ಉದ್ಯೋಗ ಖಾತ್ರಿಯೊಂದಿಗೆ ಅರೆ ವೈದ್ಯಕೀಯ ಅಲ್ಪಾವಧಿ ಕೋರ್ಸ್‌

ಸಮಾಜ ಕಲ್ಯಾಣ ಇಲಾಖೆಯಿಂದ ಹೊಸ ಯೋಜನೆ ; ಪರಿಶಿಷ್ಟ ನಿರುದ್ಯೋಗಿ ಯುವಜನತೆಗೆ ಇದೊಂದು ಸುವರ್ಣಾವಕಾಶ

Team Udayavani, Oct 25, 2022, 7:25 AM IST

ಉದ್ಯೋಗ ಖಾತ್ರಿಯೊಂದಿಗೆ ಅರೆ ವೈದ್ಯಕೀಯ ಅಲ್ಪಾವಧಿ ಕೋರ್ಸ್‌

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ಇದೇ ಪ್ರಥಮ ಬಾರಿಗೆ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಖಾತ್ರಿಯೊಂದಿಗೆ ಪ್ಯಾರಾಮೆಡಿಕಲ್‌ ಕೌಶಲ ತರಬೇತಿ ಮತ್ತು ನಾನ್‌ ಪ್ಯಾರಾಮೆಡಿಕಲ್‌ ಅಲ್ಪಾವಧಿ ಸರ್ಟಿಫಿಕೇಟ್‌ ಕೋರ್ಸ್‌ಗಳಿಗೆ ತರಬೇತಿ ನೀಡಲು ನಿರ್ಧರಿಸಿದೆ.

ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ತರಬೇತಿ ನೀಡಲಾಗುತ್ತಿದೆ. ಪ್ರಸಕ್ತ ವರ್ಷ ರಾಜ್ಯದ 1,500 ನಿರುದ್ಯೋಗಿ ಯುವಕ-ಯುವತಿಯರಿಗೆ ಶೇ.75 ಉದ್ಯೋಗ ಖಾತ್ರಿಯೊಂದಿಗೆ ತರಬೇತಿ ನೀಡಲು ನಿರ್ಧರಿಸಲಾಗಿದ್ದು, 500ಕ್ಕಿಂತ ಹೆಚ್ಚು ಹಾಸಿಗೆ ಹೊಂದಿರುವ ಹಾಗೂ ರಾಷ್ಟ್ರೀಯ ಮಾನ್ಯತೆ ಪಡೆದ ಆಸ್ಪತ್ರೆಗಳ ಮೂಲಕ ವಸತಿ ಸಹಿತವಾಗಿ ತರಬೇತಿ ನೀಡಲು ತೀರ್ಮಾನಿಸಲಾಗಿದೆ.

ನಾನ್‌ ಪ್ಯಾರಾಮೆಡಿಕಲ್‌ ಅಲ್ಪಾವಧಿ ಸರ್ಟಿಫಿಕೇಟ್‌ ಕೋರ್ಸ್‌ಗಳಿಗೆ ಅಭ್ಯರ್ಥಿಗಳನ್ನು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಹಾಗೂ ಪ್ಯಾರಾಮೆಡಿಕಲ್‌ ಕೌಶಲ ತರಬೇತಿಗೆ ಅರೆವೈದ್ಯಕೀಯ ಕೋರ್ಸ್‌ಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ಯಾರಾಮೆಡಿಕಲ್‌ ಅಸಿಸ್ಟೆಂಟ್‌ (ನಾನ್‌ ಪ್ಯಾರಾಮೆಡಿಕಲ್‌) ತರಬೇತಿ ಮೂರು ತಿಂಗಳ ಅವಧಿಯದ್ದಾಗಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾಗಿರಬೇಕು. ಇದರಲ್ಲಿ ಮೂರು ರೀತಿಯ ತರಬೇತಿಗಳಿವೆ.
ಪ್ಯಾರಾಮೆಡಿಕಲ್‌ ಟೆಕ್ನೀಶಿಯನ್‌ (ಪ್ಯಾರಾಮೆಡಿಕಲ್‌ ಕೌಶಲ ತರಬೇತಿ) ತರಬೇತಿ ಸಹ ಮೂರು ತಿಂಗಳ ಅವಧಿಯದ್ದಾಗಿದ್ದು, ಪ್ಯಾರಾಮೆಡಿಕಲ್‌ ಡಿಪ್ಲೊಮಾ ಕೋರ್ಸ್‌ ಪೂರ್ಣಗೊಳಿಸಿರಬೇಕು. ಇದರಲ್ಲಿ ಐದು ರೀತಿಯ ತರಬೇತಿಗಳಿವೆ.

