ತುಪ್ಪದಹಳ್ಳಿ ಕೆರೆಗೆ ಹರಿದು ಬಂದ ಭದ್ರೆ

ಬರಪೀಡಿತ ಜಗಳೂರು ತಾಲೂಕಿನ ಜನರ ಮೊಗದಲ್ಲೀಗ ಮಂದಹಾಸ

Team Udayavani, Apr 6, 2022, 5:05 PM IST

jagaluru

ಜಗಳೂರು: ಆ ಕ್ಷಣ ನಿಜಕ್ಕೂ ವಿಸ್ಮಯ. ತುಪ್ಪದಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು ಬೃಹತ್‌ ರೈಸಿಂಗ್‌ ಮೇನ್‌ (ಪೈಪ್‌ಲೈನ್‌) ಇಣುಕಿ ನೋಡುತ್ತಿದ್ದರು. ಇದ್ದಕ್ಕಿದ್ದಂತೆ ಶಿವನ ಜಡೆಯಿಂದ ಗಂಗೆ ಆವಿರ್ಭವಿಸಿದಂತೆ ನೀರು ಚಿಮ್ಮಿತು. ಅಲ್ಲಿ ಸೇರಿದ್ದ ಜನರ ಹರ್ಷಕ್ಕೆ ಪಾರವೇ ಇರಲಿಲ್ಲ.

ಈ ದೃಶ್ಯ ಕಂಡು ಬಂದಿದ್ದು ಜಗಳೂರು ತಾಲೂಕಿನ ತುಪ್ಪದಹಳ್ಳಿ ಕೆರೆಯ ಮತ್ತು ಚಟ್ನಳ್ಳಿ ಗುಡ್ಡದಲ್ಲಿ ನಿರ್ಮಿಸಲಾಗಿರುವ ಡಿಲೆವರಿ ಚೇಂಬರ್‌ನಲ್ಲಿ (ನೀರಿನ ಕಾರಂಜಿ). ಕೆಂಪು ಮಿಶ್ರಿತ ಹಾಲ್ನೋರೆಯ ತುಂಗಭದ್ರೆಯ ಆಗಮನ ಇಡೀ ಜಗಳೂರು ತಾಲೂಕಿನ ಜನರಿಗೆ ಭರವಸೆಯ ಬೆಳ್ಳಿರೇಖೆಯನ್ನು ಮೂಡಿಸಿದವು.

ಹರಪನಹಳ್ಳಿಯ ದೀಟೂರಿನ ತುಂಗಭದ್ರಾ ನದಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಚಟ್ನಳ್ಳಿ ಗುಡ್ಡದಲ್ಲಿ ನಿರ್ಮಿಸಲಾಗಿರುವ ಡಿಲೆವರಿ ಚೇಂಬರ್‌ನಿಂದ ನೀರು ಚಿಮ್ಮುತ್ತಿದ್ದಂತೆ ಬರಗಾಲದಿಂದ ತತ್ತರಿಸಿ ಹೋಗಿದ್ದ ಜಗಳೂರು ತಾಲೂಕಿನ ಜನರ ಸಂತೋಷಕ್ಕೆ ಪಾರವೇ ಇರಲಿಲ್ಲ. ಅಲ್ಲಿಂದ 8 ಕಿಮೀ ದೂರದ ತುಪ್ಪದಹಳ್ಳಿ ಕೆರೆಗೆ ಅಳವಡಿಸಲಾಗಿರುವ ಪೈಪ್‌ಲೈನ್‌ ಮೂಲಕ ನೀರು ಬರುತ್ತಿರುವುದನ್ನೇ ಇಣುಕಿ ನೋಡುತ್ತಿದ್ದ ಜನರಿಗೆ ನೀರು ಕೆರೆ ಹರಿಯುತ್ತಿದ್ದಂತೆ ಜನರ ಮುಖದಲ್ಲಿ ಮಂದಹಾಸದ ಗೆರೆಗಳು ಮೂಡತೊಡಗಿದವು. ಸುಮಾರು ಮೂರು ವರ್ಷಗಳ ನಿರಂತರ ಪರಿಶ್ರಮದ ಫಲವಾಗಿ ಬರದ ನಾಡಿಗೆ ನೀರು ಬಂದಿರುವುದು ಮಹತ್ವದ ಮೈಲುಗಲ್ಲು.

