![1-assam](https://www.udayavani.com/wp-content/uploads/2024/07/1-assam-415x233.jpg)
ಶಂಕ್ರಪ್ಪನ ಕುಟುಂಬಕ್ಕೆ ಪರಿಹಾರ ಕೊಡಿ
Team Udayavani, Apr 12, 2017, 1:29 PM IST
![dvg2.jpg](https://www.udayavani.com/wp-content/uploads/2017/04/12/dvg2.jpg)
ದಾವಣಗೆರೆ: ಲೇಬರ್ ಕಾಲೋನಿಯ ಅಯ್ಯಪ್ಪಸ್ವಾಮಿ ದೇವಸ್ಥಾನದ ಬಳಿ ಏ. 8 ರಂದು ರಾತ್ರಿ ಬಿಡಾಡಿ ದನಗಳ ತಿವಿತದಿಂದ ಸಾವನ್ನಪ್ಪಿದ ಶಂಕರಪ್ಪ ಅವರ ಕುಟುಂಬಕ್ಕೆ ಮಹಾನಗರ ಪಾಲಿಕೆ ಸೂಕ್ತ ಪರಿಹಾರ ಕೊಡಬೇಕು ಎಂದು ನಗರಪಾಲಿಕೆ ಬಿಜೆಪಿ ಸದಸ್ಯ ಡಿ.ಕೆ. ಕುಮಾರ್ ಒತ್ತಾಯಿಸಿದ್ದಾರೆ.
ಟೈಲರಿಂಗ್ ಮಾಡುತ್ತಿದ್ದ ಶಂಕರಪ್ಪರ ನಿಧನದಿಂದಾಗಿ ಕುಟುಂಬ ಸಂಕಷ್ಟದಲ್ಲಿದೆ. ಸಂಬಂಧಿತರು ಗಮನಹರಿಸಿ, ಸೂಕ್ತ ಪರಿಹಾರ ನೀಡಬೇಕು. ಬೀಡಾಡಿ ದನವೊಂದಕ್ಕೆ 10 ಸಾವಿರ ದಂಡ ವಿಧಿಸುವುದು, ಸಮನ್ಸ್ ಜಾರಿ ಒಳಗೊಂಡಂತೆ ವಿವಿಧ ವಿಧಾನಗಳ ಮೂಲಕ ಬೀಡಾಡಿ ದನಗಳ ನಿಯಂತ್ರಣದ ಕ್ರಮ ತೆಗೆದುಕೊಳ್ಳಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಬೀಡಾಡಿ ದನಗಳ ತಿವಿತಕ್ಕೆ ಒಳಗಾಗಿ ಶಂಕರಪ್ಪ ಸಾವನ್ನಪ್ಪಿದ ವಿಷಯವನ್ನು ದೂರವಾಣಿ ಮೂಲಕ ಮೇಯರ್ ಗಮನಕ್ಕೆ ತರಲು ಯತ್ನಿಸಿದಾಗ ಅವರ ಪತಿ ಫೋನ್ ಸೀÌಕರಿಸಿದರು. ಎಲ್ಲಾ ವಿಚಾರ ಕೇಳಿದ ನಂತರ ಇನ್ನೊಬ್ಬ ಸದಸ್ಯ ಶಿವನಹಳ್ಳಿ ರಮೇಶ್ಗೆ ವಿಷಯ ತಿಳಿಸುವಂತೆ ಹೇಳಿದರು. ಬೀಡಾಡಿ ದನಗಳ ತಿವಿತದಿಂದಲೇ ಶಂಕರಪ್ಪ ಮೃತಪಟ್ಟರೂ ಈವರೆಗೆ ಯಾವುದೇ ಅಧಿಕಾರಿ ಭೇಟಿ ನೀಡಿ ಏನಾಗಿದೆ ಎಂದು ಕೇಳಿಲ್ಲ ಎಂದು ದೂರಿದರು.
ಅದೇ ಬಡವ ಶಂಕರಪ್ಪನ ಬದಲಿಗೆ ಶ್ರೀಮಂತರಿಗೆ ಈ ರೀತಿ ಆಗಿದ್ದರೆ ಅಧಿಕಾರಿಗಳು, ಜನಪ್ರತಿನಿಧಿಗಳು ದಿನವಿಡೀ ಅಲೆಯುತ್ತಿದ್ದರು. ಕಾರು ಇಲ್ಲದಿದ್ದರೆ ಆಟೋದಲ್ಲಿ ಹೋಗಿ, ಬರುತ್ತಿದ್ದರು. ನಗರಪಾಲಿಕೆಯಲ್ಲಿ ಸಮಸ್ಯೆಗಳ ಬಗ್ಗೆ ಯಾರ ಬಳಿ ಹೇಳಬೇಕು ಎನ್ನುವುದು ಗೊತ್ತಾಗುತ್ತಿಲ್ಲ. ಯಾರು ಸಹ ಸ್ಪಂದಿಸುವುದೇ ಇಲ್ಲ.
