಿ ಧೋರಣೆ ಖಂಡಿಸಿ ರಾಜ್ಯ ಗ್ರಾಪಂ ಕ್ಲರ್ಕ್ ಮತ್ತು ಡಾಟಾ ಆಪರೇಟರ್ ಗಳ ಕೇಮಾಭಿವೃದ್ಧಿ ಸಂಘ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ರಜೆ ನೀಡಿ ನಮ್ಮ ಪ್ರತಿಭಟನೆಗೆ ಪರೋಕ್ಷವಾಗಿ ಬೆಂಬಲಿಸಬೇಕು ಎಂದು ತಾಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ತಾಲೂಕು ಗ್ರಾಪಂ ಕ್ಲರ್ಕ್ ಮತ್ತು ಡಾಟಾ ಆಪರೇಟರ್ಗಳ ಕೇಮಾಭಿವೃದ್ಧಿ ಸಂಘದ ಸದಸ್ಯರು ಶನಿವಾರ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಸಂಘದ ಸದಸ್ಯ ಬಿ.ಪಿ.ರಾಜ್ಕುಮಾರ್, ಫೆ. 18ರ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಎಲ್ಲಾ ಗ್ರಾಪಂ ಕ್ಲರ್ಕ್ ಮತ್ತು ಡಾಟಾ ಆಪರೇಟರ್ಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಲು ಸಂಘದ ಸದಸ್ಯರು ತೆರಳಲಿದ್ದಾರೆ. ಆದ್ದರಿಂದ ರಜೆ ಮತ್ತು ಅನುಮತಿಗಾಗಿ ತಾಪಂ ಇಒಗೆ ಮನವಿ ಸಲ್ಲಿಸಲಾಗಿದೆ ಎಂದರು.
ಕುಳಗಟ್ಟೆ ರವಿ ಮಾತನಾಡಿ, ಅತ್ಯಂತ ಕಡಿಮೆ ವೇತನದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ಸುಮಾರು 15-18 ಯೋಜನೆಗಳ ಕೆಲಸಗಳನ್ನು ನಾವು ಪ್ರತಿನಿತ್ಯ ನಿರ್ವಹಿಸುತ್ತಿದ್ದೇವೆ. ಜೊತೆಗೆ ಗ್ರಾಪಂ ನ ಇತರ ಹಲವಾರು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ. ನಮ್ಮ ಪರಿಶ್ರಮಕ್ಕೆ ತಕ್ಕ ಸಂಬಳ ಸಿಗುತ್ತಿಲ್ಲ ಎಂದರು.
ಗ್ರಾಪಂ ಕ್ಲರ್ಕ್ ಮತ್ತು ಡಾಟಾ ಆಪರೇಟರ್ಗಳಾದ ಹರಳಹಳ್ಳಿ ಗಣೇಶ್, ರುದ್ರಮ್ಮ, ಮಂಜುಳಮ್ಮ, ರವಿ, ಹರೀಶ್ ಸಾಸ್ವೆಹಳ್ಳಿ, ರಾಜು ಚಟ್ನಹಳ್ಳಿ, ಮಂಜನಾಯ್ಕ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್