ಮಗು ಪತ್ತೆಗೆ ಸಹಕರಿಸಿದವರಿಗೆ ಸನ್ಮಾನ  

ಪೊಲೀಸರ ನಿರಂತರ ತನಿಖೆಯಿಂದ ಸತ್ಯಾಂಶ ಬಯಲು: ಜಿಲ್ಲಾ ರಕ್ಷಣಾಧಿಕಾರಿ ರಿಷ್ಯಂತ್‌ ಶ್ಲಾಘನೆ

Team Udayavani, Apr 14, 2022, 3:37 PM IST

police

 ದಾವಣಗೆರೆ: ಇಲ್ಲಿನ ಚಾಮರಾಜಪೇಟೆಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಾ. 16ರಂದು ಅಪಹರಣಕ್ಕೆ ಒಳಗಾಗಿದ್ದ ಮಗುವಿನ ಪತ್ತೆಗೆ ಸಹಕರಿಸಿದ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬುಧವಾರ ಜಿಲ್ಲಾ ಪೊಲೀಸ್‌ ರಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ದಾವಣಗೆರೆ ನಗರ ಪೊಲೀಸ್‌ ಉಪಾಧಿಧೀಕ್ಷಕ ನರಸಿಂಹ ತಾಮ್ರಧ್ವಜ, ಮಹಿಳಾ ಪೊಲೀಸ್‌ ಠಾಣೆ ನಿರೀಕ್ಷಕಿ ಶಿಲ್ಪಾ, ಎಸ್.ಐ ಪ್ರಭು ಹಾಗೂ ಇತರೆ ಸಿಬ್ಬಂದಿ ಮತ್ತು ಮಗು ಪತ್ತೆ ಹಚ್ಚಲು ನೆರವಾದ ದಾವಣಗೆರೆ ಎಸ್‌ಪಿಎಸ್‌ ನಗರದ ಚಂದ್ರಮ್ಮ ಅವರನ್ನು 25 ಸಾವಿರ ರೂ. ನಗದು ಬಹುಮಾನದೊಂದಿಗೆ ಗೌರವಿಸಲಾಯಿತು.

ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌ ಮಾತನಾಡಿ, ಚಾಮರಾಜಪೇಟೆಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಿಂದ ಮಾ. 16ರಂದು ಅಪಹರಣಕ್ಕೆ ಒಳಗಾಗಿದ್ದ ಮಗುವಿನ ಪತ್ತೆಗೆ ಸಹಕರಿಸಿದ ನಮ್ಮ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಚಂದ್ರಮ್ಮ ಅವರಿಗೆ ಸನ್ಮಾನಿಸಲಾಗಿದೆ. ಮುಂದೆಯೂ ಅವರು ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸಿದರು.

ಮಗುವಿನ ಅಪಹರಣ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗುಲ್ಜಾರ್‌ ಬಾನು, ಫಾತೀಮಾ ಬೇಗಂ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಅಂದು ಮಗು ಜನಿಸಿದ ಕೆಲವೇ ಸಮಯದಲ್ಲಿ ನಮ್ಮದೇ ಮಗು ಎಂದು ಹೇಳಿದ ಮಹಿಳೆಯೊಬ್ಬರು ಮಗುವನ್ನು ಕರೆದೊಯ್ದು ಬೆಂಗಳೂರಿನ ಮಗಳ ಮನೆಗೆ ಕೊಟ್ಟು ಬಂದಿದ್ದರು. ಮಗುವಿನ ಪತ್ತೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮಗುವಿನ ಪತ್ತೆಗಾಗಿ ಪೊಲೀಸ್‌ ಉಪಾಧಿಧೀಕ್ಷಕ ನರಸಿಂಹ ತಾಮ್ರಧ್ವಜ, ಮಹಿಳಾ ಪೊಲೀಸ್‌ ಠಾಣೆ ನಿರೀಕ್ಷಕಿ ಶಿಲ್ಪಾ, ಎಸ್‌ಐ ಪ್ರಭು ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು. ಪ್ರತಿಯೊಂದು ಮನೆಯಲ್ಲೂ ಹುಡುಕಾಟ ಪ್ರಾರಂಭಿಸಿದಾಗ ಸಿಕ್ಕಿ ಬೀಳಬಹುದು ಎಂದು ಆರೋಪಿ ಗುಲ್ಜಾರ್‌ ಬಾನು ಬೆಂಗಳೂರಿನಿಂದ ಮಗುವನ್ನು ಕರೆಸಿ ಬಸ್‌ ನಿಲ್ದಾಣದಲ್ಲಿ ಚಂದ್ರಮ್ಮ ಎಂಬುವರಿಗೆ ಕೊಟ್ಟು ಹೋಗಿದ್ದರು ಎಂದು ತಿಳಿಸಿದರು.

ಮಗು ಕೊಟ್ಟು ಹೋದವರು ಎಷ್ಟು ಹೊತ್ತಾದರೂ ಬರಲಿಲ್ಲ ಎಂಬ ಕಾರಣಕ್ಕೆ ಚಂದ್ರಮ್ಮ ಸಮಯಪ್ರಜ್ಞೆ ತೋರಿ ನಮ್ಮ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮಗುವನ್ನು ಪೋಷಕರಿಗೆ ಒಪ್ಪಿಸಲಾಯಿತು. ಮಗುವಿನ ಪತ್ತೆಗೆ ಸಹಕರಿಸಿದ ಚಂದ್ರಮ್ಮ ಅವರಿಗೆ 25 ಸಾವಿರ ರೂ. ಬಹುಮಾನ ನೀಡಲಾಗಿದೆ ಎಂದರು.

ಆಗ ತಾನೇ ಜನಿಸಿದ ಮಗುವಿಗೆ ಯಾವುದೇ ಗುರುತು ಇರುವುದೇ ಇಲ್ಲ. ಹಾಗಾಗಿ ಪತ್ತೆ ಹಚ್ಚುವುದು ಬಹಳ ಕಷ್ಟವಾಗಿತ್ತು. ನಮ್ಮ ಅಧಿಕಾರಿಗಳು, ಸಿಬ್ಬಂದಿ ಹಗಲಿರುಳು ತನಿಖೆ ನಡೆಸಿದ್ದರ ಪರಿಣಾಮ ಮಗು ಸಿಕ್ಕಿದೆ. ಹಾಸನದಲ್ಲಿ ಕೆಲ ವರ್ಷಗಳ ಹಿಂದೆ ಹಾಗೂ ಹುಬ್ಬಳ್ಳಿಯಲ್ಲೂ ಇಂಥದ್ದೇ ಪ್ರಕರಣ ನಡೆದಿತ್ತು. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಮಗುವನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ನಗರ ಪೊಲೀಸ್‌ ಉಪಾಧೀಕ್ಷಕ ನರಸಿಂಹ ತಾಮ್ರಧ್ವಜ, ಮಹಿಳಾ ಪೊಲೀಸ್‌ ಠಾಣೆ ನಿರೀಕ್ಷಕಿ ಶಿಲ್ಪಾ, ಎಸ್‌.ಐ. ಪ್ರಭು ಇತರರು ಇದ್ದರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.