ಕುರುಬ ಸಮಾಜ ಎಸ್ಟಿಗೆ ಸೇರಿಸಲು ಆಗ್ರಹ


Team Udayavani, Dec 13, 2020, 4:35 PM IST

ಕುರುಬ ಸಮಾಜ ಎಸ್ಟಿಗೆ ಸೇರಿಸಲು ಆಗ್ರಹ

ದಾವಣಗೆರೆ: ಎಲ್ಲಾ ಕ್ಷೇತ್ರಗಳಲ್ಲಿ ಹಿಂದುಳಿದಿರುವ ಕುರುಬ ಸಮುದಾಯದವರ ಅಭ್ಯುದಯಕ್ಕೆ ಎಸ್‌ಟಿ ಪಟ್ಟಿಗೆ ಸೇರಿಸಲು ಆಗ್ರಹಿಸಲಾಗುತ್ತಿದೆ. ಹೊರತು ಯಾರ ವಿರುದ್ಧವಾಗಿಯೂ ಹೋರಾಟ ನಡೆಸುತ್ತಿಲ್ಲ ಎಂದು ಕಾಗಿನೆಲೆ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ತಿಳಿಸಿದರು.

ಶನಿವಾರ ದೇವರಾಜ ಅರಸು ಬಡಾವಣೆ ಶ್ರೀ ಬೀರಲಿಂಗೇಶ್ವರ ಭವನದಲ್ಲಿ ನಡೆದ ಕುರುಬ ಎಸ್‌ಟಿ ಹೋರಾಟ ಸಮಿತಿ ಪೂರ್ವಭಾವಿ ಸಭೆಯಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಎಲ್ಲಾನಾಯಕರು ರಾಜಕೀಯ ಪಕ್ಷಕ್ಕೆ ಅಂಟಿಕೊಂಡುಹುಟ್ಟಿರುವುದಿಲ್ಲ. ಜಾತಿ, ಸಮುದಾಯದಲ್ಲಿಹುಟ್ಟಿರುತ್ತಾರೆ. ಜಾತಿಯ ಋಣ ತೀರಿಸಲು ಮುಂದಾಗಬೇಕು. ಈಶ್ವರಪ್ಪ ಅವರು ಸಹ ಹುಟ್ಟತ್ತಲೇ ಬಿಜೆಪಿಯವರಾಗಿ ಹುಟ್ಟಿಲ್ಲ.ಹೋರಾಟಕ್ಕೆ ಬಲ ತುಂಬುವ ಮೂಲಕ ಜಾತಿ ಋಣ ತೀರಿಸಲು ಮುಂದೆ ಬಂದಿದ್ದಾರೆ ಎಂದರು. ಸಮಾಜಕ್ಕೆ ಸಂಬಂಧಿಸಿದ ಹೋರಾಟಗಳಿಗೆ ಅಧಿಕಾರ ಮತ್ತು ಜಾಗೃತಿ ಅವಶ್ಯಕ. ಈಶ್ವರಪ್ಪ ಅವರು ತಮಗಿರುವ ಅಧಿಕಾರದ ಮೂಲಕ ಈ ಹೋರಾಟದ ಹೊಣೆ ಹೊರಬೇಕು ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ,ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿಹಿಂದುಳಿದ ಎಲ್ಲಾ ಜಾತಿಗಳಿಗೆ ಮೀಸಲಾತಿ ದೊರಕಬೇಕು ಎಂಬುದು ಅಂಬೇಡ್ಕರ್‌ರವರ ಆಶಯ. ಕುರುಬ ಸಮಾಜದ ಎಸ್ಟಿ ಮೀಸಲಾತಿಗೆಕಾಗಿನೆಲೆ ಮಹಾಸಂಸ್ಥಾನದ ಸ್ವಾಮೀಜಿಗಳು ನೇತೃತ್ವ ವಹಿಸಿಕೊಂಡಿರುವುದರಿಂದ ಸಮುದಾಯಕ್ಕೆ ಎಸ್ಟಿಮೀಸಲು ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.ಹಿಂದುತ್ವ ಬಿಟ್ಟು ಜಾತಿ ಪರ ಹೋಗಿದ್ದೀರಿ ಎಂದು ಸ್ವಪಕ್ಷೀಯರು ಸೇರಿದಂತೆ ಕೆಲವರು ತಮಗೆ ಪ್ರಶ್ನಿಸುತ್ತಿದ್ದಾರೆ. ಹಿಂದುತ್ವದಲ್ಲಿಯೇ ಈಎಲ್ಲಾ ಜಾತಿಗಳು ಇವೆ. ಬಡವರ ಪರವಾಗಿ ನಿಲ್ಲುವ ಕಾಲಬಂದಿದೆ. ಹಾಗಾಗಿ, ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಯಾವುದೇ ಜಾತಿಗಳಿದ್ದರೂ ಅವುಗಳ ಮೀಸಲಾತಿಗಾಗಿ ತಾವು ಹೋರಾಟ ನಡೆಸುವುದಾಗಿ ತಿಳಿಸಿದರು.