ಏತ ನೀರಾವರಿ ಯೋಜನೆ ಹಿನ್ನೆಲೆ

2018ರಲ್ಲಿ ಜಗಳೂರಿನಲ್ಲಿ ನಡೆದ ತರಳಬಾಳು ಹುಣ್ಣಿಮೆಯಂದು ಕಡೆಯ ದಿನ ಜಗಳೂರು ಮತ್ತು ಭರಮಸಾಗರ ಏತ ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ತರಳಬಾಳು ಜಗದ್ಗುರುಗಳು ಅಂದಿನ ಸಿಎಂ ಸಿದ್ದರಾಮಯ್ಯ ಅವರ ಗಮನ ಸೆಳೆದರು. ಬಜೆಟ್‌ ನಲ್ಲಿ ಯೋಜನೆಗೆ ಅನುದಾನ ಮೀಸಲಿರಿಸುವಂತೆ ಮಾಡಿದರು. ಸಿದ್ದರಾಮಯ್ಯನವರು ಭರಮಸಾಗರ ಮತ್ತು ಜಗಳೂರು ಎರಡು ಯೋಜನೆಗಳಿಗೆ ತಲಾ 250 ಕೋಟಿ ರೂ. ಮೀಸಲಿಟ್ಟರು. ಆಗ ಶಾಸಕರಾಗಿದ್ದ ಎಚ್‌.ಪಿ. ರಾಜೇಶ್‌ ಮತ್ತು ಹಾಲಿ ಶಾಸಕ ಎಸ್‌.ವಿ. ರಾಮಚಂದ್ರ ತಮ್ಮ ಪಕ್ಷಗಳ ಸರ್ಕಾರಗಳ ಅವಧಿಯಲ್ಲಿ ಏತ ನೀರಾವರಿ ಯೋಜನೆ ಜಾರಿಗೆ ಶ್ರಮಿಸಿದರು.

ಅಲ್ಲದೆ ತರಳಬಾಳು ಜಗದ್ಗುರುಗಳ ಇಚ್ಛಾಶಕ್ತಿಯ ಫಲವಾಗಿ ತುಪ್ಪದಹಳ್ಳಿ ಕೆರೆಗೆ ಭದ್ರಾ ನೀರು ಹರಿದಿದೆ. ಹರಪನಹಳ್ಳಿ ಬಳಿಯ ದೀಟೂರಿನಲ್ಲಿ ಹರಿಯುತ್ತಿರುವ ತುಂಗಭದ್ರಾನದಿಯಿಂದ ಚಟ್ನಳ್ಳಿ ಗುಡ್ಡದ ಡಿಲೆವರಿ ಚೇಂಬರ್‌ವರೆಗೆ ರೈಸಿಂಗ್‌ ಮೇನ್‌ ನ ದೂರು 32 ಕಿಮೀ. ಅಲ್ಲಿಂದ ಹರಪನಹಳ್ಳಿಯ 6 ಕೆರೆಗಳಿಗೆ ಮತ್ತು ಜಗಳೂರು ತಾಲೂಕಿನ 51 ಕೆರೆಗಳಿಗೆ ಪ್ರತ್ಯೇಕವಾಗಿ ಎರಡು ಬೃಹತ್‌ ಪೈಪ್‌ ಲೈನ್‌ ಮಾರ್ಗಗಳನ್ನು ನಿರ್ಮಿಸಲಾಗಿದೆ. ಪ್ರಸ್ತುತ ಜಗಳೂರಿನ ತುಪ್ಪದಹಳ್ಳಿ ಕೆರೆಗೆ ಮಾತ್ರ ಗುರುತ್ವಾಕರ್ಷಣೆ ಮೂಲಕ ಅಳವಡಿಸಲಾಗಿರುವ ಪೈಪ್‌ಲೈನ್‌ನಲ್ಲಿ ಪ್ರಾಯೋಗಿಕವಾಗಿ ನೀರು ಹರಿಯುತ್ತಿದೆ. ದೀಟೂರಿನ ಜಾಕ್‌ವೆಲ್‌ನಲ್ಲಿ ಅಳವಡಿಸಲಾಗಿರುವ 9 ಬೃಹತ್‌ ಮೋಟಾರ್‌ಗಳಲ್ಲಿ 2 ಮೋಟಾರ್‌ಗಳನ್ನು ಮಾತ್ರ ಪ್ರಾಯೋಗಿಕವಾಗಿ ಕಾರ್ಯ ನಿರ್ವಹಿಸುತ್ತಿವೆ.

ಇನ್ನೊಂದು ಮೋಟಾರ್‌ ಅನ್ನು ಹೆಚ್ಚುವರಿಯಾಗಿ ಮೀಸಲಿಡಲಾಗಿದೆ. ಎರಡು ಮೋಟಾರ್‌ಗಳಿಂದ ಪ್ರತಿ ಸೆಕೆಂಡ್‌ಗೆ 30 ಕ್ಯೂಸೆಕ್‌ ನೀರು ತುಪ್ಪದಹಳ್ಳಿ ಕೆರೆಗೆ ಹರಿಯುತ್ತಿದೆ. ಮಳೆಗಾಲದಲ್ಲಿ 57 ಕೆರೆಗಳಿಗೂ ನೀರು ಹರಿಯಲಿದೆ. ಸಣ್ಣಪುಟ್ಟ ಕಾಮಗಾರಿಗಳು ಬಾಕಿ ಉಳಿದಿದ್ದುಪೂರ್ಣಗೊಳಿಸಲು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಗುತ್ತಿಗೆ ಪಡೆದಿರುವ ಉಡುಪಿ ಮೂಲಕ ಜಿ. ಶಂಕರ್‌ ಕಂಪನಿಯ ಅಧಿಕಾರಿಗಳು, ಕಾರ್ಮಿಕರು ಶ್ರಮಿಸುತ್ತಿದ್ದಾರೆ.

 -ರವಿಕುಮಾರ ಜೆ.ಓ. ತಾಳಿಕೆರೆ

 

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.