ರೈತ ಸಂಘದಿಂದ ನಾಳೆ ರಸ್ತೆ ತಡೆ
Team Udayavani, Jul 5, 2020, 10:27 AM IST
ದಾವಣಗೆರೆ: ತಾಲೂಕಿನ ಎಚ್. ಕಲ್ಪನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜು. 6 ರಂದು ಜನ ಮತ್ತು ಜಾನುವಾರುಗಳೊಂದಿಗೆ ರಸ್ತೆ ತಡೆ ನಡೆಸಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಹೊನ್ನೂರು ಮುನಿಯಪ್ಪ ತಿಳಿಸಿದ್ದಾರೆ.
ಎಚ್. ಕಲ್ಪನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹಲವಾರು ಬಾರಿ ರಸ್ತೆ ತಡೆ, ಹೋರಾಟ ನಡೆಸಿದ ಸಂದರ್ಭದಲ್ಲಿ ಸೇತುವೆ ನಿರ್ಮಾಣದ ಭರವಸೆ ನೀಡಿದ್ದ ಅಧಿಕಾರಿಗಳು ಈಗ ಹಣದ ಕೊರತೆ ನೆಪದಲ್ಲಿ ಸೇತುವೆ ನಿರ್ಮಾಣ ಸಾಧ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಎರಡು ದಿನಗಳಲ್ಲಿ ಸೇತುವೆ ಕಾಮಗಾರಿ ಪ್ರಾರಂಭಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಸೋಮವಾರದ ವೇಳೆಗೆ ಕಾಮಗಾರಿ ಪ್ರಾರಂಭವಾಗದಿದ್ದಲ್ಲಿ ಅನಿವಾರ್ಯವಾಗಿ ರಸ್ತೆ ತಡೆ ನಡೆಸಲಾಗುವುದು. ಆಗ ಆಗುವಂತಹ ಎಲ್ಲ ರೀತಿಯ ಅನಾಹುತಕ್ಕೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಸಂಬಂಧಿತ ಅಧಿಕಾರಿ ವರ್ಗವೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಚ್. ಕಲ್ಪನಹಳ್ಳಿ ಗ್ರಾಮವೇ ಇಬ್ಭಾಗವಾಗಿದೆ.
ಒಂದು ಕಡೆ ಶಾಲೆ, ಪಶು ಆಸ್ಪತ್ರೆ, ದೇವಸ್ಥಾನಗಳಿವೆ. ಒಂದು ಕಡೆಯಿಂದ ಮತ್ತೂಂದು ಕಡೆಗೆ ಹೋಗಲಿಕ್ಕೆ ಅವಕಾಶವೇ ಇಲ್ಲ. 2 ಕಿಲೋಮೀಟರ್ ದೂರದವರೆಗೆ ಹೋಗಿ ಗ್ರಾಮದ ಮತ್ತೂಂದು ಕಡೆಗೆ ಬರಬೇಕಾಗುತ್ತದೆ. ಅಷ್ಟೊಂದು ಅವೈಜ್ಞಾನಿಕವಾದ ಕೆಲಸ ಮಾಡಲಾಗಿದೆ. ಕೆಳ ಸೇತುವೆ ಮಾಡಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಾರೆ. ಆ ಸೇತುವೆ ಮಾಡಿರುವುದು ರೈತರು, ಜನ ಅನುಕೂಲಕ್ಕೆ ಅಲ್ಲ, ಉದ್ಯಮಿಗಳು, ಜನಪ್ರತಿನಿಧಿಗಳ ಅನುಕೂಲಕ್ಕಾಗಿ ಎಂದು ದೂರಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರ ನಾಯ್ಕ ಮಾತನಾಡಿ, ಎಚ್. ಕಲ್ಪನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹೋರಾಟ ನಡೆಸಿದಾಗ ಸ್ಥಳಕ್ಕೆ ಭೇಟಿ ನೀಡಿದ್ದ ಅಂದಿನ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರೇ ಕಾಮಗಾರಿ ಅವೈಜ್ಞಾನಿಕವಾಗಿದೆ. ಸೇತುವೆ ನಿರ್ಮಾಣ ಮಾಡಿಕೊಡಲಾಗುವುದು ಎಂಬ ಭರವಸೆ ನೀಡಿದ್ದರು. ಅದರಂತೆ ಸೇತುವೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್