ರೈತ ಆತ್ಮಹತ್ಯೆ
ಸಾಗರ
Team Udayavani, Feb 2, 2021, 3:18 PM IST
ಸಾಗರ: ತಾಲೂಕಿನ ಪಡವಗೋಡು·ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದ·ರೈತ ಉಮೇಶ್ ಎಂ.ಆರ್. ಬಿನ್ರಾಜಶೇಖರಪ್ಪ ಗೌಡ (60) ಕ್ರಿಮಿನಾಶಕಸೇವಿಸಿ ಮೃತಪಟ್ಟ ಘಟನೆ ನಡೆದಿದೆ.ಮರೂರು ಗ್ರಾಮದ ಉಮೇಶ್ಎಂ.ಆರ್. ಅವರು ಮೂರು ಎಕರೆತೋಟ ಮತ್ತು ಕೃಷಿಜಮೀನುಹೊಂದಿದ್ದರು. ಬೆಳೆಗಾಗಿ ರಾಷ್ಟ್ರೀಕೃತಬ್ಯಾಂಕ್, ಸಹಕಾರಸಂಸ್ಥೆ ಹಾಗೂಕೈಗಡ ಸಾಲಮಾಡಿಕೊಂಡಿದ್ದು,ಸಾಲ ತೀರಿಸಲಾಗದೆತೀವ್ರಚಿಂತಾಕ್ರಾಂತರಾಗಿದ್ದರು ಎನ್ನಲಾಗಿದೆ.ಮಂಗಳವಾರ ಬೆಳಗ್ಗೆ ಉಮೇಶ್ಎಂ.ಆರ್. ಅವರು ಮನೆಯಲ್ಲಿ ಇರಲಿಲ್ಲ.ಮನೆಯವರು ಹುಡುಕಿ ನೋಡಿದಾಗಮನೆಯ ಹಿಂಭಾಗದ ಖಾಲಿ ಜಾಗದಲ್ಲಿಎಂ.ಆರ್. ಅವರು ತೀವ್ರಅಸ್ವಸ್ಥಗೊಂಡು ಮಲಗಿದ್ದರು. ತಕ್ಷಣಅವರನ್ನು ಖಾಸಗಿ ವಾಹನದಲ್ಲಿಸಾಗರ ಉಪ ವಿಭಾಗೀಯ ಆಸ್ಪತ್ರೆಗೆಕರೆದುಕೊಂಡು ಬಂದು ಚಿಕಿತ್ಸೆಗೆ ದಾಖಲು
ಮಾಡಲಾಗಿತ್ತು.
ವೈದ್ಯರು ಪ್ರಥಮಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ.ಶಿವಮೊಗ್ಗಕ್ಕೆ ಕರೆದೊಯ್ಯುವಮೊದಲೆ ಉಮೇಶ್ ಮೃತಪಟ್ಟಿದ್ದಾರೆ.
ಮೃತ ಉಮೇಶ್ ಗೌಡ ಅವರು ಪತ್ನಿ,ಓರ್ವ ಪುತ್ರನನ್ನು ಅಗಲಿದ್ದಾರೆ. ಈಸಂಬಂಧ ಮೃತ ಉಮೇಶ್ ಎಂ.ಆರ್.ಅವರ ಪುತ್ರ ಅರ್ಜುನ್ ಗ್ರಾಮಾಂತರಠಾಣೆಗೆ ನೀಡಿದ ದೂರಿನಲ್ಲಿ ತನ್ನ ತಂದೆಕೃಷಿಗಾಗಿ ಬ್ಯಾಂಕ್ ಹಾಗೂ ವಿವಿಧ ಕಡೆಸಾಲ ಮಾಡಿದ್ದರು. ಸಾಲ ತೀರಿಸಲಾಗಿದೆಮಾನಸಿಕವಾಗಿ ನೊಂದು, ವಿಷ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ.ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಓದಿ : ಹುಬ್ಬಳ್ಳಿಯಲ್ಲಿ ACB ಬೇಟೆ: ಲಕ್ಷಾಂತರ ರೂ. ಮೌಲ್ಯದ ಗರಿ ಗರಿ ನೋಟು, ಚಿನ್ನಾಭರಣ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