ಆಯ್ಕೆ ವಿಧಾನ ಹೇಗೆ?
ನಿಗದಿತ ಗುರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಾಗ ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ತರಬೇತಿಗೆ ನಿಯೋಜಿಸಲಾಗುತ್ತದೆ. ನಿಗದಿತ ಗುರಿಗೆ ಅನುಗುಣವಾಗಿ ಅರ್ಜಿಗಳು ಬಾರದಿದ್ದರೆ ಅರ್ಜಿಗಳನ್ನು ನೇರವಾಗಿ ಸ್ವೀಕರಿಸಿ, ಅರ್ಹತಾ ಮಾನದಂಡ ಪೂರೈಸಿದವರಿಗೆ ತರಬೇತಿಗೆ ನಿಯೋಜಿಸಲು ಇಲಾಖೆ ಯೋಜನೆ ಹಾಕಿಕೊಂಡಿದೆ. ಆಸಕ್ತ 18ರಿಂದ 40ವರ್ಷದೊಳಗಿನವರು ಅರ್ಜಿ ನಮೂನೆಯನ್ನು ವೆಬ್‌ಸೈಟ್‌:  http://www.sw.kar. nic.in http://www.sw. kar.nic. in ನಿಂದ ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸ್ಕ್ಯಾನ್ ಮಾಡಿ ಈ ಮೇಲ್‌ [email protected] ಮೂಲಕ ಸಲ್ಲಿಸಬೇಕು. ತಾಂತ್ರಿಕ ಸಮಸ್ಯೆ ಕಂಡು ಬಂದರೆ [email protected]ಗೆ ಸಲ್ಲಿಸಬಹುದು. ದೂರವಾಣಿ ಸಂಖ್ಯೆ 080-22207784 ಸಂರ್ಪಕಿಸಲು ಸೂಚಿಸಲಾಗಿದೆ. ಅರ್ಜಿ ಸಲ್ಲಿಸಲು ನ.15ರ ಸಂಜೆ 6 ಗಂಟೆವರೆಗೆ ಅವಕಾಶವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರ ತಿಳಿಸಿದೆ.

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅನುಕೂಲ ಕಲ್ಪಿಸುತ್ತ ಬಂದಿರುವ ಇಲಾಖೆ, ಇದೇ ಮೊದಲ ಬಾರಿಗೆ ಪರಿಶಿಷ್ಟ ಯುವಜನರಿಗೆ ಶೇ.75 ಉದ್ಯೋಗ ಖಾತ್ರಿಯೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ತರಬೇತಿ ನೀಡಿ, ಉದ್ಯೋಗ ಕಲ್ಪಿಸಲು ಯೋಜನೆ ರೂಪಿಸಿದೆ. ಪ.ಜಾತಿ, ಪಂಗಡದ ಯುವಜನತೆ ಆರೋಗ್ಯ ಕ್ಷೇತ್ರದಲ್ಲಿ ಉದ್ಯೋಗಸ್ಥರಾಗಲು ಇದು ಸುವರ್ಣಾವಕಾಶವಾಗಿದೆ.
-ರೇಷ್ಮಾ ಕೌಸರ್‌,
ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ

– ಎಚ್‌.ಕೆ.ನಟರಾಜ

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.