ಜನರು ಹೇಳುವಂತೆ ನಗರಪಾಲಿಕೆ ನರಕಪಾಲಿಕೆ ಅನ್ನುವಂತಾಗಿದೆ. ಶಂಕರಪ್ಪನವರ ಕುಟುಂಬಕ್ಕೆ ಪರಿಹಾರ ಕೋರಿ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಂದಿ, ನಾಯಿಗಳ ಕಾಟವೂ ವಿಪರೀತವಾಗಿದೆ. ಹಂದಿ ನಿರ್ಮೂಲನೆ ಬಗ್ಗೆ ಹೇಳುತ್ತಾರೆಯೇ ಹೊರತು ಹಂದಿ ನಿರ್ಮೂಲನೆ ಆಗಿಲ್ಲ. ಹಂದಿಗಳ ನಿರ್ಮೂಲನೆ ಮಾಡಬೇಕು.
ಸೂಕ್ತ ಕಡೆ ವರಹಾಶಾಲೆ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಎಚ್.ಸಿ. ಜಯಮ್ಮ ಮಾತನಾಡಿ, ಮಹಾನಗರ ಪಾಲಿಕೆ ಒಂದು ವಾರದಲ್ಲಿ ಬೀಡಾಡಿ ದನಗಳನ್ನು ಹಿಡಿದು, ಗೋಶಾಲೆಯಲ್ಲಿ ಬಿಡಬೇಕು. ಬೀಡಾಡಿ ದನಗಳ ಮಾಲಿಕರಿಗೆ ಸಮನ್ಸ್ ಜಾರಿ ಮಾಡಬೇಕು. ಯಾವುದೇ ರೀತಿಯ ಅಹಿತಕರ ಘಟನೆ ನಡೆದಲ್ಲಿ ಸಂಬಂಧಿತ ಮಾಲಿಕರನ್ನೇ ಸಂಪೂರ್ಣ ಹೊಣೆಗಾರರನ್ನಾಗಿ ಮಾಡಬೇಕು.
ಬೀಡಾಡಿ ದನಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ದಕ್ಷಿಣ ಯುವ ಮೋರ್ಚಾ ಅಧ್ಯಕ್ಷ ಶಿವನಗೌಡ ಪಾಟೀಲ್, ಶಾಂತಕುಮಾರ್ ಸೋಗಿ, ಟಿಂಕರ್ ಮಂಜಣ್ಣ, ಶ್ರೀಕಾಂತ್ ನೀಲಗುಂದ, ಗುರುರಾಜ್, ಭವಾನಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ](https://www.udayavani.com/wp-content/uploads/2024/07/13-14-150x90.jpg)
Davanagere: ಕಾಳಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ರಾಗಿ ಸಂಗ್ರಹ; ಓರ್ವ ಬಂಧನ
![13-davangere](https://www.udayavani.com/wp-content/uploads/2024/07/13-davangere-150x90.jpg)
Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು
![drowned](https://www.udayavani.com/wp-content/uploads/2024/07/drowned-1-150x93.jpg)
Harihara; ಕೊಚ್ಚಿ ಹೋಗಿದ್ದ ಯುವಕನ ಶವ 2 ಕಿ.ಮೀ ದೂರದಲ್ಲಿ ಪತ್ತೆ
![Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ](https://www.udayavani.com/wp-content/uploads/2024/07/RE-1-150x104.jpg)
Renukacharya ಎಲ್ಲ ಸರ್ಕಾರಗಳ ಅವಧಿಯ ಭ್ರಷ್ಟಾಚಾರ ತನಿಖೆಯಾಗಲಿ
![BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ](https://www.udayavani.com/wp-content/uploads/2024/07/davanagere-150x83.jpg)
BJP: ದಾವಣಗೆರೆಯಲ್ಲಿ ಬಿಜೆಪಿ ಸೋಲಿಗೆ ರೇಣುಕಾಚಾರ್ಯ ತಂಡವೇ ಕಾರಣ: ಸ್ವಪಕ್ಷೀಯರ ಆರೋಪ
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.