ಸೀಲ್ಡೌನ್ ಪ್ರದೇಶದಲ್ಲಿ ಅಗತ್ಯ ವಸ್ತುಗಳಿಗಾಗಿ ಜನರ ಪರದಾಟ
Team Udayavani, May 13, 2020, 6:19 AM IST
ದಾವಣಗೆರೆ: ಸೀಲ್ಡೌನ್ ಪ್ರದೇಶದಲ್ಲಿ ಅಗತ್ಯ ವಸ್ತುಗಳ ವ್ಯವಸ್ಥೆ ಮಾಡುವಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮುಂದಾಗುತ್ತಿಲ್ಲ ಎಂದು ಸೋಮವಾರ ಎಸ್.ಪಿ.ಎಸ್. ನಗರದ ನಿವಾಸಿಗಳು ಪ್ರತಿಭಟಿಸಿದ್ದಾರೆ.
ಸೀಲ್ಡೌನ್ ಪ್ರದೇಶದಲ್ಲಿ ಅಗತ್ಯ ವಸ್ತುಗಳಿಗಾಗಿ ಜನರ ಪರದಾಡುತ್ತಿದ್ದಾರೆ. ಎಸ್ಪಿಎಸ್ ನಗರದ 2ನೇ ಹಂತದಲ್ಲಿ ಕಳೆದ 4 ದಿನದಿಂದ ಹಾಲು, ತರಕಾರಿ, ಆಹಾರ ಸಾಮಾಗ್ರಿಗಳು ದೊರೆಯುತ್ತಿಲ್ಲ. ಹೊರಗಡೆ ಹೋಗಲು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳಿಲ್ಲದೇ ವಯೋವೃದ್ದರು ಹಾಗೂ ಮಕ್ಕಳು ಪರದಾಡುತ್ತಿದ್ದಾರೆ. ಮಕ್ಕಳಿಗೆ ಹಾಲು ಸಿಗದ ಪರಿಸ್ಥಿತಿ ಎದುರಾಗಿದೆ. ನಮಗೆ ಅಗತ್ಯ ವಸ್ತುಗಳನ್ನು ನೀಡಿ, ಇಲ್ಲದಿದ್ದಲ್ಲಿ ಲಾಕ್ಡೌನ್ ತೆರವು ಮಾಡಿ ಹೊರ ಹೋಗಲು ಬಿಡಬೇಕೆಂದು ಆಗ್ರಹಿಸಿದರು.
ತಮ್ಮ ಪ್ರದೇಶದಲ್ಲಿನ ಅಂಗಡಿಗಳನ್ನು ಸಹ ಬಂದ್ ಮಾಡಲಾಗಿದೆ. ಸ್ಥಳೀಯ ಪಾಲಿಕೆ ಸದಸ್ಯರು ಕಿಟ್ ನೀಡುತ್ತಿಲ್ಲ. ಶಾಸಕರು ಹಾಗೂ ಸಂಸದರು ನಮ್ಮ ಕಷ್ಟ ಆಲಿಸಬೇಕು.ನಮಗೆ ನೆರವು ನೀಡಬೇಕು. ಜಿಲ್ಲಾಡಳಿತ ಈ ಕೂಡಲೇ ಅಗತ್ಯವಿರುವ ಆಹಾರ ಸಾಮಗ್ರಿಗಳ ವಿತರಣೆಗೆ ಮುಂದಾಗಬೇಕೆಂದು ಎಸ್ ಪಿಎಸ್ ನಗರದ ನಿವಾಸಿಗಳು ಒತ್ತಾಯಿಸಿದರು. ಎಸ್.ಪಿ.ಎಸ್ ನಗರ, ಜಾಲಿ ನಗರ, ಬಾಷಾ ನಗರ, ಇಮಾಂ ನಗರ, ಕೆಟಿಜೆ ನಗರ, ಇತರೆಡೆ ಸೇರಿ 7 ಏರಿಯಾಗಳು ಈಗ ಕಂಟೈನ್ಮೆಂಟ್ ಝೋನ್ಗಳಾಗಿವೆ.
ಕಾಂಗ್ರೆಸ್ ಮನವಿ: ದಾವಣಗೆರೆಯಲ್ಲಿ ಕೋವಿಡ್ ಪಾಸಿಟಿವ್ ಬಂದಿರುವ ಪ್ರದೇಶಗಳಲ್ಲಿ ಅತ್ಯಂತ ಬಡ ಕುಟುಂಬಗಳು ವಾಸಿಸುತ್ತಿದ್ದಾರೆ.ಆದ್ದರಿಂದ ಕಂಟೈನ್ಮೆಂಟ್ ಝೋನ್ನಲ್ಲಿ ಜನರಿಗೆ ಜಿಲ್ಲಾಡಳಿತದಿಂದ ದವಸಧಾನ್ಯ ಪೂರೈಕೆ ಮಾಡಬೇಕೆಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್.ಹರೀಶ್ ಬಸಾಪುರ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್