ಕುರುಬ ಸಮಾಜವನ್ನು ಎಸ್ಟಿಗೆ ಸೇರಿಸಬೇಕು ಎಂಬುದು ಹಲವು ವರ್ಷಗಳ ಒತ್ತಾಯ. ರಾಜಕೀಯ ಒತ್ತಡವಿಲ್ಲದಿದ್ದರೆ ನಮ್ಮನ್ನು ಯಾರೂ ಮಾತನಾಡಿಸುವುದಿಲ್ಲ. ಕೆಲವರು ° ರಾಜೀನಾಮೆಕೊಟ್ಟು ಹೋರಾಟ ನಡೆಸಿ ಎನ್ನುತ್ತಿದ್ದಾರೆ. ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಸಿಗುತ್ತದೆ ಎಂದರೆ ನಾನು ರಾಜೀನಾಮೆ ನೀಡಲು ಸಿದ್ದ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಹೋರಾಟಕ್ಕೆ ಆಹ್ವಾನಿಸಿದ್ದೇವೆ. ಕೆಲವು ಕಾರಣಗಳಿಂದ ಅವರು ಪಾಲ್ಗೊಳ್ಳಲು ಆಗುತ್ತಿಲ್ಲ.ನಮ್ಮ ಬೆಂಬಲ ಇರಲಿದೆ. ಯಾವುದೇ ತೊಂದರೆ ಆಗುವುದಿಲ್ಲ ಎಂದಿದ್ದರು. ಅವರು ಯಾವಾಗಬಂದರೂ ಅವರಿಗೆ ಸ್ವಾಗತವಿದೆ ಎಂದು ಹೇಳಿದರು.

ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಕೊಡುವಂತೆ ಕಳೆದ 30 ವರ್ಷಗಳಿಂದ ಹೋರಾಟ ನಡೆಸಿದ್ದರೂ ಸಹ ಯಾವುದೇ ಪ್ರಯೋಜನವಾಗಿರಲಿಲ್ಲ. ಈಗ ಕಾಗಿನೆಲೆಯ ಮತ್ತು ಹೊಸದುರ್ಗ ಶಾಖಾ ಮಠದ ಶ್ರೀಗಳು ಮುಂದಾಳತ್ವ ವಹಿಸಿದ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಕ್ಕೆ ತೆಗೆದುಕೊಂಡಿವೆ. ಕುಲಶಾಸ್ತ್ರ ಅಧ್ಯಯನ ಮುಗಿದ ನಂತರ ರಾಜ್ಯ ಸರ್ಕಾರದ ಒಪ್ಪಿಗೆ ಪಡೆದು, ಪ್ರಯತ್ನಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಪ್ರಾಸ್ತಾವಿಕ ಮಾತನಾಡಿದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಕುರುಬ ಸಮಾಜ ಅತ್ಯಂತ ಹಿಂದುಳಿದ ಸಮಾಜ ಎಂದು ಬ್ರಿಟಿಷರ ಕಾಲದಲ್ಲಿ ಎಸ್‌ಟಿಯಲ್ಲಿತ್ತು ಎಂದು ಹೇಳಿದರು.

ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್‌, ಬಿ.ಎಂ. ಸತೀಶ್‌, ಮುಕುಡಪ್ಪ, ಜೀಹೆÌàಶ್ವರಿ, ಎಚ್‌.ಸಿ. ಜಯಮ್ಮ, ಪ್ರಸನ್ನಕುಮಾರ್‌, ಜಿಪಂಮಾಜಿ ಅಧ್ಯಕ್ಷೆ ಕೆ.ಆರ್‌. ಜಯಶೀಲ, ನಾಗೇಂದ್ರಪ್ಪ,  ಹದಡಿ ಲಿಂಗಣ್ಣ, ಶಂಕರಪ್ಪ, ರಾಜುಗೌಡ, ಪ್ರಭಾವತಿ, ಶಶಿಕಲಾ ಇದ್ದರು.

 

ಪಾದಯಾತ್ರೆಗೆ ತೀರ್ಮಾನ : ಕುರುಬ ಸಮಾಜದ ಎಸ್‌ಟಿ ಮೀಸಲಾತಿಗಾಗಿ ಆಗ್ರಹಿಸಿ ದಾವಣಗೆರೆ, ಹಾವೇರಿ, ಚಿತ್ರದುರ್ಗ ಜಿಲ್ಲೆಗಳ ವಿಭಾಗ ಮಟ್ಟದ ಸಮಾವೇಶವನ್ನು ಜ. 6 ರಂದು ದಾವಣಗೆರೆಯಲ್ಲಿ ಆಯೋಜಿಸಲು ಮತ್ತು ಜ.15 ರಿಂದ ಕಾಗಿನೆಲೆಯಿಂದ ಬೆಂಗಳೂರು ವರೆಗೆ ಪಾದಯಾತ್ರೆ ಕೈಗೊಳ್ಳಲು ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.