ಸೌಲಭ್ಯಕ್ಕಾಗಿ ಮುದ್ರಣ ಕಾರ್ಮಿಕರ ಮನವಿ
Team Udayavani, Jul 6, 2017, 8:29 AM IST
ದಾವಣಗೆರೆ: ಅಸಂಘಟಿತ ವಲಯದಲ್ಲಿರುವ ಮುದ್ರಣ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕ ಮಾದರಿ ಗುರುತಿನ ಚೀಟಿ, ವಿವಿಧ ಸೌಲಭ್ಯ ಒದಗಿಸಲು ಒತ್ತಾಯಿಸಿ ಮುದ್ರಣ ಕಾರ್ಮಿಕರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಸುಮಾರು 25 ಸಾವಿರದಿಂದ 30 ಸಾವಿರಕ್ಕೂ ಹೆಚ್ಚು ಮುದ್ರಣ ಕಾರ್ಮಿಕರು ಮುದ್ರಣಾಲಯದಲ್ಲಿ ದುಡಿಯುತ್ತಿದ್ದಾರೆ. ಕೆಲಸವಿದ್ದಾಗ ಕೆಲಸ ಮಾಡಿ, ಇಲ್ಲದಾಗ ಅರೆ ಬರೆ ಹೊಟ್ಟೆಯಲ್ಲಿ ಜೀವನ ನಡೆಸುತ್ತಿದ್ದಾರೆ. ಈಗ ಗಣಕಯಂತ್ರಗಳ ಪೈಪೋಟಿಯಿಂದಾಗಿ ಮುದ್ರಣ ಕಾರ್ಮಿಕರು ಬಹಳ ಸಂಕಷ್ಟದಲ್ಲಿದ್ದಾರೆ ಎಂದು ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಕೋರಿದ್ದಾರೆ. ಅನೇಕರು ಮನೆ ಇಲ್ಲದೆ, ಮಕ್ಕಳಿಗೆ ಸರಿಯಾಗಿ ವಿದ್ಯಾಭ್ಯಾಸ ಕೊಡಿಸಲಾಗದೆ
ಕಷ್ಟಕರ ಜೀವನ ನಡೆಸುತ್ತಿದ್ದಾರೆ. ಮುದ್ರಣ ಕಾರ್ಮಿಕರ ಕಷ್ಟಗಳಿಗೆ ಸ್ಪಂದಿಸಲು ಸರ್ಕಾರಕ್ಕೆ, ಕಾರ್ಮಿಕರ ಇಲಾಖೆಗೆ ಅನೇಕ ಪತ್ರ ಬರೆಯಲಾಗಿದೆ. ಹೋರಾಟ ನಡೆಸಲಾಗಿದೆ. ಆದರೆ, ಈವರೆಗೂ ಯಾವುದೇ ಸೌಲಭ್ಯ ಒದಗಿಸಲಾಗಿಲ್ಲ. ಈಚೆಗೆ ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಮುದ್ರಣ ಕಾರ್ಮಿಕರನ್ನು ಸೇರ್ಪಡಿಸಿರುವುದು ಸಂತೋಷ ವಿಷಯ ಎಂದರು.
ಕಾರ್ಮಿಕರ ಮನವಿಗೆ ಆಲಿಸಿದ ಸಚಿವರು, ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರಿಸಲು ಸಂಬಂಧಿತರ ಗಮನಕ್ಕೆ
ತರಲಾಗುವುದು ಎಂದು ಭರವಸೆ ನೀಡಿದರು. ರಾಜ್ಯ ಅಧ್ಯಕ್ಷ ಎನ್. ರಾಜೇಂದ್ರ ಬಂಗೇರಾ, ಫಕೃದೀªನ್, ಕೆ.ಆರ್.
ಮಲ್ಲಿಕಾರ್ಜುನ್, ಜಿ.ಎನ್. ವಸಂತಕುಮಾರ್, ಮೃತ್ಯುಂಜಯ, ರಾಘವೇಂದ್ರ, ನಾಗರಾಜ ಪವಾರ್, ಯದ್ ಉಮ್ಮರ್, ಕೆ. ವೀಣಾ, ರೇಣುಕಾ, ಸೃಷ್ಟಿ ನಾಗರಾಜ್, ಗಂಗೋತ್ರಿ ಬಸವರಾಜ್, ಶಿವಕುಮಾರಸ್ವಾಮಿ ಇತರರು ಇದ್ದರು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್